ಬ್ರೇಕಿಂಗ್ ನ್ಯೂಸ್
18-04-26 10:31 am HK News Staffer ದೇಶ - ವಿದೇಶ
ಟೆಹ್ರಾನ್, ಎಪ್ರಿಲ್ 18: ಒಂದೂವರೆ ತಿಂಗಳಿನಿಂದ ಸಂಘರ್ಷದ ಕಾರಣಕ್ಕೆ ತೀವ್ರ ಇಕ್ಕಟ್ಟಿನಲ್ಲಿ ಸಿಲುಕಿದ್ದ ಹಾರ್ಮುಜ್ ಜಲಸಂಧಿಯನ್ನು ಎಲ್ಲಾ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣವಾಗಿ ಮುಕ್ತಗೊಳಿಸುವುದಾಗಿ ಇರಾನ್ ಘೋಷಿಸಿದೆ. ಲೆಬನಾನ್ ಮತ್ತು ಇಸ್ರೇಲ್ ನಡುವಿನ 10 ದಿನಗಳ ತಾತ್ಕಾಲಿಕ ಕದನ ವಿರಾಮ ಜಾರಿಗೆ ಬಂದ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ.
ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು ‘ಎಕ್ಸ್’ ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. “ಲೆಬನಾನ್–ಇಸ್ರೇಲ್ ಕದನ ವಿರಾಮದ ಉಳಿದ ಅವಧಿ ವರೆಗೆ (ಏಪ್ರಿಲ್ 27ರ ವರೆಗೆ) ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತವಾಗಿರಲಿದೆ. ಹಡಗುಗಳು ಇರಾನ್ನ ಬಂದರು ಮತ್ತು ಕಡಲ ಸಂಸ್ಥೆ ಈಗಾಗಲೇ ನಿಗದಿಪಡಿಸಿರುವ ಮಾರ್ಗದಲ್ಲೇ ಸಂಚರಿಸಬೇಕು,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ನೌಕಾಪಡೆ ಕೆಲವು ದಿನಗಳಿಂದ ಗಣಿ ತೆರವು ಕಾರ್ಯಾಚರಣೆ ಮತ್ತು ಹಡಗುಗಳ ತಪಾಸಣೆ ಆರಂಭಿಸಿದ ನಂತರ ಉದ್ವಿಗ್ನತೆ ಹೆಚ್ಚಾಗಿತ್ತು. ಪರಿಸ್ಥಿತಿ ಸುಧಾರಿಸಿದರೆ ನೌಕಾಯಾನದ ಸ್ವಾತಂತ್ರ್ಯವನ್ನು ಮರು ಸ್ಥಾಪಿಸಲು ತಾವು ಸಿದ್ಧರಿದ್ದೇವೆ ಎಂಬ ಸಂಕೇತವನ್ನು ರವಾನಿಸುವ ಉದ್ದೇಶ ಇರಾನ್ ನಿರ್ಧಾರದ ಹಿಂದಿದೆ ಎಂದು ಎನ್ನಲಾಗುತ್ತಿದೆ.
ಇದೇ ವೇಳೆ ಜಲಸಂಧಿಯಲ್ಲಿ ಶಾಂತಿ ಸ್ಥಾಪಿಸಲು ಫ್ರಾನ್ಸ್ ಮತ್ತು ಬ್ರಿಟನ್ ಮುಂದಾಗಿವೆ. ಸುಮಾರು 40 ದೇಶಗಳ ಮತ್ತೊಂದು ಬೃಹತ್ ಸಭೆಯ ಅಧ್ಯಕ್ಷತೆಯನ್ನು ವಹಿಸುವುದಾಗಿ ಉಭಯ ರಾಷ್ಟ್ರಗಳು ಘೋಷಿಸಿವೆ. ಜಲಸಂಧಿಯಲ್ಲಿ ಅಡೆತಡೆಯಿಲ್ಲದ ಸಂಚಾರಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಒಮ್ಮತ ಮೂಡಿಸುವುದು ಸಭೆಯ ಮುಖ್ಯ ಉದ್ದೇಶವಾಗಿದೆ. ವಿಶ್ವದ ಪ್ರಮುಖ ತೈಲ ಸಾಗಾಣಿಕಾ ಮಾರ್ಗವು ಮತ್ತೆ ಮುಕ್ತವಾಗಿರುವುದರಿಂದ ಜಾಗತಿಕ ತೈಲ ಬೆಲೆಗಳಲ್ಲಿ ಉಂಟಾಗಬಹುದಾಗಿದ್ದ ಭಾರಿ ಏರಿಳಿತದ ಆತಂಕ ಸದ್ಯಕ್ಕೆ ದೂರವಾಗಿದೆ. ಏಪ್ರಿಲ್ 27ರ ವರೆಗೆ ಈ ಕದನ ವಿರಾಮ ಇರುವುದರಿಂದ, ಮುಂದಿನ ಹತ್ತು ದಿನಗಳಲ್ಲಿ ನಡೆಯಲಿರುವ ರಾಜತಾಂತ್ರಿಕ ಚರ್ಚೆಗಳು ಶಾಶ್ವತ ಪರಿಹಾರಕ್ಕೆ ದಾರಿ ಮಾಡಿಕೊಡಲಿವೆ ಎಂಬ ಆಶಯ ವ್ಯಕ್ತವಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm