ಬ್ರೇಕಿಂಗ್ ನ್ಯೂಸ್
13-04-26 10:35 pm HK News Staffer ದೇಶ - ವಿದೇಶ
ಮುಂಬೈ, ಎಪ್ರಿಲ್ 13: ಬಹುರಾಷ್ಟ್ರೀಯ ಕಂಪನಿ ಟಿಸಿಎಸ್ ನಲ್ಲಿ ಹೈಫೈ ಲವ್ ಜಿಹಾದ್, ಮತಾಂತರ, ಸೆಕ್ಸ್ ದಂಧೆ ನಡೆಯುತ್ತಿರುವ ಗಂಭೀರ ಆರೋಪ ಕೇಳಿಬಂದಿದ್ದು ಮಹಾರಾಷ್ಟ್ರ ಪೊಲೀಸರು ಘಟನೆ ಸಂಬಂಧಿಸಿ 9 ಪ್ರತ್ಯೇಕ ಎಫ್ಐಆರ್ ದಾಖಲಿಸಿದ್ದಾರೆ. ಅಲ್ಲದೆ, ಕಂಪನಿಯ ಎಚ್ಆರ್ ಮ್ಯಾನೇಜರ್ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದಾರೆ.
ಟಿಸಿಎಸ್ ಕಂಪನಿಯ ನಾಸಿಕ್ ಕಚೇರಿಯಲ್ಲಿ ಇಂತಹ ಆರೋಪ ಕೇಳಿಬಂದಿದ್ದು, ಹಲವಾರು ಟೆಕ್ಕಿಗಳು ತಮ್ಮನ್ನು ಬೀಫ್ ತಿನ್ನುವಂತೆ ಪೀಡಿಸಿರುವುದು, ನಮಾಜ್ ಮಾಡುವಂತೆ ಒತ್ತಡ ಹೇರಿರುವುದು, ಸೆಕ್ಸ್ ದಂಧೆಗೆ ಬಳಸಿ ಮತಾಂತರಕ್ಕೆ ಯತ್ನಿಸಿರುವ ಬಗ್ಗೆ ಕಂಪನಿಯ ಹಿರಿಯ ಸಿಬಂದಿ ಬಗ್ಗೆ ಆರೋಪ ಮಾಡಿದ್ದಾರೆ. ಸಂಸ್ಥೆಯ ಉದ್ಯೋಗಿಗಳು ಹಿರಿಯ ಮುಸ್ಲಿಂ ಸಹೋದ್ಯೋಗಿಗಳು ನಡೆಸುತ್ತಿರುವ ಕಿರುಕುಳದ ಬಗ್ಗೆ ಪದೇ ಪದೇ ದೂರಿತ್ತಿದ್ದರೂ ಎಚ್ಆರ್ ಮ್ಯಾನೇಜರ್ ನಿರ್ಲಕ್ಷ್ಯ ವಹಿಸಿದ್ದಾನೆ. ಇದಕ್ಕಾಗಿ ಎಚ್ಆರ್ ವಿಭಾಗದ ಅಸಿಸ್ಟೆಂಟ್ ಮ್ಯಾನೇಜರ್ ನನ್ನು ಪೊಲೀಸರು ಬಂಧಿಸಿದ್ದಾರೆ.


ಹೊಸತಾಗಿ ಕೆಲಸ ಕೇಳಿಕೊಂಡು ಬಂದ ಯುವತಿಯರನ್ನು ರಾಕೆಟ್ ಗೆ ಬಳಸುತ್ತಿದ್ದು, ಅವರನ್ನು ಕೆಲಸ ತೆಗೆಸಿಕೊಡುವ ಭರವಸೆ ಕೊಟ್ಟು ದುರ್ಬಳಕೆ ಮಾಡುತ್ತಿದ್ದರು. ಅಲ್ಲದೆ, ಅವರ ಫೋಟೋ, ವಿಡಿಯೋ ತೆಗೆದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದರು. ಎಚ್ಆರ್ ಮ್ಯಾನೇಜರ್ ನಿರ್ಲಕ್ಷ್ಯ ವಹಿಸಿದ್ದು ಪದೇ ಪದೇ ಕೃತ್ಯ ಮರುಕಳಿಸಲು ಕಾರಣವಾಗಿದೆ. ಕೃತ್ಯದಲ್ಲಿ ಮಹಿಳಾ ಉದ್ಯೋಗಿಗಳು ಕೂಡ ತೊಡಗಿಸಿದ್ದು, ಕೃತ್ಯ ಬಯಲಾಗುತ್ತಲೇ ತಲೆಮರೆಸಿಕೊಂಡಿದ್ದಾರೆ ಎಂದು ಎಸಿಪಿ ಸಂದೀಪ್ ಮಿಟ್ಕೆ ತಿಳಿಸಿದ್ದಾರೆ.
ನಾಶಿಕ್ ಜಿಲ್ಲಾಧಿಕಾರಿ ಆಯುಷ್ ಪ್ರಸಾದ್ ಲೈಂಗಿಕ ದೌರ್ಜನ್ಯ ವಿರೋಧಿ ಕಾಯ್ದೆಯಡಿ ತನಿಖೆಗೆ ಆದೇಶ ಮಾಡಿದ್ದಾರೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ಸರಕಾರ ತನಿಖೆಗೆ ವಿಶೇಷ ತಂಡವನ್ನು ನೇಮಕ ಮಾಡಿದೆ. ವಿಷಯ ಬೆಳಕಿಗೆ ಬರುತ್ತಲೇ ಆರೋಪ ಹೊತ್ತ ಹಿರಿಯ ಸಿಬಂದಿಯನ್ನು ಟಿಸಿಎಸ್ ಕಂಪನಿ ಕೆಲಸದಿಂದ ತೆಗೆದುಹಾಕಿದೆ.
ಕೆಲವು ಸೀನಿಯರ್ ಉದ್ಯೋಗಿಗಳು ಹೇಳುವ ಪ್ರಕಾರ, ಇಂತಹ ಸೆಕ್ಸ್ ದಂಧೆ ಎಲ್ಲ ಕಡೆಯೂ ಆಗುತ್ತದೆ, ಆದರೆ ಇಲ್ಲಿ ಮಹಿಳಾ ಉದ್ಯೋಗಿಗಳನ್ನು ಬೇರೆ ಬೇರೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯಕ್ಕೆ ಬಳಸಿಕೊಳ್ಳಲಾಗಿದೆ. ಆನಂತರ, ಅವರನ್ನು ಮತಾಂತರಕ್ಕೆ ಪೀಡಿಸಿದ್ದಾರೆ. ಹಿಂದು ದೇವರನ್ನು ನಿಂದಿಸಿ ಅಲ್ಲಾನೊಬ್ಬನೇ ದೇವರು ಎಂದು ಹೇಳುತ್ತ, ಅಲ್ಲಾನನ್ನು ಪೂಜಿಸಲು ಒತ್ತಾಯಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪಗಳಿದ್ದು, ಮಹಾರಾಷ್ಟ್ರ ಸರಕಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm