ಬ್ರೇಕಿಂಗ್ ನ್ಯೂಸ್
20-04-26 10:54 pm HK News Staffer ದೇಶ - ವಿದೇಶ
ಲಕ್ನೋ, ಎಪ್ರಿಲ್ 20: ಮಹತ್ವದ ಬೆಳವಣಿಗೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧದ ದ್ವಿಪೌರತ್ವ ಪ್ರಕರಣದ ವಿಚಾರಣೆಯಿಂದ ಅಲಹಾಬಾದ್ ಹೈಕೋರ್ಟಿನ ಲಖ್ನೋ ಪೀಠದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರು ಸೋಮವಾರ ಹಿಂದೆ ಸರಿದಿದ್ದಾರೆ.
ಇದೇ ವೇಳೆ, ರಾಹುಲ್ ದ್ವಿಪೌರತ್ವ ಹೊಂದಿದ್ದಾರೆ ಎಂದು ಆರೋಪಿಸಿರುವ ಅರ್ಜಿದಾರ, ಬಿಜೆಪಿ ಕಾರ್ಯಕರ್ತ ವಿಘ್ನೇಶ್ ಶಿಶಿರ್ ಅವರ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್ಗಳು ಮತ್ತು ಮಾಧ್ಯಮ ಸಂದರ್ಶನಗಳಿಗೆ ನ್ಯಾಯಾಲಯವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿವಾದಾತ್ಮಕ ಪೋಸ್ಟ್ಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿ ವಿದ್ಯಾರ್ಥಿ, ಅರ್ಜಿದಾರ ಶಿಶಿರ್ ತಮ್ಮನ್ನು "ರಾಜಕೀಯ ಲಾಭಕ್ಕಾಗಿ" ಬಳಸಿಕೊಂಡಿದ್ದಾರೆ ಎಂದು ಮೌಖಿಕವಾಗಿ ಹೇಳಿ ಪ್ರಕರಣದ ವಿಚಾರಣೆಗೆ "ವಿಷಾದಿಸುತ್ತೇನೆ" ಎಂದು ಹೇಳಿದ್ದಾರೆ.
ಅರ್ಜಿದಾರರು ಈ ಪೀಠದ ಮುಂದೆ ಪ್ರಕರಣವನ್ನು ಮುಂದುವರಿಸಬೇಕೆ ಬೇಡವೇ ಎಂಬುದರ ಕುರಿತು ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ಗಳ ಮೂಲಕ ಸಾರ್ವಜನಿಕ ಅಭಿಪ್ರಾಯವನ್ನು ಕೋರುತ್ತಿದ್ದಾರೆ ಮತ್ತು ಈ ವಿಷಯದಲ್ಲಿ ಸಿಜೆಐ ಅವರ ಸಮ್ಮತಿ ಕೋರಿದ್ದಾರೆ ಎಂದು ಗಮನಿಸಿದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ, ದುರುದ್ದೇಶದಿಂದ "ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ಸಂದೇಶಗಳು ನ್ಯಾಯಾಲಯದ ವಿರುದ್ಧ ಆರೋಪ ಮಾಡಿದಂತೆ ಎಂದು ಹೇಳಿದ್ದಾರೆ.
ಶಿಶಿರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ಗಳನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸರ್ಕಾರಿ ವಕೀಲರು ಮತ್ತು ಭಾರತದ ಉಪ ಸಾಲಿಸಿಟರ್ ಜನರಲ್ ಸಹ ಹೇಳಿದ್ದಾರೆ. ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರನ್ನು ಒಳಗೊಂಡ ಹೈಕೋರ್ಟ್ ಪೀಠ, ಕಳೆದ ಶನಿವಾರ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮೊದಲು ನಿರ್ದೇಶಿಸಿತ್ತು. ಆದರೆ ಟೈಪ್ ಮಾಡಿ ಸಹಿ ಮಾಡುವ ಮೊದಲು ಪೀಠ, ತನ್ನ ಆದೇಶವನ್ನು ತಡೆ ಹಿಡಿದಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm