ಬ್ರೇಕಿಂಗ್ ನ್ಯೂಸ್
26-04-26 12:49 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಏಪ್ರಿಲ್ 26: ಅಮೆರಿಕದ ರಾಜಧಾನಿ ವಾಷಿಂಗ್ಟನ್ನ ಶ್ವೇತಭವನದ ವಾರ್ಷಿಕ ವರದಿಗಾರರ ಭೋಜನಕೂಟದ ವೇಳೆ ಗುಂಡಿನ ಸದ್ದು ಕೇಳಿಬಂದಿದ್ದು, ಕ್ಷಣಾರ್ಧದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಶ್ವೇತಭವನ ಸಮೀಪದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್ ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಷಣಕ್ಕೆ ವೇದಿಕೆಗೆ ಸಿದ್ಧರಾಗುತ್ತಿದ್ದಂತೆಯೇ ಹೊರಭಾಗದಲ್ಲಿ 5ರಿಂದ 8 ಬಾರಿ ಗುಂಡಿನ ಸದ್ದು ಕೇಳಿಬಂದಿದೆ. ತಕ್ಷಣವೇ ಸೀಕ್ರೆಟ್ ಸರ್ವಿಸ್ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ಅಧ್ಯಕ್ಷರನ್ನು ಹಾಗೂ ಗಣ್ಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು. ಆ ವೇಳೆ ಸಭಾಂಗಣದಲ್ಲಿ ಇದ್ದ ನೂರಾರು ಪತ್ರಕರ್ತರು, ಸೆಲೆಬ್ರಿಟಿಗಳು ಹಾಗೂ ಅತಿಥಿಗಳು ಭೀತಿಯಿಂದ ಟೇಬಲ್ಗಳ ಕೆಳಗೆ ಅಡಗಿ ಕುಳಿತರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಹಾಗೂ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಕೂಡ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಘಟನೆಯ ನಂತರ ರಾಷ್ಟ್ರೀಯ ಭದ್ರತಾ ಪಡೆಗಳನ್ನು ನಿಯೋಜಿಸಿ, ನಗರಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಶಂಕಿತನ ಬಂಧನ:
ಗುಂಡಿನ ಸದ್ದು ಕೇಳಿಬಂದ ತಕ್ಷಣ ಭದ್ರತಾ ಪಡೆಗಳು ಒಬ್ಬ ಶಂಕಿತನನ್ನು ಬಂಧಿಸಿದ್ದು, ಘಟನೆಯ ಕುರಿತು ಸವಿಸ್ತಾರ ತನಿಖೆ ಆರಂಭವಾಗಿದೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.
ಟ್ರಂಪ್ ಪ್ರತಿಕ್ರಿಯೆ:
ಘಟನೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಡೊನಾಲ್ಡ್ ಟ್ರಂಪ್, ಭದ್ರತಾ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ. “ಇದು ವಿಚಿತ್ರ ಸಂಜೆ. ಸೀಕ್ರೆಟ್ ಸರ್ವಿಸ್ ಅದ್ಭುತವಾಗಿ ಕಾರ್ಯನಿರ್ವಹಿಸಿದೆ. ಶೂಟರ್ ಬಂಧನವಾಗಿದೆ. ಕಾರ್ಯಕ್ರಮ ಮುಂದುವರಿಸುವ ಕುರಿತು ಅಧಿಕಾರಿಗಳು ನಿರ್ಧಾರ ಕೈಗೊಳ್ಳುತ್ತಾರೆ” ಎಂದು ತಿಳಿಸಿದ್ದಾರೆ.
ಈ ಘಟನೆ 2024ರಲ್ಲಿ ಪೆನ್ಸಿಲ್ವೇನಿಯಾದಲ್ಲಿ ನಡೆದ ಹತ್ಯೆ ಯತ್ನದ ನೆನಪುಗಳನ್ನು ಮರುಕಳಿಸಿದ್ದು, ಅಮೆರಿಕದ ಉನ್ನತ ನಾಯಕರ ಭದ್ರತೆ ಕುರಿತು ಮತ್ತೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
ವಿಶ್ವದ ಅತಿ ಶಕ್ತಿಶಾಲಿ ದೇಶದ ಹೃದಯದಲ್ಲೇ ಗುಂಡಿನ ಸದ್ದು ಕೇಳಿ ಬಂದಿದ್ದು, ಭದ್ರತಾ ವ್ಯವಸ್ಥೆ ಎಷ್ಟು ಬಲಿಷ್ಠವಾದರೂ, ಅಪಾಯದ ನೆರಳು ಇನ್ನೂ ಹತ್ತಿರದಲ್ಲೇ ಇದೆ ಎಂಬುದನ್ನು ಈ ಘಟನೆ ಸ್ಪಷ್ಟಪಡಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm