ಬ್ರೇಕಿಂಗ್ ನ್ಯೂಸ್
20-04-26 09:37 pm HK News Staffer ದೇಶ - ವಿದೇಶ
ಟೆಹ್ರಾನ್, ಎಪ್ರಿಲ್ 20: ಇರಾನ್ ಧ್ವಜ ಹೊತ್ತಿದ್ದ ಸರಕು ಹಡಗೊಂದನ್ನು ಅಮೆರಿಕದ ಸೇನೆ ಒಮಾನ್ ಸಮುದ್ರ ತೀರದಲ್ಲಿ ವಶಪಡಿಸಿದ್ದು, ಇದರ ಬೆನ್ನಲ್ಲೇ ಉಭಯ ರಾಷ್ಟ್ರಗಳ ಉದ್ವಿಗ್ನತೆ ಮತ್ತೆ ಉಲ್ಬಂಣಗೊಂಡಿದೆ. ವರದಿಗಳ ಪ್ರಕಾರ, “ಟೌಸ್ಕಾ” ಎಂಬ ಇರಾನ್ ಹಡಗನ್ನು ತನ್ನ ನೌಕಾಪಡೆಯ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅಮೆರಿಕಾ ಹೇಳಿದೆ.
ಅಮೆರಿಕಾ ನೌಕಾಪಡೆಯ ಡಿಸ್ಟ್ರಾಯರ್ ಹಡಗು, ಇರಾನಿ ಸರಕು ಹಡಗಿನ ಎಂಜಿನ್ ಭಾಗಕ್ಕೆ ಗುಂಡು ಹಾರಿಸಿ ನಿಷ್ಕ್ರಿಯಗೊಳಿಸಿದೆ. ನಂತರ ಅಮೆರಿಕಾ ನೌಕಾ ಪಡೆ ಹಡಗನ್ನು ವಶಕ್ಕೆ ಪಡೆದು ಅದರೊಳಗಿನ ಸರಕುಗಳನ್ನು ಪರಿಶೀಲನೆ ನಡೆಸಿದೆ. ಈ ಕಾರ್ಯಾಚರಣೆಯ ವಿಡಿಯೋವನ್ನು ಅಮೆರಿಕಾ ಸೆಂಟ್ರಲ್ ಕಮಾಂಡ್ ಬಿಡುಗಡೆ ಮಾಡಿದ್ದು, ಹಲವು ಬಾರಿಯ ಎಚ್ಚರಿಕೆಗಳ ನಂತರ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ.
ಇದಕ್ಕೆ ತೀವ್ರ ಪ್ರತಿಕ್ರಿಯೆ ನೀಡಿರುವ ಇರಾನ್ ಸರ್ಕಾರ, ಈ ಕ್ರಮವನ್ನು ನೇರವಾಗಿ “ಸಮುದ್ರ ದರೋಡೆ” ಎಂದು ಕರೆದಿದೆ. ಅಮೆರಿಕದ ಈ ದಾಳಿಗೆ ನಾವು ಶೀಘ್ರದಲ್ಲೇ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಘೋಷಿಸಿದೆ. ಇದರಿಂದ ಪ್ರದೇಶದಲ್ಲಿ ಮತ್ತೆ ಸೇನಾ ಸಂಘರ್ಷದ ಭೀತಿ ಹೆಚ್ಚಿದೆ.
ಇರಾನ್ ಅಧ್ಯಕ್ಷ ಮಸೂದ್ ಪೆಜೆಷ್ಕಿಯಾನ್ ಅಮೆರಿಕದ ಕ್ರಮವನ್ನು ಉದ್ದೇಶಪೂರ್ವಕ ಪ್ರಚೋದನೆ ಎಂದು ಟೀಕಿಸಿದ್ದಾರೆ. ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು ಪಾಕಿಸ್ತಾನದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಅಮೆರಿಕದ ಈ ನಡೆ ರಾಜತಾಂತ್ರಿಕ ಪ್ರಯತ್ನಗಳಿಗೆ ದೊಡ್ಡ ಧಕ್ಕೆ ತರುತ್ತಿದೆ ಎಂದು ತಿಳಿಸಿದ್ದಾರೆ.
ಇತ್ತ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಎರಡನೇ ಹಂತದ ಮಾತುಕತೆಯೂ ಅನಿಶ್ಚಿತವಾಗಿದೆ. ಇದರಿಂದ ಅಮೆರಿಕಾ- ಇರಾನ್ ಸಂಘರ್ಷಕ್ಕೆ ರಾಜತಾಂತ್ರಿಕ ಪರಿಹಾರ ಸಿಗುವ ಸಾಧ್ಯತೆಗಳು ಕುಂಠಿತವಾಗಿದೆ. ಇರಾನ್ ನಾಯಕರು ತಮ್ಮ ನಿಲುವನ್ನು ಕಠಿಣಗೊಳಿಸಿದ್ದು, ಅಮೆರಿಕಾ ತನ್ನ ತೈಲ ನಿರ್ಬಂಧಗಳನ್ನು ಹಿಂತೆಗೆದುಕೊಳ್ಳುವ ವರೆಗೆ ಹಾರ್ಮುಜ್ ಮೂಲಕ ಸಾಗಣೆ ಮೇಲಿನ ನಿರ್ಬಂಧ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ಇದರಿಂದ ಜಾಗತಿಕ ತೈಲ ಬೆಲೆ ಏರಿಕೆ ಹಾಗೂ ಆರ್ಥಿಕ ಅಸ್ಥಿರತೆ ಹೆಚ್ಚುವ ಸಾಧ್ಯತೆ ಇದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm