ಬ್ರೇಕಿಂಗ್ ನ್ಯೂಸ್
05-05-26 10:27 pm HK News Staffer ದೇಶ - ವಿದೇಶ
ಚೆನ್ನೈ, ಮೇ 5: ತಮಿಳುನಾಡು ಚುನಾವಣೆಯಲ್ಲಿ ದಳಪತಿ ಖ್ಯಾತಿಯ ವಿಜಯ್ ಅವರ ಟಿವಿಕೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆ ಮೂಲಕ ವಿಜಯ್ ರಾಜ್ಯದ ನೂತನ ಸಿಎಂ ಆಗಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದ್ದಾರೆ.
ತಮಿಳಿನ ಸ್ಟಾರ್ ನಟನಾಗಿ, ವೃತ್ತಿ ಬದುಕಿನ ಉತ್ತುಂಗದಲ್ಲಿದ್ದಾಗಲೇ ವಿಜಯ್ ಸಿನಿಮಾ ಬಿಟ್ಟು ರಾಜಕೀಯಕ್ಕೆ ಕಾಲಿಟ್ಟಿದ್ದರು. ಅವರ ನಡೆ ಬಹುತೇಕರಿಗೆ ಅಚ್ಚರಿ ತಂದಿತ್ತು. ಚುನಾವಣೆಯಲ್ಲಿ ಅವರಿಗೆ ಹೆಚ್ಚೇನೂ ಸ್ಥಾನ ಸಿಗಲಿಕ್ಕಿಲ್ಲ ಎಂದೇ ಭಾವಿಸಲಾಗಿತ್ತು. ಆದರೆ ವಿಜಯ್ ಪಕ್ಷ ಬರೋಬ್ಬರಿ 108 ಸ್ಥಾನಗಳನ್ನು ಗಳಿಸಿ ಹೊಸ ಇತಿಹಾಸ ಬರೆದಿದೆ.
ವಿಜಯ್ ಅವರ ಗೆಲುವು ದೇಶದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆಗುತ್ತಿದೆ. ಈ ನಡುವೆ ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ನಟ ವಿಜಯ್ ಅವರು ಮಾಜಿ ಸಿಎಂ ಕರುಣಾನಿಧಿ ಜೊತೆಗೆ ನಿಂತುಕೊಂಡಿದ್ದ ಹಳೆಯ ಫೋಟೋವನ್ನು ಹಂಚಿಕೊಂಡಿದ್ದು, ಕುಹಕದ ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೊ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆಯನ್ನು ದೊಡ್ಡ ಅಂತರದಲ್ಲಿ ಸೋಲಿಸಿ ದ್ರಾವಿಡ ನಾಡಿನಲ್ಲಿ ನೂತನ ಸಿಎಂ ಆಗಲು ವಿಜಯ್ ಸಜ್ಜಾಗಿರುವಾಗಲೇ ಈ ಫೋಟೊ ಬಂದಿರುವುದು ಗಮನ ಸೆಳೆದಿದೆ.
ಸ್ಟಾಲಿನ್ ಸೋಲಿನ ಬೆನ್ನಲ್ಲೇ, ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಎಕ್ಸ್ ಖಾತೆಯಲ್ಲಿ ವಿಜಯ್ ಅವರ ಹಳೆಯ ಫೋಟೋ ಹಂಚಿಕೊಂಡಿದ್ದಾರೆ. ಅದರಲ್ಲಿ ದಿವಂಗತ ಎಂ. ಕರುಣಾನಿಧಿ ಅವರ ಹಿಂದೆ ವಿಜಯ್ ನಿಂತಿರುವುದನ್ನು ಕಾಣಬಹುದು. ಈ ಫೋಟೋಗೆ ಆರ್ಜಿವಿ ತಮ್ಮದೇ ಧಾಟಿಯಲ್ಲಿ ವರ್ಣನೆ ನೀಡಿದ್ದಾರೆ. 'ತನ್ನ ಹಿಂದೆ ನಿಂತಿರುವ ಈ ಹುಡುಗ ಒಂದು ದಿನ ತನ್ನ ಪಕ್ಷವನ್ನೇ ನಾಶ ಮಾಡುತ್ತಾನೆ ಎಂದು ಕಲೈಂಜರ್ (ಕರುಣಾನಿಧಿ) ಕನಸಿನಲ್ಲೂ ಯೋಚಿಸಿರಲಿಕ್ಕಿಲ್ಲ," ಎಂದು ಬರೆದಿದ್ದಾರೆ.
ವಿಜಯ್ ಅವರ ಈ ಐತಿಹಾಸಿಕ ಗೆಲುವಿಗೆ ಸ್ಟಾರ್ ನಟರಾದ ರಜಿನಿಕಾಂತ್, ಕಮಲ್ ಹಾಸನ್, ವಿಕ್ರಮ್, ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ, ಖುಷ್ಟೂ ಸುಂದರ್, ಕೀರ್ತಿ ಸುರೇಶ್, ಎ.ಆರ್. ರೆಹಮಾನ್, ಶಿವಕಾರ್ತಿಕೇಯನ್, ಮೋಹನ್ ಲಾಲ್ ಮತ್ತು ಸಂದೀಪ್ ರೆಡ್ಡಿ ವಂಗಾ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
In a surprising political twist, actor-turned-politician Vijay, popularly known as “Dalapathi,” has shaken the political landscape of Tamil Nadu. A viral photo circulating on social media shows a younger Vijay standing behind veteran leader M. Karunanidhi, sparking widespread चर्चा and nostalgia.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm