ಬ್ರೇಕಿಂಗ್ ನ್ಯೂಸ್
12-04-26 10:59 pm HK News Desk ದೇಶ - ವಿದೇಶ
ವಾಷಿಂಗ್ಟನ್, ಎಪ್ರಿಲ್ 12: ಇರಾನ್ ಜೊತೆಗಿನ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಪ್ರಕಟಣೆ ನೀಡಿದ್ದು, ಹೋರ್ಮುಜ್ ಜಲಸಂಧಿ ಮೂಲಕ ತೆರಳುವ ಎಲ್ಲ ಹಡಗುಗಳನ್ನು ಅಮೆರಿಕ ನೌಕಾಪಡೆ ತಡೆಹಿಡಿಯಲಿದೆ ಎಂದು ತಿಳಿಸಿದ್ದಾರೆ. ಈ ಕುರಿತ ಪೋಸ್ಟ್ನಲ್ಲಿ, ಇತ್ತೀಚಿನ ಮಾತುಕತೆಯಲ್ಲಿ ಬಹುತೇಕ ವಿಷಯಗಳು ಬಗೆಹರಿದಿದ್ದರೂ, “ನಿಜವಾಗಿ ಅಗತ್ಯವಾಗಿದ್ದ ಅಣ್ವಸ್ತ್ರ ಸಂಬಂಧಿತ ವಿಷಯ ಮಾತ್ರ ಬಗೆಹರಿದಿಲ್ಲ” ಎಂದು ಹೇಳಿದ್ದಾರೆ.
ಇರಾನ್ ಹೋರ್ಮುಜ್ ಜಲಸಂಧಿಯಲ್ಲಿ ಸಮುದ್ರ ಸ್ಫೋಟಕಗಳನ್ನು (ಮೈನ್ಸ್) ಅಳವಡಿಸಿರಬಹುದೆಂಬ ಸೂಚನೆ ನೀಡಿ ಅಸ್ಥಿರತೆ ಸೃಷ್ಟಿಸುತ್ತಿದೆ ಎಂದು ಅವರು ಆರೋಪಿಸಿದ್ದು, ಇದನ್ನು “ಜಗತ್ತಿನ ಮೇಲೆ ನಡೆಯುತ್ತಿರುವ ಬಲವಂತದ ವಸೂಲಿ” ಎಂದು ವರ್ಣಿಸಿದ್ದಾರೆ. ಇರಾನ್ಗೆ ಶುಲ್ಕ ಪಾವತಿಸಿರುವ ಪ್ರತಿ ಹಡಗನ್ನೂ ಪತ್ತೆಹಚ್ಚಿ ತಡೆದು ಪರಿಶೀಲಿಸಲು ನಮ್ಮ ನೌಕಾಪಡೆಗೆ ಆದೇಶಿಸಿದ್ದೇನೆ. ಅನಧಿಕೃತ ಶುಲ್ಕವನ್ನು ಪಾವತಿಸಿದ ಯಾರಿಗೂ ಮುಕ್ತ ಸಮುದ್ರದಲ್ಲಿ ಸುರಕ್ಷಿತ ಸಂಚಾರದ ಹಕ್ಕು ಇರುವುದಿಲ್ಲ. ಇರಾನ್ ಹೋರ್ಮುಜ್ ಜಲಸಂಧಿಯಲ್ಲಿ ಅಳವಡಿಸಿರುವ ಮೈನ್ಸ್ಗಳನ್ನು ನಾಶಪಡಿಸುವ ಕಾರ್ಯವನ್ನೂ ಮಾಡುತ್ತೇವೆ ಎಂದಿದ್ದಾರೆ.
ನಮ್ಮ ಮೇಲೆ ಅಥವಾ ಇತರೇ ಹಡಗುಗಳ ಮೇಲೆ ಗುಂಡು ಹಾರಿಸುವ ಯಾವುದೇ ಇರಾನಿಯನ್ನೂ ಸಂಪೂರ್ಣವಾಗಿ ನಾಶ ಮಾಡಲಾಗುತ್ತದೆ. ಈಗಾಗಲೇ ತಮ್ಮ ದೇಶವನ್ನು ಹಾಳು ಮಾಡಿರುವ ಈ ಪರಿಸ್ಥಿತಿಗೆ ತೆರೆ ಎಳೆಯುವ ಮಾರ್ಗವನ್ನು ಇರಾನ್ ಇತರರಿಗಿಂತ ಹೆಚ್ಚು ಚೆನ್ನಾಗಿ ತಿಳಿದಿದೆ” ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಇರಾನ್ಗೆ ಶುಲ್ಕ ಪಾವತಿಸುತ್ತಿದೆ ಎಂದು ಶಂಕೆ ಇರುವ ಹಡಗುಗಳನ್ನು ಅಮೆರಿಕದ ಪಡೆಗಳು ತಡೆದು ಪರಿಶೀಲಿಸಲಿದೆ, ಹಾಗೆಯೇ ಆ ಜಲಮಾರ್ಗದಲ್ಲಿ ಅಳವಡಿಸಲಾಗಿದೆ ಎಂದು ಹೇಳಲಾಗಿರುವ ಸ್ಫೋಟಕಗಳನ್ನು ತೆರವುಗೊಳಿಸುವುದಾಗಿ ಟ್ರಂಪ್ ಹೇಳಿದ್ದಾರೆ. ಯಾವುದೇ ವೈರತ್ವದ ಕ್ರಮ ನಡೆದರೆ ಕಠಿಣ ಸೈನಿಕ ಪ್ರತೀಕಾರ ಎದುರಾಗಲಿದೆ ಎಂದು ಅವರು ಎಚ್ಚರಿಸಿದರು. “ಅವರ ನೌಕಾಪಡೆ, ವಾಯುಪಡೆ ನಾಶವಾಗಿದೆ. ವಾಯು ರಕ್ಷಣಾ ವ್ಯವಸ್ಥೆ ಮತ್ತು ರಾಡಾರ್ಗಳು ಪ್ರಯೋಜನ ಕಳೆದುಕೊಂಡಿವೆ. ಖೋಮೇನಿ ಮತ್ತು ಅವರ ‘ನಾಯಕರು’ ಬಹುತೇಕ ಸತ್ತಿದ್ದಾರೆ. ಇವೆಲ್ಲದಕ್ಕೂ ಅವರ ಅಣ್ವಸ್ತ್ರದ ಆಸೆಯೇ ಕಾರಣವಾಗಿದೆ.
ಇರಾನ್ ಮೇಲಿನ ನಿಷೇಧ ಕ್ರಮ ಶೀಘ್ರದಲ್ಲೇ ಆರಂಭವಾಗಲಿದ್ದು ಇತರ ದೇಶಗಳೂ ಇದರಲ್ಲಿ ಭಾಗಿಯಾಗಲಿವೆ. ಬಲವಂತದ (ಎಕ್ಸ್ಟಾರ್ಷನ್) ಮೂಲಕ ಇರಾನ್ ಲಾಭ ಪಡೆಯಲು ಅವಕಾಶ ನೀಡುವುದಿಲ್ಲ. ಅವರಿಗೆ ಹಣ ಬೇಕು, ಅದಕ್ಕಿಂತ ಮುಖ್ಯವಾಗಿ ಅಣ್ವಸ್ತ್ರ ಸಾಮರ್ಥ್ಯ ಬೇಕು. ಸೂಕ್ತ ಸಮಯದಲ್ಲಿ ನಾವು ಸಂಪೂರ್ಣ ಸಜ್ಜುಗೊಂಡಿದ್ದೇವೆ. ನಮ್ಮ ಸೈನ್ಯ ಇರಾನ್ನ ಉಳಿದಿರುವ ಅಲ್ಪ ಶಕ್ತಿಯನ್ನೂ ಸಂಪೂರ್ಣವಾಗಿ ನಾಶಮಾಡಲಿದೆ ಎಂದು ಡೊನಾಲ್ಡ್ ಟ್ರಂಪ್ ತಮ್ಮ ಪೋಸ್ಟ್ನಲ್ಲಿ ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm