ಬ್ರೇಕಿಂಗ್ ನ್ಯೂಸ್
07-04-26 09:52 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಎಪ್ರಿಲ್ 7: ಇರಾನ್ ವಿರುದ್ಧ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಗುಡುಗಿದ್ದಾರೆ. ಇರಾನಿನ ಇಡೀ ನಾಗರಿಕತೆ ಇಂದು ರಾತ್ರಿಗೆ ಕೊನೆಯಾಗಲಿದೆ. ಅದು ಮತ್ತೆಂದೂ ಮರಳುವುದಿಲ್ಲ. ಆ ರೀತಿ ಆಗಲೆಂದು ನಾನು ಬಯಸುವುದಿಲ್ಲ. ಆದರೆ ಅದು ಆಗೇ ಆಗುತ್ತದೆ ಎಂದು ಟ್ರಂಪ್ ತಮ್ಮ ‘ಟ್ರೂತ್ ಸೋಶಿಯಲ್’ ನಲ್ಲಿ ಹೇಳಿದ್ದು ಜಾಗತಿಕವಾಗಿ ಸಂಚಲನ ಮೂಡಿಸಿದೆ.
ಹರ್ಮುಜ್ ಜಲಸಂಧಿ ತೆರೆಯಲು ಮೂರನೇ ಬಾರಿಗೆ ನೀಡಿದ್ದ 48 ಗಂಟೆಗಳ ಗಡುವು ಮಂಗಳವಾರ ರಾತ್ರಿ 8 ಗಂಟೆಗೆ (ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 6:30) ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಟ್ರಂಪ್ ಹೊಸ ಎಚ್ಚರಿಕೆ ಸಂದೇಶ ನೀಡಿದ್ದಾರೆ.
47 ವರ್ಷಗಳ ಸುಲಿಗೆ, ಭ್ರಷ್ಟಾಚಾರ ಮತ್ತು ಸಾವಿನ ಸರಣಿ ಇಂದಿಗೆ ಅಂತ್ಯವಾಗಲಿದೆ ಎಂದು ಹೇಳಿರುವ ಟ್ರಂಪ್, ಮೂಲಭೂತವಾದಿಗಳ ಆಡಳಿತ ಬದಲಿಸಲು ಗಟ್ಟಿ ನಿರ್ಧಾರಕ್ಕೆ ಬಂದಿದ್ದೇವೆ. ಈ ದಿನ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಹೇಳಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲು ಅಥವಾ ಅಮೆರಿಕಾ ಸೂಚಿಸಿದ ಒಪ್ಪಂದಕ್ಕೆ ಸಹಿ ಹಾಕಲು ನಿರಾಕರಿಸಿದರೆ, ಇರಾನ್ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳನ್ನು ಕೇವಲ ನಾಲ್ಕೇ ಗಂಟೆಗಳಲ್ಲಿ ಧ್ವಂಸ ಮಾಡುವುದಾಗಿ ಟ್ರಂಪ್ ಈ ಹಿಂದೆ ಬೆದರಿಕೆ ಹಾಕಿದ್ದರು. ಈ ಮೊದಲು ಮಾರ್ಚ್ 23ರಂದು ಐದು ದಿನ, ಆನಂತರ ಹತ್ತು ದಿನಕ್ಕೆ ಕದನ ವಿರಾಮ ಘೋಷಿಸಲಾಗಿತ್ತು. ಈ ನಡುವೆ, ಇರಾನ್ ಜೊತೆಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಟ್ರಂಪ್ ಹೇಳುತ್ತ ಬಂದಿದ್ದರೂ, ಅವರ ಹೇಳಿಕೆಗಳನ್ನು ಇರಾನ್ ನಾಯಕರು ತಳ್ಳಿಹಾಕಿದ್ದರು.
ಇದರ ಬೆನ್ನಲ್ಲೇ ವಿಶ್ವಸಂಸ್ಥೆಯ ರಾಜತಾಂತ್ರಿಕ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದು, ಇರಾನ್ ಮೇಲೆ ಪರಮಾಣು ದಾಳಿ ನಡೆಯುವ ಸಾಧ್ಯತೆಯಿದೆ ಎಂಬ ಆತಂಕ ಹೊರಹಾಕಿದ್ದರು. ಇದೇ ವೇಳೆ, ಅಮೆರಿಕದ ನಡೆಗೆ ಯುಕೆ ಮತ್ತು ಸ್ಪೇನ್ ವಿರೋಧ ವ್ಯಕ್ತಪಡಿಸಿದ್ದರಿಂದ ಟ್ರಂಪ್ ಸ್ವಲ್ಪ ಮಟ್ಟಿಗೆ ತಣ್ಣಗಾಗಿದ್ದರು. ಆದರೆ ಮತ್ತೆ ಮತ್ತೆ ಎಚ್ಚರಿಕೆ ನೀಡುತ್ತ ಇರಾನ್ ಆಂತರಿಕವಾಗಿ ಕುಸಿಯುವಂತೆ ಮಾಡುತ್ತ ಬಂದಿದ್ದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm