ಬ್ರೇಕಿಂಗ್ ನ್ಯೂಸ್
17-04-26 11:27 am HK News Staffer ದೇಶ - ವಿದೇಶ
ಬೀಜಿಂಗ್ ಏ.17: ಚೀನಾದಲ್ಲಿ ಬಾಲ್ಯದಲ್ಲಿ ನಡೆದ ಒಂದು ಸಣ್ಣ ಘಟನೆ, ಎರಡು ದಶಕಗಳ ಬಳಿಕ ಜೀವಕ್ಕೆ ಅಪಾಯ ತಂದುಕೊಟ್ಟ ಅಚ್ಚರಿಯ ಪ್ರಕರಣ ಬೆಳಕಿಗೆ ಬಂದಿದೆ. ವೆನ್ಝ್ ನಗರದ 32 ವರ್ಷದ ವಾಂಗ್ ಎಂಬುವರ ಹೊಟ್ಟೆಯಲ್ಲಿ 20 ವರ್ಷಗಳ ಹಿಂದೆ ನುಂಗಿದ ಪಾದರಸದ ಥರ್ಮಾಮೀಟರ್ ಪತ್ತೆಯಾಗಿದ್ದು, ವೈದ್ಯರು ಬೆಚ್ಚಿಬಿದ್ದಿದ್ದಾರೆ.
ಇತ್ತೀಚೆಗೆ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ವಾಂಗ್ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡಿದರು. ಪ್ರಾಥಮಿಕ ಪರೀಕ್ಷೆಗಳ ಬಳಿಕ ವೈದ್ಯರು ಸ್ಕ್ಯಾನಿಂಗ್ ನಡೆಸಿದಾಗ, ಸಣ್ಣ ಕರುಳಿನ ಆರಂಭಿಕ ಭಾಗವಾದ ಡ್ಯುವೋಡೆನಮ್ನಲ್ಲಿ ಲೋಹದ ವಸ್ತು ಸಿಲುಕಿಕೊಂಡಿರುವುದು ಪತ್ತೆಯಾಯಿತು. ಹೆಚ್ಚಿನ ಪರಿಶೀಲನೆಯಲ್ಲಿ ಅದು ಜ್ವರ ಅಳೆಯುವ ಥರ್ಮಾಮೀಟರ್ ಎಂಬುದು ಸ್ಪಷ್ಟವಾಯಿತು.
ವೈದ್ಯರ ಪ್ರಶ್ನೆಗೆ ಉತ್ತರಿಸಿದ ವಾಂಗ್, 12ನೇ ವಯಸ್ಸಿನಲ್ಲಿ ಆಕಸ್ಮಿಕವಾಗಿ ಥರ್ಮಾಮೀಟರ್ ನುಂಗಿದ್ದಾಗಿ ಒಪ್ಪಿಕೊಂಡಿದ್ದಾರೆ. ಅಂದು ಭಯದಿಂದ ಪೋಷಕರಿಗೆ ಈ ವಿಷಯ ತಿಳಿಸದೇ ಮೌನವಾಗಿದ್ದರು. ಯಾವುದೇ ತಕ್ಷಣದ ತೊಂದರೆ ಕಾಣಿಸದ ಕಾರಣ, ಈ ಘಟನೆ ಕಾಲಕ್ರಮೇಣ ಮರೆತು ಹೋಗಿತ್ತು.
ಆದರೆ ಇತ್ತೀಚೆಗೆ ಥರ್ಮಾಮೀಟರ್ನ ತುದಿ ಕರುಳಿಗೆ ಚುಚ್ಚಲು ಆರಂಭಿಸಿದ್ದರಿಂದ ತೀವ್ರ ನೋವು ಕಾಣಿಸಿಕೊಂಡಿದೆ. ಇದರ ಪರಿಣಾಮವಾಗಿ ಕರುಳಿನಲ್ಲಿ ತೂತು ಉಂಟಾಗುವ ಹಾಗೂ ಥರ್ಮಾಮೀಟರ್ ಒಡೆದು ಅದರಲ್ಲಿರುವ ವಿಷಕಾರಿ ಪಾದರಸ ದೇಹಕ್ಕೆ ಹರಡುವ ಅಪಾಯ ಉಂಟಾಗಿತ್ತು.
ಪರಿಸ್ಥಿತಿಯ ಗಂಭೀರತೆಯನ್ನು ಅರಿತ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆಗೆ ಮುಂದಾಗಿ, ಸುಮಾರು 20 ನಿಮಿಷಗಳ ಯಶಸ್ವಿ ಕಾರ್ಯಾಚರಣೆಯಲ್ಲಿ ಥರ್ಮಾಮೀಟರ್ ಅನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು. ಅಚ್ಚರಿಯ ಸಂಗತಿ ಎಂದರೆ, ಎರಡು ದಶಕಗಳ ಬಳಿಕವೂ ಥರ್ಮಾಮೀಟರ್ ಒಡೆಯದೆ ಅಚ್ಚುಕಟ್ಟಾಗಿ ಉಳಿದಿದ್ದು, ಕೇವಲ ಅದರ ಮೇಲಿನ ಅಂಕಿಗಳು ಮಾತ್ರ ಅಳಿಸಿ ಹೋಗಿದ್ದವು.
ಶಸ್ತ್ರಚಿಕಿತ್ಸೆಯ ಬಳಿಕ ಚೇತರಿಸಿಕೊಳ್ಳುತ್ತಿರುವ ವಾಂಗ್, “ಇಷ್ಟು ವರ್ಷಗಳ ಕಾಲ ನನ್ನ ದೇಹದೊಳಗೆ ಬಾಂಬ್ ಹೊತ್ತುಕೊಂಡಿದ್ದೆ” ಎಂದು ಹೇಳಿ ನಿಟ್ಟುಸಿರು ಬಿಟ್ಟಿದ್ದಾರೆ.
ಬಾಲ್ಯದಲ್ಲಿ ನಡೆದ ಒಂದು ಸಣ್ಣ ತಪ್ಪು, ಕಾಲ ಕಳೆದಂತೆ ಜೀವಕ್ಕೆ ಯಾವ ರೀತಿ ಕಂಟಕವಾಗುತ್ತದೆ ಎಂಬುದಕ್ಕೆ ಈ ಘಟನೆ ನಿಖರ ಉದಾಹರಣೆ. ಅಂದಿನ ಅಜಾಗರೂಕತೆ ವರ್ಷಗಳ ಬಳಿಕ ದೊಡ್ಡ ಅಪಾಯವಾಗಿ ಎದುರಾಗಿದ್ದು, ಸಣ್ಣ ವಿಷಯಗಳನ್ನೂ ನಿರ್ಲಕ್ಷಿಸಿದರೆ ಅದರ ಪರಿಣಾಮ ಎಷ್ಟು ಭೀಕರವಾಗಬಹುದು ಎಂಬುದಕ್ಕೆ ಇದು ನೈಜ ಉದಾಹರಣೆಯಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm