ಬ್ರೇಕಿಂಗ್ ನ್ಯೂಸ್
24-04-26 07:35 pm HK News Staffer ದೇಶ - ವಿದೇಶ
ತಿರುವನಂತಪುರಂ, ಏಪ್ರಿಲ್ 24: ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಕಂದಮ್ಮನ ದುರಂತವು ಕೇರಳದಲ್ಲಿ ಹೃದಯ ವಿದ್ರಾವಕ ಕಥೆಯಾಗಿ ಉಳಿದಿದೆ. ಆದರೆ, ಅದೇ ಘಟನೆ ಮಾನವೀಯತೆಯ ಮಹತ್ವವನ್ನೂ ಜಗತ್ತಿಗೆ ತೋರಿಸಿದೆ. ಆಲಿನ್ ಶೆರಿನ್ ಎಂಬ 9 ತಿಂಗಳ ಮಗುವನ್ನು ಕಳೆದುಕೊಂಡ ಪೋಷಕರು ತಮ್ಮ ದುಃಖವನ್ನು ಮೀರಿ ಅಂಗಾಂಗ ದಾನದ ಮೂಲಕ ಇತರ ಮಕ್ಕಳಿಗೆ ಹೊಸ ಜೀವ ನೀಡುವ ಮಹತ್ತರ ನಿರ್ಧಾರ ಕೈಗೊಂಡಿದ್ದರು.
ಕೇರಳ ರಾಜ್ಯದ ದಂಪತಿಗಳಾದ ಅರುಣ್ ಮತ್ತು ಶೆರಿನ್ ತಮ್ಮ ಮಗಳ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಅಪಾರ ಮಾನವೀಯತೆ ಮೆರೆದಿದ್ದರು. ಆಲಿನ್ನ ಯಕೃತ್ತು ದಾನದಿಂದ ಮರುಜೀವ ಪಡೆದ ಮಗು ಇದೀಗ ಆರೋಗ್ಯವಾಗಿದ್ದು, ಮೊದಲ ಬಾರಿಗೆ ಆ ಮಗುವನ್ನು ಪೋಷಕರು ಭೇಟಿ ಮಾಡಿದ ಕ್ಷಣ ತಿರುವನಂತಪುರಂನ ಕಿಮ್ಸ್ ಹೆಲ್ತ್ ಆಸ್ಪತ್ರೆ ಯಲ್ಲಿ ಭಾವುಕ ದೃಶ್ಯಕ್ಕೆ ಸಾಕ್ಷಿಯಾಯಿತು.
ಅಂಗಾಂಗ ದಾನ ಪಡೆದ ಮಗುವನ್ನು ತನ್ನ ಮಡಿಲಲ್ಲಿ ಎತ್ತಿಕೊಂಡಾಗ, ಆಲಿನ್ ತಾಯಿ ಶೆರಿನ್ ತಮ್ಮದೇ ಮಗಳನ್ನು ನೋಡಿದಂತೆ ಕಣ್ಣೀರಿಟ್ಟರು. ಮರುಜೀವ ಪಡೆದ ಮಗುವಿನ ಪೋಷಕರು ಕೂಡ ಕೃತಜ್ಞತೆಯಿಂದ ಆಲಿನ್ ಪೋಷಕರಿಗೆ ಧನ್ಯವಾದ ಸಲ್ಲಿಸಿದರು. ಸಾಮಾನ್ಯವಾಗಿ ಅಂಗಾಂಗ ದಾನ ಪ್ರಕ್ರಿಯೆಯಲ್ಲಿ ಗೌಪ್ಯತೆ ಕಾಪಾಡಲಾಗುತ್ತದೆ. ಆದರೆ ಈ ಘಟನೆಯಲ್ಲಿ ಮಾನವೀಯ ದೃಷ್ಟಿಯಿಂದ ವೈದ್ಯರು ವಿಶೇಷವಾಗಿ ಈ ಭೇಟಿಗೆ ಅವಕಾಶ ಕಲ್ಪಿಸಿದ್ದಾರೆ.



ಘಟನೆಯ ಹಿನ್ನಲೆ:
2025ರ ಫೆಬ್ರವರಿ 5ರಂದು, ಆಲಿನ್ ಶೆರಿನ್ ಕುಟುಂಬದೊಂದಿಗೆ ಕೊಟ್ಟಾಯಂನಿಂದ ತಿರುವಲ್ಲಾಗೆ ಪ್ರಯಾಣಿಸುತ್ತಿದ್ದಾಗ ಪಲ್ಲಂ ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಳು. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯರು ಆಕೆಯ ಮಿದುಳು ನಿಷ್ಕ್ರಿಯಗೊಂಡಿದೆ ಎಂದು ಘೋಷಿಸಿದರು. ನಂತರ ಕೊಚ್ಚಿಯ ಅಮೃತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದರೂ, ಫೆಬ್ರವರಿ 10ರಂದು ಆಲಿನ್ ನಿಧನಳಾದಳು.
ಈ ದುಃಖದ ನಡುವೆಯೂ, ಪೋಷಕರು ಕಣ್ಣು, ಹೃದಯ, ಕಿಡ್ನಿ ಸೇರಿದಂತೆ ಹಲವು ಅಂಗಾಂಗಗಳನ್ನು ದಾನ ಮಾಡಲು ಒಪ್ಪಿಕೊಂಡರು. ಅಂಗಾಂಗಗಳನ್ನು ಸಮಯಕ್ಕೆ ತಲುಪಿಸಲು ಕೊಚ್ಚಿ ಪೊಲೀಸರು ಜಿರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದು, ಅನೇಕ ಜೀವಗಳನ್ನು ಉಳಿಸಲು ನೆರವಾಯಿತು.
ಒಂದು ಜೀವ ಕಳೆದುಕೊಂಡ ನೋವು ಎಂದಿಗೂ ಮರೆಯಲಾಗದು. ಆದರೆ ಅದೇ ಜೀವ ಇನ್ನೂ ಹಲವರಲ್ಲಿ ಉಸಿರಾಗಿ ಉಳಿದರೆ—ಅದು ಮಾನವೀಯತೆಯ ಅತ್ಯುನ್ನತ ರೂಪ. ಆಲಿನ್ ಶೆರಿನ್ ಕೇವಲ ಮಗು ಅಲ್ಲ, ಬದುಕು ಹಂಚಿದ ಒಂದು ಸ್ಪೂರ್ತಿ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm