ಬ್ರೇಕಿಂಗ್ ನ್ಯೂಸ್
22-04-26 09:10 pm HK News Staffer ದೇಶ - ವಿದೇಶ
ಟೆಹ್ರಾನ್, ಎಪ್ರಿಲ್ 22: ಭಾರತಕ್ಕೆ ತೈಲ ಹೊತ್ತು ಬರುತ್ತಿದ್ದ ಮತ್ತೆ ಮೂರು ಹಡಗುಗಳನ್ನು ಇರಾನ್ ವಶಕ್ಕೆ ಪಡೆದಿದೆ. ಇರಾನಿನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ (ಐಆರ್ ಜಿಸಿ) ಹಾರ್ಮುಜ್ ಜಲಸಂಧಿ ಮೂಲಕ ಭಾರತಕ್ಕೆ ಬರುತ್ತಿದ್ದ ಹಡಗಿನ ಮೇಲೆ ದಾಳಿ ಮಾಡಿ ವಶಪಡಿಸಿದೆ. ಐಆರ್ ಜಿಸಿ ಅವುಗಳನ್ನು ಇರಾನ್ ಜಲಗಡಿಯೊಳಕ್ಕೆ ಕರೆದೊಯ್ದಿದೆ ಎಂದು ಇರಾನ್ ಟಿವಿ ಮಾಧ್ಯಮಗಳು ವರದಿ ಮಾಡಿವೆ.
ಎರಡು ಹಡಗುಗಳು ಭಾರತದ ಗುಜರಾತಿನ ಮುಂದ್ರಾ ಬಂದರಿಗೆ ಬರುತ್ತಿತ್ತು. ಪನಾಮಾ ಧ್ವಜ ಹೊತ್ತಿದ್ದ ಎಂಎಸ್ ಸಿ ಫ್ರಾನ್ಸೆಸ್ಕಾ ಮತ್ತು ಲೈಬೀರಿಯಾ ಧ್ವಜ ಹೊಂದಿದ್ದ ಎಪಾಮಿನೋಡ್ಸ್ ಎಂಬ ಹೆಸರಿನ ಹಡಗುಗಳನ್ನು ಐಆರ್ ಜಿಸಿ ವಶಕ್ಕೆ ಪಡೆದಿದೆ. ಭಾರತದತ್ತ ಬರುತ್ತಿದ್ದ ಮತ್ತೊಂದು ಗ್ರೀಕ್ ಮೂಲದ ಯುಫೋರಿಯಾ ಹೆಸರಿನ ಹಡಗನ್ನೂ ಇರಾನ್ ವಶಕ್ಕೆ ಪಡೆದಿದೆ.
ಹಡಗಿನ ಮೇಲೆ ಐಆರ್ಜಿಸಿ ಗನ್ಬೋಟ್ ನಿಂದ ದಾಳಿ ನಡೆಸಿತ್ತು. ಗುಂಡು ಹಾರಿಸುವ ಮೊದಲು IRGC ಯಾವುದೇ ಎಚ್ಚರಿಕೆ ನೀಡಲಿಲ್ಲ. ಯುಕೆ ಏಜೆನ್ಸಿಯ ಪ್ರಕಾರ, ಯಾವುದೇ ಸಾವು- ನೋವು ಸಂಭವಿಸಿಲ್ಲ. ಏತನ್ಮಧ್ಯೆ, ಹಡಗು ಇರಾನಿನ ಸಶಸ್ತ್ರ ಪಡೆಗಳ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ ನಂತರ ಗುಂಡು ಹಾರಿಸಲಾಗಿದೆ ಎಂದು ಇರಾನಿನ ಸುದ್ದಿ ಸಂಸ್ಥೆ ನೂರ್ ನ್ಯೂಸ್ ಹೇಳಿಕೊಂಡಿದೆ. ಫಾಸ್ಕ್ ನ್ಯೂಸ್ ಏಜೆನ್ಸಿ ಇದನ್ನು ಹಾರ್ಮುಜ್ ಜಲಸಂಧಿಯ ಮೇಲೆ ತನ್ನ ನಿಯಂತ್ರಣವನ್ನು ಕಾನೂನುಬದ್ಧವಾಗಿ ಜಾರಿಗೊಳಿಸಲು ಇರಾನ್ನ ಪ್ರಯತ್ನ ಎಂದು ಬಣ್ಣಿಸಿದೆ.
ಕಳೆದ ವಾರ ಭಾರತದ ಜಗ್ ಆರ್ನವ್ ಮತ್ತು ಸನ್ಮಾರ್ ಹೆರಾಲ್ಡ್ ಎಂಬೆರಡು ಹಡಗುಗಳ ಮೇಲೆ ಇರಾನ್ ದಾಳಿ ಮಾಡಿತ್ತು. ಜಗ್ ಆರ್ನವ್ ಹಡಗು ಸೌದಿ ಅರೇಬಿಯಾದಿಂದ ಮತ್ತು ಸನ್ಮಾರ್ ಹೆರಾಲ್ಡ್ ಹಡಗು ಇರಾಕಿನಿಂದ ತೈಲ ಹೊತ್ತು ಬರುತ್ತಿತ್ತು. ಸ್ನೇಹಿತ ರಾಷ್ಟ್ರಗಳ ಮೇಲೆ ತಡೆ ಹೇರಲ್ಲ ಎಂಬ ಇರಾನ್ ಹೇಳಿಕೆಯ ನಡುವೆಯೂ ಭಾರತದ ಹಡಗುಗಳ ಮೇಲೆ ದಾಳಿ ನಡೆಸಿರುವುದು ಪರಿಸ್ಥಿತಿ ಗಂಭೀರತೆ ಸೃಷ್ಟಿಸಿದೆ.
ಇದೇ ವೇಳೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆರಡು ವಾರಗಳ ಕಾಲ ಕದನ ವಿರಾಮ ಘೋಷಣೆ ಮಾಡಿದೆ. ಆದರೆ ಹೊರ್ಮುಜ್ ಜಲಸಂಧಿಯ ಮೇಲಿನ ಹಿಡಿತವನ್ನು ಸಡಿಲಿಸುವುದಿಲ್ಲ ಎಂದು ಹೇಳಿದೆ. ಟ್ರಂಪ್ ಕದನ ವಿರಾಮ ಘೋಷಣೆ ಬೆನ್ನಲ್ಲೇ ಭಾರತದತ್ತ ತೆರಳುತ್ತಿದ್ದ ಹಡಗುಗಳ ಮೇಲೆ ಇರಾನ್ ದಾಳಿ ನಡೆಸಿ ವಶಕ್ಕೆ ಪಡೆದಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm