ಬ್ರೇಕಿಂಗ್ ನ್ಯೂಸ್
04-01-21 06:10 pm Headline Karnataka News Network ದೇಶ - ವಿದೇಶ
Photo credits : Representative Image
ಭೋಪಾಲ್, ಜ.4: ಮಧ್ಯಪ್ರದೇಶದ ಮೂರ್ನಾಲ್ಕು ಜಿಲ್ಲೆಗಳಲ್ಲಿ ನೂರಾರು ಕಾಗೆಗಳು ದಿಢೀರ್ ಆಗಿ ಸತ್ತು ಬೀಳುತ್ತಿದ್ದು, ಕಳೆದ ಒಂದು ವಾರದಿಂದ ಕಂಡುಬರುತ್ತಿರುವ ಹೊಸ ವಿದ್ಯಮಾನ ಚಿಂತೆಗೆ ಕಾರಣವಾಗಿದೆ.
ಮಂಡ್ಸೌರ್, ಖಾರ್ಗೋನ್, ಇಂದೋರ್ ಮತ್ತು ಭೋಪಾಲ್ ಜಿಲ್ಲೆಯಲ್ಲಿ ಕಾಗೆಗಳ ಸಾವು ಕಂಡುಬಂದಿದೆ. ಇಂದೋರ್ ಜಿಲ್ಲೆಯಲ್ಲಿ 145ಕ್ಕೂ ಹೆಚ್ಚು ಕಾಗೆಗಳು ಸತ್ತಿರುವುದು ಪತ್ತೆಯಾಗಿದೆ. ರಾಜಸ್ಥಾನದ ಗಡಿ ಹಂಚಿಕೊಂಡಿರುವ ಮಂಡ್ಸೌರ್ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಕಾಗೆಗಳು ಸಾವು ಕಂಡಿದ್ದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಗೆ ಸತ್ತಿರುವುದು ಹೇಗೆ, ಏನು ಕಾರಣ ಇರಬಹುದು ಎಂಬ ಬಗ್ಗೆ ಸಂಶೋಧನೆಗಳು ನಡೆದಿವೆ.

ಇಂದೋರ್ ಜಿಲ್ಲೆಯಲ್ಲಿ ಸಿಕ್ಕ ಕಾಗೆಗಳನ್ನು ಪರೀಕ್ಷೆಗೊಳಪಡಿಸಿದ್ದು ಎಚ್ 5 ಎನ್ 8 ರೀತಿಯ ಹಕ್ಕಿಜ್ವರದಿಂದ ಕಾಗೆ ಸತ್ತಿರುವ ಬಗ್ಗೆ ತಿಳಿದುಬಂದಿದೆ ಎಂದು ಭೋಪಾಲ್ ಪಶು ವೈದ್ಯಕೀಯ ವಿಭಾಗದ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ.
ನಾವು ಹಲವು ಜಿಲ್ಲೆಗಳಿಂದ ಸತ್ತಿರುವ ಕಾಗೆಗಳನ್ನು ಪರೀಕ್ಷೆಗೆ ಒಳಪಡಿಸಿದ್ದೇವೆ. ಬಾವಿಗಳಲ್ಲಿ ಸತ್ತು ಬಿದ್ದಿರುವುದನ್ನು ಪತ್ತೆ ಮಾಡಲಾಗಿದೆ. ಹೆಚ್ಚಿನ ಕಡೆ ಮರದಡಿಯಲ್ಲಿ ಕಾಗೆಗಳು ಸತ್ತು ಬಿದ್ದಿರುವುದು ಸಿಕ್ಕಿದೆ. ಇದನ್ನು ಪರೀಕ್ಷೆ ನಡೆಸಲಾಗುತ್ತಿದ್ದು ಇನ್ನು ಕೂಡ ಹಕ್ಕಿಜ್ವರವೇ ಕಾರಣ ಎಂಬ ಬಗ್ಗೆ ತೀರ್ಮಾನಕ್ಕೆ ಬಂದಿಲ್ಲ. ಆದ್ರೂ ಇದು ಗಂಭೀರ ವಿಚಾರವಾಗಿದ್ದು ನಾವು ಎಲರ್ಟ್ ಆಗಿದ್ದೇವೆ ಎಂದು ಪಶು ಸಂಗೋಪನಾ ಇಲಾಖೆಯ ಡಾ.ಲಲಿತ್ ಪಾಟಿಧರ್ ಹೇಳಿದ್ದಾರೆ.

ಇದೇ ವೇಳೆ, ಕಾಗೆ ಸತ್ತು ಬಿದ್ದಿರುವ ಪ್ರದೇಶದಲ್ಲಿ ಎಲರ್ಟ್ ಮಾಡಲಾಗಿದ್ದು, ಜನರಲ್ಲಿ ಹಕ್ಕಿಜ್ವರದ ಲಕ್ಷಣ ಇದೆಯೇ ಎಂಬ ಬಗ್ಗೆ ಆರೋಗ್ಯ ಇಲಾಖೆ ಶೋಧ ನಡೆಸುತ್ತಿದೆ.
Panic has gripped several parts of Madhya Pradesh after hundreds of crows have died in three districts in the past one week.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am