ಬ್ರೇಕಿಂಗ್ ನ್ಯೂಸ್
25-04-26 03:53 pm HK News Staffer ದೇಶ - ವಿದೇಶ
ನವದೆಹಲಿ, ಎಪ್ರಿಲ್ 25: ರಾಜ್ಯಸಭೆಯಲ್ಲಿ ಆಪ್ ಪಕ್ಷದ ರಾಜ್ಯಸಭೆ ಸದಸ್ಯ ರಾಘವ್ ಚಡ್ಡಾ ಸೇರಿ ಏಳು ಸಂಸದರು ಪಕ್ಷ ತೊರೆದು ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ ಎನ್ ಡಿಎ ಮೈತ್ರಿಕೂಟ ಸದನದಲ್ಲಿ ಮೂರನೇ ಎರಡು ಬಹುಮತ ಸಾಧಿಸಲು ಮತ್ತಷ್ಟು ಹತ್ತಿರವಾಗಿದೆ. ಸಂವಿಧಾನ ತಿದ್ದುಪಡಿಯಂತಹ ಮಸೂದೆಗಳನ್ನು ಅಂಗೀಕರಿಸಲು ಈ ಬಹುಮತ ಸದನದಲ್ಲಿ ಅಗತ್ಯವಾಗಿರುತ್ತದೆ.
ಸದ್ಯಕ್ಕೆ, ಮೇಲ್ಮನೆಯಲ್ಲಿ ಆ ‘ಮ್ಯಾಜಿಕ್ ಸಂಖ್ಯೆ’ ತಲುಪಲು ಮೈತ್ರಿಕೂಟಕ್ಕೆ ಇನ್ನೂ 17 ಸದಸ್ಯರ ಕೊರತೆಯಿದೆ. ಆಮ್ ಆದ್ಮಿ ಪಕ್ಷದ ಸಂಸದರು ಪಕ್ಷ ತೊರೆದ ನಂತರ, ರಾಜ್ಯಸಭೆಯಲ್ಲಿ ಎನ್ ಡಿಎಗೆ ಈಗ 145 ಸದಸ್ಯರ ಬೆಂಬಲ ಸಿಕ್ಕಂತಾಗಿದೆ. 244 ಸದಸ್ಯ ಬಲದ ರಾಜ್ಯಸಭೆಯಲ್ಲಿ ಮೂರನೇ ಎರಡು ಬಹುಮತದ ಗಡಿ 163 ಆಗಿರುತ್ತದೆ.
ಎನ್ ಡಿಎ ಮೈತ್ರಿಕೂಟದ ನೇತೃತ್ವ ವಹಿಸಿರುವ ಬಿಜೆಪಿಗೆ ಸರಳ ಬಹುಮತ ಪಡೆಯಲು ಇನ್ನೂ 10 ಸ್ಥಾನಗಳ ಕೊರತೆಯಿದೆ. ಇದು ಪಕ್ಷಕ್ಕೆ ಸವಾಲಾಗಿದೆ. ರಾಜ್ಯಸಭೆ ಅಧ್ಯಕ್ಷರಾದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಆಪ್ ಸಂಸದರನ್ನು ಬಿಜೆಪಿ ಜೊತೆಗೆ ವಿಲೀನಗೊಳಿಸಲು ಅನುಮೋದಿಸಿದರೆ ಆಡಳಿತ ಪಕ್ಷದ ಒಟ್ಟು ಸಂಸದರ ಸಂಖ್ಯೆ 113ಕ್ಕೆ ಏರಿಕೆಯಾಗಲಿದೆ. ಪ್ರಸ್ತುತ ಬಿಜೆಪಿಗೆ 106 ಸಂಸದರು ಇದ್ದಾರೆ.
ಇದೇ ವೇಳೆ, ಏಳು ನಾಮನಿರ್ದೇಶಿತ ಸದಸ್ಯರು ಮತ್ತು ಇಬ್ಬರು ಸ್ವತಂತ್ರ ಸಂಸದರಿಂದಲೂ ಬೆಂಬಲ ಸಿಗುವ ಸಾಧ್ಯತೆ ಇದ್ದು, ಇದರಿಂದ ಬಿಜೆಪಿ ಬೆಂಬಲಿಸುವವರ ಸಂಖ್ಯೆ 122ಕ್ಕೆ ಏರಿಕೆಯಾಗಲಿದೆ. ಇದು ಸರಳ ಬಹುಮತದ ಅರ್ಧ ಗಡಿಯನ್ನು ತಲುಪುತ್ತದೆ. ಈಗ ಆಪ್ ಸಂಸದರು ಕೂಡ ಬಿಜೆಪಿ ಜೊತೆಗೆ ಸೇರಿಕೊಂಡಿದ್ದರಿಂದ ಎನ್ ಡಿಎ ಬಲ ಹೆಚ್ಚಲಿದೆ.
ಮೇಲ್ಮನೆಯಲ್ಲಿ NDAಗೆ ಮೂರನೇ ಎರಡರಷ್ಟು ಬಹುಮತ ದೊರಕಿದರೆ, ಸಂವಿಧಾನ ತಿದ್ದುಪಡಿ ಅಗತ್ಯವಿರುವ ಪ್ರಮುಖ ಮಸೂದೆಗಳನ್ನು ಅಂಗೀಕರಿಸುವುದು ಸುಲಭವಾಗುತ್ತದೆ. ಲೋಕಸಭೆಯಲ್ಲಿ NDAಗೆ ಸರಳ ಬಹುಮತ ಇದೆ. ಆದರೆ ಪ್ರಮುಖ ತಿದ್ದುಪಡಿಗಳಿಗೆ 363 ಸಂಸದರ ಬೆಂಬಲ ಬೇಕಾಗುತ್ತದೆ.
ಇತ್ತೀಚೆಗೆ, 2029ರಿಂದ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಶೇಕಡಾ ಮೀಸಲಾತಿ ಜಾರಿಗೆ ತರುವ ಹಾಗೂ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 816ಕ್ಕೆ ಹೆಚ್ಚಿಸುವ ಉದ್ದೇಶದ ಮಹತ್ವದ ಸಂವಿಧಾನ (131ನೇ ತಿದ್ದುಪಡಿ) ಮಸೂದೆಗೆ ಲೋಕಸಭೆಯಲ್ಲಿ NDAಗೆ ಮೂರನೇ ಎರಡು ಬಹುಮತ ದೊರಕದ ಕಾರಣ ಸೋಲಾಗಿತ್ತು. ಪ್ರಸ್ತುತ NDA ಸರ್ಕಾರದ ಅವಧಿಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ಸಂಖ್ಯೆ ಕೊರತೆಯಿಂದ ಸೋತಿರುವುದು ಇದೇ ಮೊದಲ ಬಾರಿಯಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm