ಬ್ರೇಕಿಂಗ್ ನ್ಯೂಸ್
04-05-26 07:04 pm HK News Staffer ದೇಶ - ವಿದೇಶ
ತಿರುವನಂತಪುರಂ, ಮೇ 4: ಕೇರಳದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಮೂರು ಅಸೆಂಬ್ಲಿ ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ರಾಜಧಾನಿ ತಿರುವನಂತಪುರಂ ಜಿಲ್ಲೆಯ ನೆಮ್ಮಾಮ್, ಕಜಕ್ಕೂಟ್ಟಮ್, ಚಾತನೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿ ವಿಧಾನಸಭೆ ಪ್ರವೇಶಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಕೇಂದ್ರ ಸಚಿವ ರಾಜೀವ ಚಂದ್ರಶೇಖರ್ ಅವರು ಸಿಪಿಎಂ ಅಭ್ಯರ್ಥಿ, ಹಾಲಿ ಸಚಿವ ಶಿವನ್ ಕುಟ್ಟಿ ಅವರನ್ನು 3500 ಮತಗಳಿಂದ ಸೋಲಿಸಿ ಶಾಸಕರಾಗಿದ್ದಾರೆ. ತಿರುವನಂತಪುರಂ ಜಿಲ್ಲೆಯ ಮತ್ತೊಂದು ಕ್ಷೇತ್ರ ಕಜಕ್ಕೂಟ್ಟಂನಲ್ಲಿ ಮಾಜಿ ಕೇಂದ್ರ ಸಚಿವ ಮುರಳೀಧರನ್ ಗೆಲುವು ಸಾಧಿಸಿದ್ದು ಸಿಪಿಎಂ ಅಭ್ಯರ್ಥಿ ಕಡಕಂಪಳ್ಳಿ ಸುರೇಂದ್ರನ್ ಅವರನ್ನು ಅಲ್ಪ ಮತಗಳಿಂದ ಸೋಲಿಸಿ ಗೆಲುವು ಸಾಧಿಸಿದ್ದಾರೆ.
ಅದೇ ಜಿಲ್ಲೆಯ ಚಾತನೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿಬಿ ಗೋಪಕುಮಾರ್ 4300 ಮತಗಳಿಂದ ಸಿಪಿಎಂ ಅಭ್ಯರ್ಥಿ ರಾಜೇಂದ್ರನ್ ಅವರನ್ನು ಸೋಲಿಸಿ ಇತಿಹಾಸ ನಿರ್ಮಿಸಿದ್ದಾರೆ. 2016ರಲ್ಲಿ ಓ ರಾಜಗೋಪಾಲ್ ನೆಮ್ಮಾಮ್ ಕ್ಷೇತ್ರದಲ್ಲಿ ಗೆಲುವು ಕಂಡಿದ್ದು ಬಿಟ್ಟರೆ ಬಿಜೆಪಿ ಬೇರಾವುದೇ ಶಾಸಕ ಸ್ಥಾನ ಗೆದ್ದಿರಲಿಲ್ಲ. ಇದೇ ಮೊದಲ ಬಾರಿಗೆ ಒಂದಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆದು ಬಿಜೆಪಿ ಗೆಲುವಿನ ನಗೆ ಬೀರಿದೆ.
ಪಾಲಕ್ಕಾಡ್ ನಲ್ಲಿ ಶೋಭಾ ಸುರೇಂದ್ರನ್ ಖಾತೆ ತೆರೆಯುವ ಲಕ್ಷಣ ಇದ್ದರೂ, ಕಾಂಗ್ರೆಸಿನ ರಮೇಶ್ ಪಿಶರೋಡಿ ಮುಂದೆ ಸೋಲನುಭವಿಸಿದ್ದಾರೆ. ತ್ರಿಶೂರ್ ಜಿಲ್ಲೆಯಲ್ಲಿ ಸುರೇಶ್ ಗೋಪಿ ಸಂಸದನಾಗಿದ್ದರೂ ಅಲ್ಲಿನ ಅಸೆಂಬ್ಲಿ ಕ್ಷೇತ್ರದಲ್ಲಿ ಪದ್ಮಜಾ ವೇಣುಗೋಪಾಲ್ ಗೆ ಗೆಲುವು ದಕ್ಕಲಿಲ್ಲ. ವಿಶ್ವಾಸ ಮೂಡಿಸಿದ್ದ ಕೇಂದ್ರ ಸಚಿವ ಜಾರ್ಜ್ ಕುರಿಯನ್ ಅವರು ಕೊಟ್ಟಾಯಂ ಜಿಲ್ಲೆಯ ಕಂಜಿರಪಳ್ಳಿ ಕ್ಷೇತ್ರದಲ್ಲಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.
ಕಾಂಗ್ರೆಸ್ ನೇತೃತ್ವದ ಯುಡಿಎಫ್ ನೂರು ಸೀಟು ಗೆಲ್ಲುವ ಮೂಲಕ ಹತ್ತು ವರ್ಷಗಳ ಬಳಿಕ ಕೇರಳದಲ್ಲಿ ಅಧಿಕಾರ ಹಿಡಿದಿದೆ. ಆಡಳಿತ ರೂಢ ಎಡರಂಗ 35 ಸ್ಥಾನಗಳೊಂದಿಗೆ ಹೀನಾಯ ಸೋಲು ಕಂಡು ಅಧಿಕಾರದಿಂದ ಹೊರಬಿದ್ದಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm