ಬ್ರೇಕಿಂಗ್ ನ್ಯೂಸ್
07-04-26 09:52 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಎಪ್ರಿಲ್ 7: ಇರಾನ್ ವಿರುದ್ಧ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಗುಡುಗಿದ್ದಾರೆ. ಇರಾನಿನ ಇಡೀ ನಾಗರಿಕತೆ ಇಂದು ರಾತ್ರಿಗೆ ಕೊನೆಯಾಗಲಿದೆ. ಅದು ಮತ್ತೆಂದೂ ಮರಳುವುದಿಲ್ಲ. ಆ ರೀತಿ ಆಗಲೆಂದು ನಾನು ಬಯಸುವುದಿಲ್ಲ. ಆದರೆ ಅದು ಆಗೇ ಆಗುತ್ತದೆ ಎಂದು ಟ್ರಂಪ್ ತಮ್ಮ ‘ಟ್ರೂತ್ ಸೋಶಿಯಲ್’ ನಲ್ಲಿ ಹೇಳಿದ್ದು ಜಾಗತಿಕವಾಗಿ ಸಂಚಲನ ಮೂಡಿಸಿದೆ.
ಹರ್ಮುಜ್ ಜಲಸಂಧಿ ತೆರೆಯಲು ಮೂರನೇ ಬಾರಿಗೆ ನೀಡಿದ್ದ 48 ಗಂಟೆಗಳ ಗಡುವು ಮಂಗಳವಾರ ರಾತ್ರಿ 8 ಗಂಟೆಗೆ (ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 6:30) ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಟ್ರಂಪ್ ಹೊಸ ಎಚ್ಚರಿಕೆ ಸಂದೇಶ ನೀಡಿದ್ದಾರೆ.
47 ವರ್ಷಗಳ ಸುಲಿಗೆ, ಭ್ರಷ್ಟಾಚಾರ ಮತ್ತು ಸಾವಿನ ಸರಣಿ ಇಂದಿಗೆ ಅಂತ್ಯವಾಗಲಿದೆ ಎಂದು ಹೇಳಿರುವ ಟ್ರಂಪ್, ಮೂಲಭೂತವಾದಿಗಳ ಆಡಳಿತ ಬದಲಿಸಲು ಗಟ್ಟಿ ನಿರ್ಧಾರಕ್ಕೆ ಬಂದಿದ್ದೇವೆ. ಈ ದಿನ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಹೇಳಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲು ಅಥವಾ ಅಮೆರಿಕಾ ಸೂಚಿಸಿದ ಒಪ್ಪಂದಕ್ಕೆ ಸಹಿ ಹಾಕಲು ನಿರಾಕರಿಸಿದರೆ, ಇರಾನ್ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳನ್ನು ಕೇವಲ ನಾಲ್ಕೇ ಗಂಟೆಗಳಲ್ಲಿ ಧ್ವಂಸ ಮಾಡುವುದಾಗಿ ಟ್ರಂಪ್ ಈ ಹಿಂದೆ ಬೆದರಿಕೆ ಹಾಕಿದ್ದರು. ಈ ಮೊದಲು ಮಾರ್ಚ್ 23ರಂದು ಐದು ದಿನ, ಆನಂತರ ಹತ್ತು ದಿನಕ್ಕೆ ಕದನ ವಿರಾಮ ಘೋಷಿಸಲಾಗಿತ್ತು. ಈ ನಡುವೆ, ಇರಾನ್ ಜೊತೆಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಟ್ರಂಪ್ ಹೇಳುತ್ತ ಬಂದಿದ್ದರೂ, ಅವರ ಹೇಳಿಕೆಗಳನ್ನು ಇರಾನ್ ನಾಯಕರು ತಳ್ಳಿಹಾಕಿದ್ದರು.
ಇದರ ಬೆನ್ನಲ್ಲೇ ವಿಶ್ವಸಂಸ್ಥೆಯ ರಾಜತಾಂತ್ರಿಕ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದು, ಇರಾನ್ ಮೇಲೆ ಪರಮಾಣು ದಾಳಿ ನಡೆಯುವ ಸಾಧ್ಯತೆಯಿದೆ ಎಂಬ ಆತಂಕ ಹೊರಹಾಕಿದ್ದರು. ಇದೇ ವೇಳೆ, ಅಮೆರಿಕದ ನಡೆಗೆ ಯುಕೆ ಮತ್ತು ಸ್ಪೇನ್ ವಿರೋಧ ವ್ಯಕ್ತಪಡಿಸಿದ್ದರಿಂದ ಟ್ರಂಪ್ ಸ್ವಲ್ಪ ಮಟ್ಟಿಗೆ ತಣ್ಣಗಾಗಿದ್ದರು. ಆದರೆ ಮತ್ತೆ ಮತ್ತೆ ಎಚ್ಚರಿಕೆ ನೀಡುತ್ತ ಇರಾನ್ ಆಂತರಿಕವಾಗಿ ಕುಸಿಯುವಂತೆ ಮಾಡುತ್ತ ಬಂದಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm