ಬ್ರೇಕಿಂಗ್ ನ್ಯೂಸ್
04-05-26 01:16 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 4: ಮಹತ್ವದ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದ್ದು ಸ್ಪಷ್ಟ ಬಹುಮತ ಪಡೆಯುವತ್ತ ಮುನ್ನುಗ್ಗಿದೆ. 12 ಗಂಟೆ ವೇಳೆಗೆ, ಬಿಜೆಪಿ 182 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದು ಸಿಎಂ ಮಮತಾ ದೀದಿ ಕೋಟೆಯನ್ನು ಪುಡಿ ಮಾಡಿದೆ.
ಮೂರು ಬಾರಿಯ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 101 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು ಇತರರು ಒಂದಂಕಿ ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು 294 ಸ್ಥಾನಗಳಿದ್ದು 148 ಬಹುಮತದ ಮ್ಯಾಜಿಕ್ ನಂಬರ್ ಆಗಿದೆ.
2021 ರಲ್ಲಿ ತೃಣಮೂಲ ಕಾಂಗ್ರೆಸ್ 215 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದಿದ್ದರೆ, ಬಿಜೆಪಿ 77 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್, ಸಿಪಿಎಂ ಶೂನ್ಯ ಸಾಧನೆ ಮಾಡಿತ್ತು. ಸಿಎಂ ಮಮತಾ ಬ್ಯಾನರ್ಜಿ ಆ ಸಂದರ್ಭದಲ್ಲಿ ನಂದಿಗ್ರಾಮದಲ್ಲಿ ಸೋತು ಬಳಿಕ ಭವಾನಿಪುರ್ ನಿಂದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
ಈ ಬಾರಿ ಮತಪಟ್ಟಿ ಪರಿಷ್ಕರಣೆ ಬಳಿಕ ಎಪ್ರಿಲ್ 23 ಮತ್ತು 29ರಂದು ಎರಡು ಹಂತದಲ್ಲಿ ಚುನಾವಣೆ ನಡೆದಿದ್ದು ದಾಖಲೆ ಎನ್ನುವಂತೆ 92.8 ಶೇ. ಮತ್ತು 91.47 ಶೇ. ವೋಟಿಂಗ್ ಆಗಿತ್ತು. ಎಕ್ಸಿಟ್ ಪೋಲ್ ನಲ್ಲಿ ಹೆಚ್ಚಿನ ಸಮೀಕ್ಷೆಗಳಲ್ಲಿ ಈ ಬಾರಿ ಬಿಜೆಪಿ ಗೆಲ್ಲುವ ಭವಿಷ್ಯ ಬಂದಿತ್ತು. ಆದರೆ ಚುನಾವಣಾ ವಿಶ್ಲೇಷಕರು ಬಿಜೆಪಿ ಗೆಲುವಿನ ಬಗ್ಗೆ ಸಂಶಯ ಹೊಂದಿದ್ದರು. ಯಾಕಂದ್ರೆ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬೇಸ್ ಇರಲಿಲ್ಲ. ಹಿಂದಿನಿಂದಲೂ ಕಾಂಗ್ರೆಸ್, ಆನಂತರ ಸಿಪಿಎಂ ಅಧಿಕಾರದಲ್ಲಿತ್ತು.
ಎಡರಂಗದ ಸುದೀರ್ಘ 25 ವರ್ಷಗಳ ಆಡಳಿತದ ಬಳಿಕ ಕಾಂಗ್ರೆಸನ್ನು ಒಡೆದು ತೃಣಮೂಲ ಕಾಂಗ್ರೆಸ್ ಸ್ಥಾಪಿಸಿ ಮಮತಾ ಬ್ಯಾನರ್ಜಿ ಅಧಿಕಾರ ಹಿಡಿದಿದ್ದರು. ನಂದಿಗ್ರಾಮದ ರೈತ ಹೋರಾಟ ಮಮತಾಗೆ ಸ್ಟಾರ್ ಪಟ್ಟ ಕೊಟ್ಟಿದ್ದು ರಾಜ್ಯದ ಗದ್ದುಗೆಯತ್ತ ಒಯ್ದಿತ್ತು. ಆದರೆ ಅಲ್ಪಸಂಖ್ಯಾತರ ಅತಿಯಾದ ಓಲೈಕೆ, ಬಾಂಗ್ಲಾ ನುಸುಳುಕೋರರ ಬಗ್ಗೆ ಮೃದು ಧೋರಣೆ ತಾಳಿದ್ದು ಈಗ ಮತದಾರರಿಂದ ತಪರಾಕಿ ಅನುಭವಿಸುವಂತಾಗಿದೆ. ಇದನ್ನೇ ಚುನಾವಣಾ ವಿಷಯವಾಗಿಸಿದ ಬಿಜೆಪಿಯನ್ನು ಮತದಾರ ಈಗ ಕೈಹಿಡಿದು ಮೇಲೆತ್ತಿದ್ದಾನೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm