ಬ್ರೇಕಿಂಗ್ ನ್ಯೂಸ್
03-05-26 02:35 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 3: ಯುದ್ಧವು ನಮ್ಮ ಆಯ್ಕೆಯಲ್ಲ, ಇರಾನ್ ಮೇಲೆ ಬಲವಂತವಾಗಿ ಹೇರಲ್ಪಟ್ಟದ್ದು ಎಂದು ಇರಾನ್ ಸರ್ವೋಚ್ಛ ನಾಯಕನ ಪ್ರತಿನಿಧಿ ಡಾ. ಅಬ್ದುಲ್ ಮಜೀದ್ ಹಕೀಮ್ ಇಲಾಹಿ ಹೇಳಿದ್ದಾರೆ.
ಬೆಂಗಳೂರು ಭೇಟಿ ವೇಳೆ ಮಾತನಾಡಿದ ಇಲಾಹಿ ಅವರು, ಇರಾನ್ ಎಂದಿಗೂ ಯುದ್ಧ ಬಯಸಲಿಲ್ಲ. ಆದರೆ, ನಮ್ಮ ಮೇಲೆ ಹೇರಲಾಯಿತು. ನಾವು ಈಗಲೂ ಯುದ್ಧ ಬಯಸುವುದಿಲ್ಲ, ಆದರೆ ಶತ್ರುಗಳು ಮುಂದುವರಿಸಿದರೆ 10 ವರ್ಷಗಳ ವರೆಗೂ ಹೋರಾಡಲು ನಾವು ಸಿದ್ಧ ಎಂದು ಹೇಳಿದ್ದಾರೆ.
ಅಮೆರಿಕ ಮತ್ತು ಇಸ್ರೇಲ್ ಈ ಯುದ್ಧವನ್ನು ಮೂರು ದಿನಗಳಲ್ಲಿ ಮುಗಿಸಬಹುದು ಎಂದುಕೊಂಡಿದ್ದವು, ಇರಾನ್ ಕುಸಿದು ಹೋಗುತ್ತದೆ ಮತ್ತು ಅದನ್ನು ವಿಭಜಿಸಬಹುದು ಎಂದು ಭಾವಿಸಿದ್ದವು. ಆದರೆ ಅದು ಸಾಧ್ಯವಾಗಲಿಲ್ಲ, ಮುಂದೆ ಕೂಡ ಆಗುವುದಿಲ್ಲ ಎಂದು ತಿಳಿಸಿದರು.
ಇರಾನ್ ತನ್ನ ಭೂಭಾಗದ ಒಂದು ಇಂಚು ಭೂಮಿಯನ್ನೂ ಕೂಡ ಬಿಟ್ಟುಕೊಡುವುದಿಲ್ಲ, ಬೇಕಾದರೆ ಜನರು ತಮ್ಮ ರಕ್ತವನ್ನೇ ಹರಿಸಲು ಸಿದ್ಧರಾಗಿದ್ದಾರೆ. “ಅಮೆರಿಕ ನಮ್ಮ ಎಲ್ಲಾ ಪರಮಾಣು ಕೇಂದ್ರಗಳನ್ನು ನಾಶ ಮಾಡಿದೆ ಎಂದು ಹೇಳುತ್ತದೆ. ಆದರೆ ಅದೇ ಸಮಯದಲ್ಲಿ ನಾವು ಪರಮಾಣು ಶಸ್ತ್ರಾಸ್ತ್ರ ಹೊಂದಿದ್ದೇವೆ ಎಂದು ಆರೋಪಿಸುತ್ತದೆ. ನಾವು ಎನ್ಪಿಟಿ ಒಪ್ಪಂದದ ಸಹಿ ರಾಷ್ಟ್ರವಾಗಿದ್ದು, ಶಾಂತಿಯುತ ಪರಮಾಣು ತಂತ್ರಜ್ಞಾನ ಅಭಿವೃದ್ಧಿಗೆ ಹಕ್ಕು ಹೊಂದಿದ್ದೇವೆ” ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಆರಂಭಿಸಿದ ಈ ಯುದ್ಧವು ಕೆಲವು ಆಂತರಿಕ ರಾಜಕೀಯ ಸಮಸ್ಯೆಗಳನ್ನು ಮುಚ್ಚಿಹಾಕಲು ನಡೆಸಿದ ಪ್ರಯತ್ನವಾಗಿದ್ದು, ಜಾಗತಿಕ ಗಮನವನ್ನು ಬೇರೆ ವಿಷಯಗಳಿಂದ ತಿರುಗಿಸಲು ಈ ದಾಳಿ ನಡೆದಿದೆ ಎಂದು ಇಲಾಹಿ ಆರೋಪಿಸಿದರು. ಯುದ್ಧದಲ್ಲಿ ಇರಾನ್ ತನ್ನ ಉನ್ನತ ನಾಯಕರು ಸೇರಿದಂತೆ ಹಲವರನ್ನು ಕಳೆದುಕೊಂಡಿದೆ. ನೂರಾರು ನಾಗರಿಕರು, ಶಾಲಾ ಮಕ್ಕಳು ಮೃತಪಟ್ಟಿದ್ದಾರೆ. ಇರಾನ್ ಜನರು ‘ಶಹಾದತ್’ (ತ್ಯಾಗ) ಎಂಬ ತತ್ವವನ್ನು ನಂಬುತ್ತಾರೆ. ಅದಕ್ಕಾಗಿ ಹೋರಾಡಲು ಸಿದ್ಧರಾಗಿದ್ದಾರೆ ಎಂದು ಹೇಳಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm