ಬ್ರೇಕಿಂಗ್ ನ್ಯೂಸ್
18-04-26 11:39 pm HK News Desk ದೇಶ - ವಿದೇಶ
ನವದೆಹಲಿ, ಎಪ್ರಿಲ್ 18: ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ನಡೆಸಿದ್ದನ್ನು ಪೊಲೀಸರು ವಿಫಲಗೊಳಿಸಿದ್ದಾರೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿ ದಾಳಿಗೆ ಸ್ಕೆಚ್ ಹಾಕಿದ್ದ ಮಹಾರಾಷ್ಟ್ರ, ಒಡಿಶಾ ಮತ್ತು ಬಿಹಾರದ ನಾಲ್ವರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಸುಧಾರಿತ ಸ್ಫೋಟಕಗಳು, ಮೊಬೈಲ್, ಮತ್ತಿತರ ವಸ್ತುಗಳನ್ನು ವಶಪಡಿಸಲಾಗಿದೆ.
ಜನದಟ್ಟಣೆಯ ಸ್ಥಳಗಳನ್ನು ಗುರಿಯಾಗಿಸಿ ಐಇಡಿ ಅಳವಡಿಸಿದ್ದ ರಿಮೋಟ್ ನಿಯಂತ್ರಿತ ಟಾಯ್ ಕಾರನ್ನು ಜೋಡಿಸುವ ಪ್ರಕ್ರಿಯೆಯಲ್ಲಿ ಇಬ್ಬರು ಆರೋಪಿಗಳು ತೊಡಗಿಸಿಕೊಂಡಿದ್ದರು. ಈ ಬಗ್ಗೆ ಮಾಹಿತಿ ದೊರೆತ ವಿಶೇಷ ದಳವು ಗುಪ್ತಚರ ನೇತೃತ್ವದ ಕಾರ್ಯಾಚರಣೆಯಲ್ಲಿ ಮಹಾರಾಷ್ಟ್ರದ ಇಬ್ಬರು ಮತ್ತು ಒಡಿಶಾ ಮತ್ತು ಬಿಹಾರದಿಂದ ತಲಾ ಒಬ್ಬ ಆರೋಪಿಗಳನ್ನು ಬಂಧಿಸಿದೆ.
ನಾಲ್ವರು ಆರೋಪಿಗಳು ಇಸ್ಲಾಮಿಕ್ ರಾಷ್ಟ್ರ ಸ್ಥಾಪನೆಯ ಆಲೋಚನೆಯೊಂದಿಗೆ ಉಗ್ರಗಾಮಿ ಸಿದ್ಧಾಂತದಿಂದ ಪ್ರಭಾವಿತರಾಗಿದ್ದರು ಮತ್ತು "ಘಜ್ವಾ-ಎ-ಹಿಂದ್" ತತ್ವಗಳನ್ನು ಪ್ರಚಾರ ಮಾಡುತ್ತಿದ್ದರು. ಇಸ್ಲಾಮಿಕ್ ಖೊರಾಸಾನ್ ಲಷ್ಕರ್' ಪರಿಕಲ್ಪನೆಯಿಂದ ಪ್ರೇರಿತರಾಗಿದ್ದ ಆರೋಪಿಗಳು ತಮ್ಮ ಸಂಪರ್ಕದಲ್ಲಿರುವ ಯಯ
ಯುವಕರನ್ನು ಮತಾಂಧರನ್ನಾಗಿ ಮಾಡಲು ಕಪ್ಪು ಧ್ವಜ ಹಿಡಿದು ಪ್ರಚಾರದಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಮುಚ್ಚಿದ ಮತ್ತು ಎನ್ಕ್ರಿಪ್ಟ್ ಮಾಡಿದ ಸಾಮಾಜಿಕ ಮಾಧ್ಯಮ ಗುಂಪುಗಳಲ್ಲಿ ಸಕ್ರಿಯರಾಗಿದ್ದರು. ಅಲ್ಲಿ ಜಿಹಾದ್, ಉಗ್ರಗಾಮಿ ಸಿದ್ಧಾಂತ ಮತ್ತು ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದ ವಿಷಯವನ್ನು ಹಂಚಿಕೊಳ್ಳಲಾಗುತ್ತಿತ್ತು. ಹೊಸ ಸದಸ್ಯರನ್ನು ಗುರುತಿಸಲು, ಮೂಲಭೂತವಾದ ಬೋಧನೆ ಮಾಡಲು ಮತ್ತು ಅವರನ್ನು ಉಗ್ರಗಾಮಿ ಸಂಘಟನೆಗೆ ನೇಮಕ ಮಾಡಲು ಈ ವೇದಿಕೆಗಳನ್ನು ಬಳಸುತ್ತಿದ್ದರು. ಆರೋಪಿಗಳಲ್ಲಿ ಒಬ್ಬ ತನ್ನ ಅನುಯಾಯಿಗಳನ್ನು ಮತಾಂಧರನ್ನಾಗಿ ಮಾಡಲು ಮತ್ತು ತಮ್ಮ ಗುರಿಯ ಸಂಕೇತವಾಗಿ ಕಪ್ಪು ಧ್ವಜದೊಂದಿಗೆ ಕೆಂಪು ಕೋಟೆಯ ಚಿತ್ರವನ್ನು ಹಂಚಿಕೊಂಡಿದ್ದಾನೆ ಆರೋಪಿಸಲಾಗಿದೆ.
ಮತ್ತೊಬ್ಬ ಆರೋಪಿ ಡಿಸೆಂಬರ್ 2025 ರಲ್ಲಿ ದೆಹಲಿಗೆ ಭೇಟಿ ನೀಡಿದ್ದು, ಕೆಂಪು ಕೋಟೆ ಮತ್ತು ಇಂಡಿಯಾ ಗೇಟ್ ಸೇರಿದಂತೆ ಪ್ರಮುಖ ಸ್ಥಳಗಳನ್ನು ಪರಿಶೀಲಿಸಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ. ಅಯೋಧ್ಯೆಯ ರಾಮ ಮಂದಿರ, ಸಂಸತ್ತು ಮತ್ತು ಕೆಲವು ಮಿಲಿಟರಿ ನೆಲೆಗಳ ಮೇಲೆ ಸಂಭಾವ್ಯ ದಾಳಿಗಳ ಬಗ್ಗೆ ಸಂಚು ನಡೆಸಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm