ಬ್ರೇಕಿಂಗ್ ನ್ಯೂಸ್
04-05-26 11:11 am HK News Staffer ದೇಶ - ವಿದೇಶ
ಬೆಂಗಳೂರು, ಮೇ 4: ಪಂಚ ರಾಜ್ಯಗಳ ಅಸೆಂಬ್ಲಿ ಮತ್ತು ರಾಜ್ಯದ ಬಾಗಲಕೋಟ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು ಭಾರೀ ಕುತೂಹಲ ವ್ಯಕ್ತವಾಗಿದೆ. ಮೊದಲ ಐದು ಸುತ್ತಿನ ಮತ ಎಣಿಕೆಯಲ್ಲಿ ಬಾಗಲಕೋಟ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭಾರೀ ಮುನ್ನಡೆ ಸಾಧಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಹಾವು ಏಣಿಯಾಟ ಕಂಡುಬಂದಿದೆ.
ಇದೇ ವೇಳೆ, ತಮಿಳುನಾಡಿನಲ್ಲಿ ಅಚ್ಚರಿ ಎನ್ನುವಂತೆ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು 90ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಅಧಿಕಾರ ಸ್ಥಾಪಿಸುವ ಸುಳಿವು ನೀಡಿದೆ. ಡಿಎಂಕೆ 48 ಹಾಗೂ ಎಐಎಡಿಎಂಕೆ ಪಕ್ಷವು 59 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವುದು ಕಂಡುಬಂದಿದೆ. ಹೀಗಾಗಿ ಬಹುತೇಕ ತಮಿಳುನಾಡಿನಲ್ಲಿ ಟಿವಿಕೆ ಮತ್ತು ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಸೇರಿಕೊಂಡು ಸಮ್ಮಿಶ್ರ ಸರ್ಕಾರ ರಚಿಸುವ ಸಾಧ್ಯತೆ ಇದೆ.
ಇದೇ ವೇಳೆ, ಕೇರಳದಲ್ಲಿ ಆಡಳಿತಾರೂಢ ಎಡರಂಗಕ್ಕೆ ತೀವ್ರ ಹಿನ್ನಡೆಯಾಗಿದೆ. ಎಡರಂಗ 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ ನೇತೃತ್ವದ ಯುಡಿಎಫ್ 95 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಬಿಜೆಪಿ 6 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿರುವುದು ಆರಂಭಿಕ ಸುತ್ತಿನ ಮತ ಎಣಿಕೆಯಲ್ಲಿ ವ್ಯಕ್ತವಾಗಿದೆ. ಹೀಗಾಗಿ ಇಲ್ಲಿ ಬಹುತೇಕ ಯುಡಿಎಫ್ ಬಹುಮತದಿಂದ ಅಧಿಕಾರ ಹಿಡಿಯುವುದು ಪಕ್ಕಾ ಆಗಿದೆ.
ಬಾಗಲಕೋಟ ಮತ್ತು ದಾವಣಗೆರೆ ಕ್ಷೇತ್ರಗಳಲ್ಲಿ ಆಡಳಿತರೂಢ ಕಾಂಗ್ರೆಸಿಗೆ ಹಿನ್ನಡೆಯಾಗುತ್ತದೆ ಎಂದು ಹೇಳಲಾಗಿದ್ದರೂ, ಸರ್ಕಾರದ ಪ್ರಮುಖ ಸಚಿವರೆಲ್ಲ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಕೆಲಸ ಮಾಡಿದ್ದರು. ದಾವಣಗೆರೆಯಲ್ಲಿ ಭಾರೀ ಬಂಡಾಯ ವ್ಯಕ್ತವಾದರೂ ಅದನ್ನು ಕೂಡ ಶಮನ ಮಾಡಿದ್ದರು. ಅದರ ನಡುವೆಯೂ ಪಕ್ಷ ವಿರೋಧಿ ಕೆಲಸ ಮಾಡಿದ್ದಕ್ಕಾಗಿ ಕೆಲವು ಮುಸ್ಲಿಂ ನಾಯಕರ ಮೇಲೆ ಕ್ರಮ ಜರುಗಿಸಲಾಗಿತ್ತು. ದಾವಣಗೆರೆ ಕ್ಷೇತ್ರದಲ್ಲಿ ಮೂರು ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ 2777 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಅವರನ್ನು ಹಿಂದಕ್ಕೆ ಹಾಕಿದ್ದಾರೆ. ಬಾಗಲಕೋಟ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಂದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 15 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm