ಬ್ರೇಕಿಂಗ್ ನ್ಯೂಸ್
05-05-26 10:27 pm HK News Staffer ದೇಶ - ವಿದೇಶ
ಚೆನ್ನೈ, ಮೇ 5: ತಮಿಳುನಾಡು ಚುನಾವಣೆಯಲ್ಲಿ ದಳಪತಿ ಖ್ಯಾತಿಯ ವಿಜಯ್ ಅವರ ಟಿವಿಕೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆ ಮೂಲಕ ವಿಜಯ್ ರಾಜ್ಯದ ನೂತನ ಸಿಎಂ ಆಗಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದ್ದಾರೆ.
ತಮಿಳಿನ ಸ್ಟಾರ್ ನಟನಾಗಿ, ವೃತ್ತಿ ಬದುಕಿನ ಉತ್ತುಂಗದಲ್ಲಿದ್ದಾಗಲೇ ವಿಜಯ್ ಸಿನಿಮಾ ಬಿಟ್ಟು ರಾಜಕೀಯಕ್ಕೆ ಕಾಲಿಟ್ಟಿದ್ದರು. ಅವರ ನಡೆ ಬಹುತೇಕರಿಗೆ ಅಚ್ಚರಿ ತಂದಿತ್ತು. ಚುನಾವಣೆಯಲ್ಲಿ ಅವರಿಗೆ ಹೆಚ್ಚೇನೂ ಸ್ಥಾನ ಸಿಗಲಿಕ್ಕಿಲ್ಲ ಎಂದೇ ಭಾವಿಸಲಾಗಿತ್ತು. ಆದರೆ ವಿಜಯ್ ಪಕ್ಷ ಬರೋಬ್ಬರಿ 108 ಸ್ಥಾನಗಳನ್ನು ಗಳಿಸಿ ಹೊಸ ಇತಿಹಾಸ ಬರೆದಿದೆ.
ವಿಜಯ್ ಅವರ ಗೆಲುವು ದೇಶದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆಗುತ್ತಿದೆ. ಈ ನಡುವೆ ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ನಟ ವಿಜಯ್ ಅವರು ಮಾಜಿ ಸಿಎಂ ಕರುಣಾನಿಧಿ ಜೊತೆಗೆ ನಿಂತುಕೊಂಡಿದ್ದ ಹಳೆಯ ಫೋಟೋವನ್ನು ಹಂಚಿಕೊಂಡಿದ್ದು, ಕುಹಕದ ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೊ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆಯನ್ನು ದೊಡ್ಡ ಅಂತರದಲ್ಲಿ ಸೋಲಿಸಿ ದ್ರಾವಿಡ ನಾಡಿನಲ್ಲಿ ನೂತನ ಸಿಎಂ ಆಗಲು ವಿಜಯ್ ಸಜ್ಜಾಗಿರುವಾಗಲೇ ಈ ಫೋಟೊ ಬಂದಿರುವುದು ಗಮನ ಸೆಳೆದಿದೆ.
ಸ್ಟಾಲಿನ್ ಸೋಲಿನ ಬೆನ್ನಲ್ಲೇ, ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಎಕ್ಸ್ ಖಾತೆಯಲ್ಲಿ ವಿಜಯ್ ಅವರ ಹಳೆಯ ಫೋಟೋ ಹಂಚಿಕೊಂಡಿದ್ದಾರೆ. ಅದರಲ್ಲಿ ದಿವಂಗತ ಎಂ. ಕರುಣಾನಿಧಿ ಅವರ ಹಿಂದೆ ವಿಜಯ್ ನಿಂತಿರುವುದನ್ನು ಕಾಣಬಹುದು. ಈ ಫೋಟೋಗೆ ಆರ್ಜಿವಿ ತಮ್ಮದೇ ಧಾಟಿಯಲ್ಲಿ ವರ್ಣನೆ ನೀಡಿದ್ದಾರೆ. 'ತನ್ನ ಹಿಂದೆ ನಿಂತಿರುವ ಈ ಹುಡುಗ ಒಂದು ದಿನ ತನ್ನ ಪಕ್ಷವನ್ನೇ ನಾಶ ಮಾಡುತ್ತಾನೆ ಎಂದು ಕಲೈಂಜರ್ (ಕರುಣಾನಿಧಿ) ಕನಸಿನಲ್ಲೂ ಯೋಚಿಸಿರಲಿಕ್ಕಿಲ್ಲ," ಎಂದು ಬರೆದಿದ್ದಾರೆ.
ವಿಜಯ್ ಅವರ ಈ ಐತಿಹಾಸಿಕ ಗೆಲುವಿಗೆ ಸ್ಟಾರ್ ನಟರಾದ ರಜಿನಿಕಾಂತ್, ಕಮಲ್ ಹಾಸನ್, ವಿಕ್ರಮ್, ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ, ಖುಷ್ಟೂ ಸುಂದರ್, ಕೀರ್ತಿ ಸುರೇಶ್, ಎ.ಆರ್. ರೆಹಮಾನ್, ಶಿವಕಾರ್ತಿಕೇಯನ್, ಮೋಹನ್ ಲಾಲ್ ಮತ್ತು ಸಂದೀಪ್ ರೆಡ್ಡಿ ವಂಗಾ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
In a surprising political twist, actor-turned-politician Vijay, popularly known as “Dalapathi,” has shaken the political landscape of Tamil Nadu. A viral photo circulating on social media shows a younger Vijay standing behind veteran leader M. Karunanidhi, sparking widespread चर्चा and nostalgia.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm