ಬ್ರೇಕಿಂಗ್ ನ್ಯೂಸ್
13-04-26 10:35 pm HK News Staffer ದೇಶ - ವಿದೇಶ
ಮುಂಬೈ, ಎಪ್ರಿಲ್ 13: ಬಹುರಾಷ್ಟ್ರೀಯ ಕಂಪನಿ ಟಿಸಿಎಸ್ ನಲ್ಲಿ ಹೈಫೈ ಲವ್ ಜಿಹಾದ್, ಮತಾಂತರ, ಸೆಕ್ಸ್ ದಂಧೆ ನಡೆಯುತ್ತಿರುವ ಗಂಭೀರ ಆರೋಪ ಕೇಳಿಬಂದಿದ್ದು ಮಹಾರಾಷ್ಟ್ರ ಪೊಲೀಸರು ಘಟನೆ ಸಂಬಂಧಿಸಿ 9 ಪ್ರತ್ಯೇಕ ಎಫ್ಐಆರ್ ದಾಖಲಿಸಿದ್ದಾರೆ. ಅಲ್ಲದೆ, ಕಂಪನಿಯ ಎಚ್ಆರ್ ಮ್ಯಾನೇಜರ್ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದಾರೆ.
ಟಿಸಿಎಸ್ ಕಂಪನಿಯ ನಾಸಿಕ್ ಕಚೇರಿಯಲ್ಲಿ ಇಂತಹ ಆರೋಪ ಕೇಳಿಬಂದಿದ್ದು, ಹಲವಾರು ಟೆಕ್ಕಿಗಳು ತಮ್ಮನ್ನು ಬೀಫ್ ತಿನ್ನುವಂತೆ ಪೀಡಿಸಿರುವುದು, ನಮಾಜ್ ಮಾಡುವಂತೆ ಒತ್ತಡ ಹೇರಿರುವುದು, ಸೆಕ್ಸ್ ದಂಧೆಗೆ ಬಳಸಿ ಮತಾಂತರಕ್ಕೆ ಯತ್ನಿಸಿರುವ ಬಗ್ಗೆ ಕಂಪನಿಯ ಹಿರಿಯ ಸಿಬಂದಿ ಬಗ್ಗೆ ಆರೋಪ ಮಾಡಿದ್ದಾರೆ. ಸಂಸ್ಥೆಯ ಉದ್ಯೋಗಿಗಳು ಹಿರಿಯ ಮುಸ್ಲಿಂ ಸಹೋದ್ಯೋಗಿಗಳು ನಡೆಸುತ್ತಿರುವ ಕಿರುಕುಳದ ಬಗ್ಗೆ ಪದೇ ಪದೇ ದೂರಿತ್ತಿದ್ದರೂ ಎಚ್ಆರ್ ಮ್ಯಾನೇಜರ್ ನಿರ್ಲಕ್ಷ್ಯ ವಹಿಸಿದ್ದಾನೆ. ಇದಕ್ಕಾಗಿ ಎಚ್ಆರ್ ವಿಭಾಗದ ಅಸಿಸ್ಟೆಂಟ್ ಮ್ಯಾನೇಜರ್ ನನ್ನು ಪೊಲೀಸರು ಬಂಧಿಸಿದ್ದಾರೆ.


ಹೊಸತಾಗಿ ಕೆಲಸ ಕೇಳಿಕೊಂಡು ಬಂದ ಯುವತಿಯರನ್ನು ರಾಕೆಟ್ ಗೆ ಬಳಸುತ್ತಿದ್ದು, ಅವರನ್ನು ಕೆಲಸ ತೆಗೆಸಿಕೊಡುವ ಭರವಸೆ ಕೊಟ್ಟು ದುರ್ಬಳಕೆ ಮಾಡುತ್ತಿದ್ದರು. ಅಲ್ಲದೆ, ಅವರ ಫೋಟೋ, ವಿಡಿಯೋ ತೆಗೆದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದರು. ಎಚ್ಆರ್ ಮ್ಯಾನೇಜರ್ ನಿರ್ಲಕ್ಷ್ಯ ವಹಿಸಿದ್ದು ಪದೇ ಪದೇ ಕೃತ್ಯ ಮರುಕಳಿಸಲು ಕಾರಣವಾಗಿದೆ. ಕೃತ್ಯದಲ್ಲಿ ಮಹಿಳಾ ಉದ್ಯೋಗಿಗಳು ಕೂಡ ತೊಡಗಿಸಿದ್ದು, ಕೃತ್ಯ ಬಯಲಾಗುತ್ತಲೇ ತಲೆಮರೆಸಿಕೊಂಡಿದ್ದಾರೆ ಎಂದು ಎಸಿಪಿ ಸಂದೀಪ್ ಮಿಟ್ಕೆ ತಿಳಿಸಿದ್ದಾರೆ.
ನಾಶಿಕ್ ಜಿಲ್ಲಾಧಿಕಾರಿ ಆಯುಷ್ ಪ್ರಸಾದ್ ಲೈಂಗಿಕ ದೌರ್ಜನ್ಯ ವಿರೋಧಿ ಕಾಯ್ದೆಯಡಿ ತನಿಖೆಗೆ ಆದೇಶ ಮಾಡಿದ್ದಾರೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ಸರಕಾರ ತನಿಖೆಗೆ ವಿಶೇಷ ತಂಡವನ್ನು ನೇಮಕ ಮಾಡಿದೆ. ವಿಷಯ ಬೆಳಕಿಗೆ ಬರುತ್ತಲೇ ಆರೋಪ ಹೊತ್ತ ಹಿರಿಯ ಸಿಬಂದಿಯನ್ನು ಟಿಸಿಎಸ್ ಕಂಪನಿ ಕೆಲಸದಿಂದ ತೆಗೆದುಹಾಕಿದೆ.
ಕೆಲವು ಸೀನಿಯರ್ ಉದ್ಯೋಗಿಗಳು ಹೇಳುವ ಪ್ರಕಾರ, ಇಂತಹ ಸೆಕ್ಸ್ ದಂಧೆ ಎಲ್ಲ ಕಡೆಯೂ ಆಗುತ್ತದೆ, ಆದರೆ ಇಲ್ಲಿ ಮಹಿಳಾ ಉದ್ಯೋಗಿಗಳನ್ನು ಬೇರೆ ಬೇರೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯಕ್ಕೆ ಬಳಸಿಕೊಳ್ಳಲಾಗಿದೆ. ಆನಂತರ, ಅವರನ್ನು ಮತಾಂತರಕ್ಕೆ ಪೀಡಿಸಿದ್ದಾರೆ. ಹಿಂದು ದೇವರನ್ನು ನಿಂದಿಸಿ ಅಲ್ಲಾನೊಬ್ಬನೇ ದೇವರು ಎಂದು ಹೇಳುತ್ತ, ಅಲ್ಲಾನನ್ನು ಪೂಜಿಸಲು ಒತ್ತಾಯಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪಗಳಿದ್ದು, ಮಹಾರಾಷ್ಟ್ರ ಸರಕಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm