ಬ್ರೇಕಿಂಗ್ ನ್ಯೂಸ್
04-05-26 01:16 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 4: ಮಹತ್ವದ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದ್ದು ಸ್ಪಷ್ಟ ಬಹುಮತ ಪಡೆಯುವತ್ತ ಮುನ್ನುಗ್ಗಿದೆ. 12 ಗಂಟೆ ವೇಳೆಗೆ, ಬಿಜೆಪಿ 182 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದು ಸಿಎಂ ಮಮತಾ ದೀದಿ ಕೋಟೆಯನ್ನು ಪುಡಿ ಮಾಡಿದೆ.
ಮೂರು ಬಾರಿಯ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 101 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು ಇತರರು ಒಂದಂಕಿ ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು 294 ಸ್ಥಾನಗಳಿದ್ದು 148 ಬಹುಮತದ ಮ್ಯಾಜಿಕ್ ನಂಬರ್ ಆಗಿದೆ.
2021 ರಲ್ಲಿ ತೃಣಮೂಲ ಕಾಂಗ್ರೆಸ್ 215 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದಿದ್ದರೆ, ಬಿಜೆಪಿ 77 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್, ಸಿಪಿಎಂ ಶೂನ್ಯ ಸಾಧನೆ ಮಾಡಿತ್ತು. ಸಿಎಂ ಮಮತಾ ಬ್ಯಾನರ್ಜಿ ಆ ಸಂದರ್ಭದಲ್ಲಿ ನಂದಿಗ್ರಾಮದಲ್ಲಿ ಸೋತು ಬಳಿಕ ಭವಾನಿಪುರ್ ನಿಂದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
ಈ ಬಾರಿ ಮತಪಟ್ಟಿ ಪರಿಷ್ಕರಣೆ ಬಳಿಕ ಎಪ್ರಿಲ್ 23 ಮತ್ತು 29ರಂದು ಎರಡು ಹಂತದಲ್ಲಿ ಚುನಾವಣೆ ನಡೆದಿದ್ದು ದಾಖಲೆ ಎನ್ನುವಂತೆ 92.8 ಶೇ. ಮತ್ತು 91.47 ಶೇ. ವೋಟಿಂಗ್ ಆಗಿತ್ತು. ಎಕ್ಸಿಟ್ ಪೋಲ್ ನಲ್ಲಿ ಹೆಚ್ಚಿನ ಸಮೀಕ್ಷೆಗಳಲ್ಲಿ ಈ ಬಾರಿ ಬಿಜೆಪಿ ಗೆಲ್ಲುವ ಭವಿಷ್ಯ ಬಂದಿತ್ತು. ಆದರೆ ಚುನಾವಣಾ ವಿಶ್ಲೇಷಕರು ಬಿಜೆಪಿ ಗೆಲುವಿನ ಬಗ್ಗೆ ಸಂಶಯ ಹೊಂದಿದ್ದರು. ಯಾಕಂದ್ರೆ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬೇಸ್ ಇರಲಿಲ್ಲ. ಹಿಂದಿನಿಂದಲೂ ಕಾಂಗ್ರೆಸ್, ಆನಂತರ ಸಿಪಿಎಂ ಅಧಿಕಾರದಲ್ಲಿತ್ತು.
ಎಡರಂಗದ ಸುದೀರ್ಘ 25 ವರ್ಷಗಳ ಆಡಳಿತದ ಬಳಿಕ ಕಾಂಗ್ರೆಸನ್ನು ಒಡೆದು ತೃಣಮೂಲ ಕಾಂಗ್ರೆಸ್ ಸ್ಥಾಪಿಸಿ ಮಮತಾ ಬ್ಯಾನರ್ಜಿ ಅಧಿಕಾರ ಹಿಡಿದಿದ್ದರು. ನಂದಿಗ್ರಾಮದ ರೈತ ಹೋರಾಟ ಮಮತಾಗೆ ಸ್ಟಾರ್ ಪಟ್ಟ ಕೊಟ್ಟಿದ್ದು ರಾಜ್ಯದ ಗದ್ದುಗೆಯತ್ತ ಒಯ್ದಿತ್ತು. ಆದರೆ ಅಲ್ಪಸಂಖ್ಯಾತರ ಅತಿಯಾದ ಓಲೈಕೆ, ಬಾಂಗ್ಲಾ ನುಸುಳುಕೋರರ ಬಗ್ಗೆ ಮೃದು ಧೋರಣೆ ತಾಳಿದ್ದು ಈಗ ಮತದಾರರಿಂದ ತಪರಾಕಿ ಅನುಭವಿಸುವಂತಾಗಿದೆ. ಇದನ್ನೇ ಚುನಾವಣಾ ವಿಷಯವಾಗಿಸಿದ ಬಿಜೆಪಿಯನ್ನು ಮತದಾರ ಈಗ ಕೈಹಿಡಿದು ಮೇಲೆತ್ತಿದ್ದಾನೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm