ಬ್ರೇಕಿಂಗ್ ನ್ಯೂಸ್
10-04-26 11:05 pm HK News Staffer ದೇಶ - ವಿದೇಶ
ಟೆಲ್ ಅವೀವ್, ಎಪ್ರಿಲ್ 10: ಅಮೆರಿಕ - ಇರಾನ್ ಮಧ್ಯೆ ಶಾಂತಿ ಮಾತುಕತೆಗೆ ಮಧ್ಯಸ್ಥಿಕೆ ವಹಿಸಲು ಮುಂದಾಗಿರುವ ಪಾಕಿಸ್ತಾನ ವಿರುದ್ಧ ಇಸ್ರೇಲ್ ಕಿಡಿಕಾರಿದೆ. ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಅವರು, ಇಸ್ರೇಲ್ ಕದನ ವಿರಾಮ ಉಲ್ಲಂಘಿಸಿ ಲೆಬನಾನ್ ಮೇಲೆ ದಾಳಿ ನಡೆಸಿದ್ದಕ್ಕೆ ಎಲ್ಲ ನಾಶವಾಗಲಿ, ಅದು ಕ್ಯಾನ್ಸರ್ ದೇಶ ಎಂದು ಟೀಕಿಸಿದ್ದಕ್ಕೆ ಇಸ್ರೇಲ್ ತೀವ್ರ ಕಿಡಿಕಾರಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ‘ಇಸ್ರೇಲ್ ವಿನಾಶಕ್ಕೆ ಪಾಕ್ ರಕ್ಷಣಾ ಸಚಿವರು ಕರೆ ನೀಡಿರುವುದು “ಅಸ್ವೀಕಾರಾರ್ಹ” ಎಂದು ಖಂಡಿಸಿದ್ದಾರೆ. ಯಾವುದೇ ದೇಶ ಅಥವಾ ಸರ್ಕಾರದಿಂದ ಇಂತಹ ಹೇಳಿಕೆಯನ್ನು ಸಹಿಸಲು ಸಾಧ್ಯವಿಲ್ಲ. ಅದರಲ್ಲೂ ಶಾಂತಿ ಮಧ್ಯಸ್ಥಿಕೆಯ ಪಾತ್ರ ವಹಿಸುವ ದೇಶ ಇಂತಹ ಪದ ಬಳಕೆ ಮಾಡುವುದು ಸರಿಯಲ್ಲ. ಇಸ್ರೇಲ್ ತನ್ನ ಭದ್ರತೆ ಮತ್ತು ಅಸ್ತಿತ್ವವನ್ನು ರಕ್ಷಿಸಿಕೊಳ್ಳಲು ಯಾವ ಕ್ರಮಕ್ಕೂ ಹಿಂದೇಟು ಹಾಕುವುದಿಲ್ಲ ಎಂದು ಗುಡುಗಿದ್ದಾರೆ.
ಇದಲ್ಲದೆ, ಇಸ್ರೇಲ್ ವಿದೇಶಾಂಗ ಸಚಿವ ಗಿಡಿಯಾನ್ ಸಾರ್ ಕೂಡ ಪಾಕಿಸ್ತಾನದ ಹೇಳಿಕೆಗಳನ್ನು ತೀವ್ರವಾಗಿ ವಿರೋಧಿಸಿದ್ದು ಇಂತಹ ಭಾಷೆ ದ್ವೇಷವನ್ನು ಉತ್ತೇಜಿಸುವಂತಾಗಿದೆ ಎಂದು ಹೇಳಿದ್ದಾರೆ. “ಕ್ಯಾನ್ಸರ್ ರಾಜ್ಯ” ಎಂಬ ಪದ ಬಳಕೆ ಇಸ್ರೇಲ್ನ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಿದೆ ಎಂದು ಕಿಡಿಕಾರಿದ್ದಾರೆ. ಶಾಂತಿ ಮಾತುಕತೆ ನಡೆಸುವ ದೇಶದ ಜವಾಬ್ದಾರಿಯುತ ಸಚಿವರು ಇಂತಹ ಭಾಷೆ ಬಳಸುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಖವಾಜಾ ಆಸಿಫ್ ಇಸ್ರೇಲ್ ವಿರುದ್ಧ ಸಿಟ್ಟು ಹೊರಹಾಕುವುದು ಇದೇ ಮೊದಲೇನಲ್ಲ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಮಾನವಕುಲದ ಅತ್ಯಂತ ದೊಡ್ಡ ಅಪರಾಧಿ. ಅಮೆರಿಕ ವೆನೆಜುವೆಲಾದ ಅಧ್ಯಕ್ಷರನ್ನು ಸೆರೆಹಿಡಿದಂತೆಯೇ ನೆತನ್ಯಾಹು ಅವರನ್ನು ಅಪಹರಿಸಿ ಅಂತರಾಷ್ಟ್ರೀಯ ನ್ಯಾಯಾಲಯಕ್ಕೆ ಒಪ್ಪಿಸಬೇಕು ಎಂದು ಅವರು ಈ ಹಿಂದೆ ಆಗ್ರಹಿಸಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm