ಬ್ರೇಕಿಂಗ್ ನ್ಯೂಸ್
03-05-26 02:35 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 3: ಯುದ್ಧವು ನಮ್ಮ ಆಯ್ಕೆಯಲ್ಲ, ಇರಾನ್ ಮೇಲೆ ಬಲವಂತವಾಗಿ ಹೇರಲ್ಪಟ್ಟದ್ದು ಎಂದು ಇರಾನ್ ಸರ್ವೋಚ್ಛ ನಾಯಕನ ಪ್ರತಿನಿಧಿ ಡಾ. ಅಬ್ದುಲ್ ಮಜೀದ್ ಹಕೀಮ್ ಇಲಾಹಿ ಹೇಳಿದ್ದಾರೆ.
ಬೆಂಗಳೂರು ಭೇಟಿ ವೇಳೆ ಮಾತನಾಡಿದ ಇಲಾಹಿ ಅವರು, ಇರಾನ್ ಎಂದಿಗೂ ಯುದ್ಧ ಬಯಸಲಿಲ್ಲ. ಆದರೆ, ನಮ್ಮ ಮೇಲೆ ಹೇರಲಾಯಿತು. ನಾವು ಈಗಲೂ ಯುದ್ಧ ಬಯಸುವುದಿಲ್ಲ, ಆದರೆ ಶತ್ರುಗಳು ಮುಂದುವರಿಸಿದರೆ 10 ವರ್ಷಗಳ ವರೆಗೂ ಹೋರಾಡಲು ನಾವು ಸಿದ್ಧ ಎಂದು ಹೇಳಿದ್ದಾರೆ.
ಅಮೆರಿಕ ಮತ್ತು ಇಸ್ರೇಲ್ ಈ ಯುದ್ಧವನ್ನು ಮೂರು ದಿನಗಳಲ್ಲಿ ಮುಗಿಸಬಹುದು ಎಂದುಕೊಂಡಿದ್ದವು, ಇರಾನ್ ಕುಸಿದು ಹೋಗುತ್ತದೆ ಮತ್ತು ಅದನ್ನು ವಿಭಜಿಸಬಹುದು ಎಂದು ಭಾವಿಸಿದ್ದವು. ಆದರೆ ಅದು ಸಾಧ್ಯವಾಗಲಿಲ್ಲ, ಮುಂದೆ ಕೂಡ ಆಗುವುದಿಲ್ಲ ಎಂದು ತಿಳಿಸಿದರು.
ಇರಾನ್ ತನ್ನ ಭೂಭಾಗದ ಒಂದು ಇಂಚು ಭೂಮಿಯನ್ನೂ ಕೂಡ ಬಿಟ್ಟುಕೊಡುವುದಿಲ್ಲ, ಬೇಕಾದರೆ ಜನರು ತಮ್ಮ ರಕ್ತವನ್ನೇ ಹರಿಸಲು ಸಿದ್ಧರಾಗಿದ್ದಾರೆ. “ಅಮೆರಿಕ ನಮ್ಮ ಎಲ್ಲಾ ಪರಮಾಣು ಕೇಂದ್ರಗಳನ್ನು ನಾಶ ಮಾಡಿದೆ ಎಂದು ಹೇಳುತ್ತದೆ. ಆದರೆ ಅದೇ ಸಮಯದಲ್ಲಿ ನಾವು ಪರಮಾಣು ಶಸ್ತ್ರಾಸ್ತ್ರ ಹೊಂದಿದ್ದೇವೆ ಎಂದು ಆರೋಪಿಸುತ್ತದೆ. ನಾವು ಎನ್ಪಿಟಿ ಒಪ್ಪಂದದ ಸಹಿ ರಾಷ್ಟ್ರವಾಗಿದ್ದು, ಶಾಂತಿಯುತ ಪರಮಾಣು ತಂತ್ರಜ್ಞಾನ ಅಭಿವೃದ್ಧಿಗೆ ಹಕ್ಕು ಹೊಂದಿದ್ದೇವೆ” ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಆರಂಭಿಸಿದ ಈ ಯುದ್ಧವು ಕೆಲವು ಆಂತರಿಕ ರಾಜಕೀಯ ಸಮಸ್ಯೆಗಳನ್ನು ಮುಚ್ಚಿಹಾಕಲು ನಡೆಸಿದ ಪ್ರಯತ್ನವಾಗಿದ್ದು, ಜಾಗತಿಕ ಗಮನವನ್ನು ಬೇರೆ ವಿಷಯಗಳಿಂದ ತಿರುಗಿಸಲು ಈ ದಾಳಿ ನಡೆದಿದೆ ಎಂದು ಇಲಾಹಿ ಆರೋಪಿಸಿದರು. ಯುದ್ಧದಲ್ಲಿ ಇರಾನ್ ತನ್ನ ಉನ್ನತ ನಾಯಕರು ಸೇರಿದಂತೆ ಹಲವರನ್ನು ಕಳೆದುಕೊಂಡಿದೆ. ನೂರಾರು ನಾಗರಿಕರು, ಶಾಲಾ ಮಕ್ಕಳು ಮೃತಪಟ್ಟಿದ್ದಾರೆ. ಇರಾನ್ ಜನರು ‘ಶಹಾದತ್’ (ತ್ಯಾಗ) ಎಂಬ ತತ್ವವನ್ನು ನಂಬುತ್ತಾರೆ. ಅದಕ್ಕಾಗಿ ಹೋರಾಡಲು ಸಿದ್ಧರಾಗಿದ್ದಾರೆ ಎಂದು ಹೇಳಿದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm