ಬ್ರೇಕಿಂಗ್ ನ್ಯೂಸ್
20-04-26 09:37 pm HK News Staffer ದೇಶ - ವಿದೇಶ
ಟೆಹ್ರಾನ್, ಎಪ್ರಿಲ್ 20: ಇರಾನ್ ಧ್ವಜ ಹೊತ್ತಿದ್ದ ಸರಕು ಹಡಗೊಂದನ್ನು ಅಮೆರಿಕದ ಸೇನೆ ಒಮಾನ್ ಸಮುದ್ರ ತೀರದಲ್ಲಿ ವಶಪಡಿಸಿದ್ದು, ಇದರ ಬೆನ್ನಲ್ಲೇ ಉಭಯ ರಾಷ್ಟ್ರಗಳ ಉದ್ವಿಗ್ನತೆ ಮತ್ತೆ ಉಲ್ಬಂಣಗೊಂಡಿದೆ. ವರದಿಗಳ ಪ್ರಕಾರ, “ಟೌಸ್ಕಾ” ಎಂಬ ಇರಾನ್ ಹಡಗನ್ನು ತನ್ನ ನೌಕಾಪಡೆಯ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅಮೆರಿಕಾ ಹೇಳಿದೆ.
ಅಮೆರಿಕಾ ನೌಕಾಪಡೆಯ ಡಿಸ್ಟ್ರಾಯರ್ ಹಡಗು, ಇರಾನಿ ಸರಕು ಹಡಗಿನ ಎಂಜಿನ್ ಭಾಗಕ್ಕೆ ಗುಂಡು ಹಾರಿಸಿ ನಿಷ್ಕ್ರಿಯಗೊಳಿಸಿದೆ. ನಂತರ ಅಮೆರಿಕಾ ನೌಕಾ ಪಡೆ ಹಡಗನ್ನು ವಶಕ್ಕೆ ಪಡೆದು ಅದರೊಳಗಿನ ಸರಕುಗಳನ್ನು ಪರಿಶೀಲನೆ ನಡೆಸಿದೆ. ಈ ಕಾರ್ಯಾಚರಣೆಯ ವಿಡಿಯೋವನ್ನು ಅಮೆರಿಕಾ ಸೆಂಟ್ರಲ್ ಕಮಾಂಡ್ ಬಿಡುಗಡೆ ಮಾಡಿದ್ದು, ಹಲವು ಬಾರಿಯ ಎಚ್ಚರಿಕೆಗಳ ನಂತರ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ.
ಇದಕ್ಕೆ ತೀವ್ರ ಪ್ರತಿಕ್ರಿಯೆ ನೀಡಿರುವ ಇರಾನ್ ಸರ್ಕಾರ, ಈ ಕ್ರಮವನ್ನು ನೇರವಾಗಿ “ಸಮುದ್ರ ದರೋಡೆ” ಎಂದು ಕರೆದಿದೆ. ಅಮೆರಿಕದ ಈ ದಾಳಿಗೆ ನಾವು ಶೀಘ್ರದಲ್ಲೇ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಘೋಷಿಸಿದೆ. ಇದರಿಂದ ಪ್ರದೇಶದಲ್ಲಿ ಮತ್ತೆ ಸೇನಾ ಸಂಘರ್ಷದ ಭೀತಿ ಹೆಚ್ಚಿದೆ.
ಇರಾನ್ ಅಧ್ಯಕ್ಷ ಮಸೂದ್ ಪೆಜೆಷ್ಕಿಯಾನ್ ಅಮೆರಿಕದ ಕ್ರಮವನ್ನು ಉದ್ದೇಶಪೂರ್ವಕ ಪ್ರಚೋದನೆ ಎಂದು ಟೀಕಿಸಿದ್ದಾರೆ. ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು ಪಾಕಿಸ್ತಾನದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಅಮೆರಿಕದ ಈ ನಡೆ ರಾಜತಾಂತ್ರಿಕ ಪ್ರಯತ್ನಗಳಿಗೆ ದೊಡ್ಡ ಧಕ್ಕೆ ತರುತ್ತಿದೆ ಎಂದು ತಿಳಿಸಿದ್ದಾರೆ.
ಇತ್ತ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಎರಡನೇ ಹಂತದ ಮಾತುಕತೆಯೂ ಅನಿಶ್ಚಿತವಾಗಿದೆ. ಇದರಿಂದ ಅಮೆರಿಕಾ- ಇರಾನ್ ಸಂಘರ್ಷಕ್ಕೆ ರಾಜತಾಂತ್ರಿಕ ಪರಿಹಾರ ಸಿಗುವ ಸಾಧ್ಯತೆಗಳು ಕುಂಠಿತವಾಗಿದೆ. ಇರಾನ್ ನಾಯಕರು ತಮ್ಮ ನಿಲುವನ್ನು ಕಠಿಣಗೊಳಿಸಿದ್ದು, ಅಮೆರಿಕಾ ತನ್ನ ತೈಲ ನಿರ್ಬಂಧಗಳನ್ನು ಹಿಂತೆಗೆದುಕೊಳ್ಳುವ ವರೆಗೆ ಹಾರ್ಮುಜ್ ಮೂಲಕ ಸಾಗಣೆ ಮೇಲಿನ ನಿರ್ಬಂಧ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ಇದರಿಂದ ಜಾಗತಿಕ ತೈಲ ಬೆಲೆ ಏರಿಕೆ ಹಾಗೂ ಆರ್ಥಿಕ ಅಸ್ಥಿರತೆ ಹೆಚ್ಚುವ ಸಾಧ್ಯತೆ ಇದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm