ಬ್ರೇಕಿಂಗ್ ನ್ಯೂಸ್
16-04-26 01:09 pm HK News Staffer ದೇಶ - ವಿದೇಶ
ಢಾಕಾ, ಎಪ್ರಿಲ್ 15: ಬಾಂಗ್ಲಾದೇಶದಿಂದ ಮಲೇಷ್ಯಾಕ್ಕೆ ಅಕ್ರಮವಾಗಿ ಪ್ರಯಾಣಿಸುತ್ತಿದ್ದ ಸುಮಾರು 250 ಮಂದಿ ರೋಹಿಂಗ್ಯಾ ನಿರಾಶ್ರಿತರು ಹಾಗೂ ಬಾಂಗ್ಲಾ ಪ್ರಜೆಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ ತೀವ್ರ ಗಾಳಿಗೆ ತುತ್ತಾಗಿ ಮುಳುಗಡೆಯಾಗಿದೆ. ಘಟನೆಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ಬಾಂಗ್ಲಾದೇಶದ ಕಾಕ್ಸ್ ಬಜಾರ್ ಜಿಲ್ಲೆಯ ಟೆಕ್ನಾಫ್ನಿಂದ ಟ್ರಾಲರ್ ಬೋಟಿನಲ್ಲಿ ನೂರಾರು ಮಂದಿ ಮಲೇಷ್ಯಾದತ್ತ ಹೊರಟಿದ್ದರು. ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ತುಂಬಿದ್ದರಿಂದ ಬೋಟ್, ಸಮುದ್ರದಲ್ಲಿ ಬೀಸುತ್ತಿದ್ದ ಬಲವಾದ ಗಾಳಿ ಮತ್ತು ಅಲೆಗಳ ಅಬ್ಬರಕ್ಕೆ ಸಿಲುಕಿ ನಿಯಂತ್ರಣ ಕಳೆದುಕೊಂಡು ಮುಳುಗಿದೆ ಎನ್ನಲಾಗಿದೆ. ಬೋಟ್ ಮುಳುಗಿ ದುರಂತ ಸಂಭವಿಸಿರುವುದನ್ನು ವಿಶ್ವಸಂಸ್ಥೆಯ ನಿರಾಶ್ರಿತರ ವಿಭಾಗದ ಹೈಕಮಿಷನರ್ ದೃಢಪಡಿಸಿದ್ದಾರೆ.
ಮಾಹಿತಿ ಪ್ರಕಾರ, ಬಾಂಗ್ಲಾದಿಂದ 280 ಜನರಿದ್ದ ಈ ಬೋಟ್ ಎಪ್ರಿಲ್ 4ರಂದು ಹೊರಟಿತ್ತು. ಯಾವಾಗ ದುರಂತ ಎದುರಾಯ್ತು, ಎಷ್ಟು ಮಂದಿಯನ್ನು ರಕ್ಷಿಸಲಾಗಿದೆ ಎಂಬ ಖಚಿತ ಮಾಹಿತಿ ಇಲ್ಲ. ಇಂಡೋನೇಷ್ಯಾ ತೆರಳುತ್ತಿದ್ದ ಬಾಂಗ್ಲಾದೇಶ ಕೋಸ್ಟ್ ಗಾರ್ಡ್ ಎಪ್ರಿಲ್ 9ರಂದು 9 ಮಂದಿಯನ್ನು ರಕ್ಷಣೆ ಮಾಡಿದೆ. ಶಿಪ್ ನಲ್ಲಿ ರಕ್ಷಣೆಯಾಗಿರುವ ರಫೀಕುಲ್ ಎಂಬ ವ್ಯಕ್ತಿ, ನಾವು ಹೊರಟ ನಾಲ್ಕು ದಿನದಲ್ಲಿ ಬೋಟ್ ಮುಳುಗಡೆಯಾಗಿತ್ತು. ಹಲವಾರು ಜನರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನಾನು ಬೋಟಿನಲ್ಲಿ ಸಿಕ್ಕ ಟೈರ್ ಗಳನ್ನು ಹಿಡಿದು 36 ಗಂಟೆಗಳ ಕಾಲ ಈಜಾಡಿದ್ದೇನೆ. ಮಲೇಶ್ಯಾದಲ್ಲಿ ಉದ್ಯೋಗ ಭರವಸೆ ನೀಡಿ ಕರೆದೊಯ್ಯುತ್ತಿದ್ದರು ಎಂದಿದ್ದಾನೆ.
ವಿಶ್ವಸಂಸ್ಥೆ ವರದಿ ಪ್ರಕಾರ, ಮ್ಯಾನ್ಮಾರ್ನ ರಾಖೈನ್ ಪ್ರಾಂತ್ಯದಲ್ಲಿ ಮುಂದುವರಿದಿರುವ ಹಿಂಸಾಚಾರ ಮತ್ತು ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿನ ಶೋಚನೀಯ ಸ್ಥಿತಿಯಿಂದಾಗಿ ರೋಹಿಂಗ್ಯಾ ಮುಸ್ಲಿಮರು ಅಪಾಯಕಾರಿ ಬೋಟಿನಲ್ಲಿ ಮಲೇಶ್ಯಾಕ್ಕೆ ವಲಸೆ ಹೋಗಲು ಮುಂದಾಗಿದ್ದಾರೆ. ಪ್ರಸ್ತುತ ಬಾಂಗ್ಲಾದೇಶವು ಸುಮಾರು 10 ಲಕ್ಷಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರಿಗೆ ಆಶ್ರಯ ನೀಡಿದೆ. ಆದರೆ, ಅವರಿಗೆ ಜೀವನೋಪಾಯ ಒದಗಿಸಲು ಮತ್ತು ಅವರ ಸುರಕ್ಷತೆಯನ್ನು ಖಾತ್ರಿಪಡಿಸಲು ಸಾಧ್ಯವಾಗಿಲ್ಲ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm