ಬ್ರೇಕಿಂಗ್ ನ್ಯೂಸ್
09-04-26 07:43 pm HK News Staffer ದೇಶ - ವಿದೇಶ
ಟೆಹ್ರಾನ್, ಎಪ್ರಿಲ್ 9: ಮಧ್ಯಪ್ರಾಚ್ಯದಲ್ಲಿ ತಾತ್ಕಾಲಿಕ ಕದನ ವಿರಾಮಕ್ಕೆ ಇರಾನ್ -ಅಮೆರಿಕ ಸಮ್ಮತಿಸಿದರೂ ಹರ್ಮುಜ್ ಜಲಸಂಧಿಯ ಬಿಕ್ಕಟ್ಟು ಏಷ್ಯನ್ ದೇಶಗಳಿಗೆ ದೊಡ್ಡದಾಗಿ ತಟ್ಟುವ ಭೀತಿ ಉಂಟಾಗಿದೆ. ಜಲಸಂಧಿಯಲ್ಲಿ ಹಾದು ಹೋಗುವ ಪ್ರತಿ ನೌಕೆಗೆ 2 ದಶಲಕ್ಷ ಡಾಲರ್ (ಸುಮಾರು 18 ಕೋಟಿ ರೂ.) ಟೋಲ್ ವಿಧಿಸುವುದಾಗಿ ಇರಾನ್ ಘೋಷಿಸಿದೆ. ಇದೇ ವೇಳೆ, ಅಮೆರಿಕವೂ ಸುಂಕದಲ್ಲಿ ಪಾಲು ಕೇಳಿದ್ದು ಯುದ್ಧ ನಷ್ಟ ಭರಿಸಿಕೊಳ್ಳಲು ಮುಂದಾಗಿದೆ.
ಯುದ್ಧದ ಸಮಯದಲ್ಲಿ ಭಾರತ ಸೇರಿದಂತೆ ಕೆಲವೇ ಮಿತ್ರ ದೇಶಗಳನ್ನು ಹೊರತುಪಡಿಸಿ ಹರ್ಮುಜ್ ಜಲಸಂಧಿಯನ್ನು ಇರಾನ್ ಬಂದ್ ಮಾಡಿತ್ತು. ಆದರೆ ಅಮೆರಿಕ ಮತ್ತು ಮಿತ್ರ ರಾಷ್ಟ್ರಗಳಿಗೆ ಇದೇ ದೊಡ್ಡ ತಲೆನೋವಾಗಿತ್ತು. ಆನಂತರ, ಅಮೆರಿಕ ಮುಂದಿಟ್ಟ ಒಪ್ಪಂದದ ಷರತ್ತಿನಂತೆ ಹರ್ಮುಜ್ ಜಲಸಂಧಿಯನ್ನು ತಾತ್ಕಾಲಿಕವಾಗಿ ಮುಕ್ತಗೊಳಿಸಲು ಇರಾನ್ ಒಪ್ಪಿದೆ. ಆದರೆ, ಟೋಲ್ ವಿಧಿಸುವ ಮೂಲಕ ಹಣ ಸಂಗ್ರಹಿಸಲಿದ್ದು, ಯುದ್ಧದಿಂದ ಉಂಟಾದ ನಷ್ಟ ಭರ್ತಿಗೆ ಇದು ಅನಿವಾರ್ಯ ಎಂದು ಹೇಳಿಕೊಂಡಿದೆ.
ಇರಾನ್ ಟೋಲ್ ಪ್ರಸ್ತಾಪಕ್ಕೆ ಭಾರತ, ಒಮಾನ್ ಸೇರಿದಂತೆ ಹೆಚ್ಚಿನ ದೇಶಗಳಿಂದ ವಿರೋಧವೂ ವ್ಯಕ್ತವಾಗಿದೆ. ಎಲ್ಲ ದೇಶಗಳಿಗೆ ಟೋಲ್ ವಿಧಿಸಿದರೆ ಭಾರತಕ್ಕೆ ಮಾತ್ರ ದುಬಾರಿಯಾಗಿ ಪರಿಣಮಿಸಲಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಕೂಡ ಟೋಲ್ ಪ್ರಸ್ತಾಪಕ್ಕೆ ಪರೋಕ್ಷವಾಗಿ ಒಪ್ಪಿಗೆ ಸೂಚಿಸಿದ್ದು ಜೊತೆಗೆ ತನಗೂ ಪಾಲು ನೀಡುವಂತೆ ಕೇಳಿದ್ದಾರೆ.
ದಿನಕ್ಕೆ 200 ಕೋಟಿ ಹೊರೆ
ಹರ್ಮುಜ್ ವಿಷಯದಲ್ಲಿ ಇರಾನ್ ತನ್ನ ನಿಯಮವನ್ನು ಎಲ್ಲಾ ದೇಶಗಳಿಗೂ ಅನ್ವಯಿಸಿದರೆ, ಭಾರತಕ್ಕೆ ತೈಲ ಆಮದು ದುಬಾರಿಯಾಗಲಿದೆ. ಹರ್ಮುಜ್ ಮೂಲಕ ಇತರೆ ಸರಕುಗಳ ಸಾಗಣೆ ವೆಚ್ಚವೂ ದುಪ್ಪಟ್ಟಾಗಲಿದೆ. ಅಂದಾಜು ಭಾರತಕ್ಕೆ 200 ಕೋಟಿ ರೂ. ಹೊರೆಯಾಗಲಿದೆ. ಭಾರತದ ಶೇ. 50ರಷ್ಟು ಕಚ್ಚಾತೈಲ, 80% ಎಲ್ಪಿಜಿ ಹರ್ಮುಜ್ ಮೂಲಕವೇ ಬರುತ್ತಿದೆ. ನಿತ್ಯ 10-12 ಟ್ಯಾಂಕರ್ಗಳು ಜಲಸಂಧಿಯಿಂದ ಸಾಗುವುದರಿಂದ ದಿನಕ್ಕೆ ಪ್ರತಿ ನೌಕೆಗೆ 18 ಕೋಟಿ ರೂ.ನಂತೆ 180-200 ಕೋಟಿ ರೂ.ಟೋಲ್ ಭಾರ ಬೀಳಲಿದೆ. ಸಾಗಣೆ ವೆಚ್ಚದಲ್ಲಿ ಏರಿಕೆಯಿಂದಾಗಿ ಪೆಟ್ರೋಲ್, ಡೀಸೆಲ್, ಎಲ್ಪಿಜಿ ಬೆಲೆಯ ಹೊರೆಯನ್ನು ಜನರ ಮೇಲೆ ಹೊರಿಸುವ ಸಾಧ್ಯತೆಯಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm