ಬ್ರೇಕಿಂಗ್ ನ್ಯೂಸ್
05-05-26 10:27 pm HK News Staffer ದೇಶ - ವಿದೇಶ
ಚೆನ್ನೈ, ಮೇ 5: ತಮಿಳುನಾಡು ಚುನಾವಣೆಯಲ್ಲಿ ದಳಪತಿ ಖ್ಯಾತಿಯ ವಿಜಯ್ ಅವರ ಟಿವಿಕೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆ ಮೂಲಕ ವಿಜಯ್ ರಾಜ್ಯದ ನೂತನ ಸಿಎಂ ಆಗಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದ್ದಾರೆ.
ತಮಿಳಿನ ಸ್ಟಾರ್ ನಟನಾಗಿ, ವೃತ್ತಿ ಬದುಕಿನ ಉತ್ತುಂಗದಲ್ಲಿದ್ದಾಗಲೇ ವಿಜಯ್ ಸಿನಿಮಾ ಬಿಟ್ಟು ರಾಜಕೀಯಕ್ಕೆ ಕಾಲಿಟ್ಟಿದ್ದರು. ಅವರ ನಡೆ ಬಹುತೇಕರಿಗೆ ಅಚ್ಚರಿ ತಂದಿತ್ತು. ಚುನಾವಣೆಯಲ್ಲಿ ಅವರಿಗೆ ಹೆಚ್ಚೇನೂ ಸ್ಥಾನ ಸಿಗಲಿಕ್ಕಿಲ್ಲ ಎಂದೇ ಭಾವಿಸಲಾಗಿತ್ತು. ಆದರೆ ವಿಜಯ್ ಪಕ್ಷ ಬರೋಬ್ಬರಿ 108 ಸ್ಥಾನಗಳನ್ನು ಗಳಿಸಿ ಹೊಸ ಇತಿಹಾಸ ಬರೆದಿದೆ.
ವಿಜಯ್ ಅವರ ಗೆಲುವು ದೇಶದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆಗುತ್ತಿದೆ. ಈ ನಡುವೆ ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ನಟ ವಿಜಯ್ ಅವರು ಮಾಜಿ ಸಿಎಂ ಕರುಣಾನಿಧಿ ಜೊತೆಗೆ ನಿಂತುಕೊಂಡಿದ್ದ ಹಳೆಯ ಫೋಟೋವನ್ನು ಹಂಚಿಕೊಂಡಿದ್ದು, ಕುಹಕದ ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೊ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆಯನ್ನು ದೊಡ್ಡ ಅಂತರದಲ್ಲಿ ಸೋಲಿಸಿ ದ್ರಾವಿಡ ನಾಡಿನಲ್ಲಿ ನೂತನ ಸಿಎಂ ಆಗಲು ವಿಜಯ್ ಸಜ್ಜಾಗಿರುವಾಗಲೇ ಈ ಫೋಟೊ ಬಂದಿರುವುದು ಗಮನ ಸೆಳೆದಿದೆ.
ಸ್ಟಾಲಿನ್ ಸೋಲಿನ ಬೆನ್ನಲ್ಲೇ, ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಎಕ್ಸ್ ಖಾತೆಯಲ್ಲಿ ವಿಜಯ್ ಅವರ ಹಳೆಯ ಫೋಟೋ ಹಂಚಿಕೊಂಡಿದ್ದಾರೆ. ಅದರಲ್ಲಿ ದಿವಂಗತ ಎಂ. ಕರುಣಾನಿಧಿ ಅವರ ಹಿಂದೆ ವಿಜಯ್ ನಿಂತಿರುವುದನ್ನು ಕಾಣಬಹುದು. ಈ ಫೋಟೋಗೆ ಆರ್ಜಿವಿ ತಮ್ಮದೇ ಧಾಟಿಯಲ್ಲಿ ವರ್ಣನೆ ನೀಡಿದ್ದಾರೆ. 'ತನ್ನ ಹಿಂದೆ ನಿಂತಿರುವ ಈ ಹುಡುಗ ಒಂದು ದಿನ ತನ್ನ ಪಕ್ಷವನ್ನೇ ನಾಶ ಮಾಡುತ್ತಾನೆ ಎಂದು ಕಲೈಂಜರ್ (ಕರುಣಾನಿಧಿ) ಕನಸಿನಲ್ಲೂ ಯೋಚಿಸಿರಲಿಕ್ಕಿಲ್ಲ," ಎಂದು ಬರೆದಿದ್ದಾರೆ.
ವಿಜಯ್ ಅವರ ಈ ಐತಿಹಾಸಿಕ ಗೆಲುವಿಗೆ ಸ್ಟಾರ್ ನಟರಾದ ರಜಿನಿಕಾಂತ್, ಕಮಲ್ ಹಾಸನ್, ವಿಕ್ರಮ್, ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ, ಖುಷ್ಟೂ ಸುಂದರ್, ಕೀರ್ತಿ ಸುರೇಶ್, ಎ.ಆರ್. ರೆಹಮಾನ್, ಶಿವಕಾರ್ತಿಕೇಯನ್, ಮೋಹನ್ ಲಾಲ್ ಮತ್ತು ಸಂದೀಪ್ ರೆಡ್ಡಿ ವಂಗಾ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
In a surprising political twist, actor-turned-politician Vijay, popularly known as “Dalapathi,” has shaken the political landscape of Tamil Nadu. A viral photo circulating on social media shows a younger Vijay standing behind veteran leader M. Karunanidhi, sparking widespread चर्चा and nostalgia.
05-05-26 03:52 pm
HK News Desk
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ; ಶಾಸಕ ಡಿಎನ್ ಜೀ...
05-05-26 03:37 pm
ಚಿಕ್ಕಮಗಳೂರು ; ಕೆರೆಯಲ್ಲಿ ಬಾತುಕೋಳಿ ಹಿಡಿಯಲು ಹೋಗಿ...
04-05-26 10:33 pm
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
05-05-26 10:30 pm
HK News Staffer
ಎಲ್ಲರ ಲೆಕ್ಕ ತಲೆಕೆಳಗಾಗಿಸಿದ ದಳಪತಿ ; ಕರುಣಾನಿಧಿ ಹ...
05-05-26 10:27 pm
ಚುನಾವಣೆಯಲ್ಲಿ ನಾನು ಸೋತಿಲ್ಲ, ಯಾವುದೇ ಕಾರಣಕ್ಕೂ ರಾ...
05-05-26 08:34 pm
ಒಂದು ಕಾಲದ ಆಪ್ತನಿಂದಲೇ ಸಿಎಂ ಸ್ಟಾಲಿನ್ ಹೀನಾಯ ಸೋಲು...
04-05-26 09:51 pm
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
05-05-26 11:01 pm
HK News Desk
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
05-05-26 11:23 pm
HK News Desk
Minister Zameer Ahmed Khan, House robbery: ಸಚ...
05-05-26 05:22 pm
ಕ್ಯಾನ್ಸರ್ಗೆ ಬಲಿಯಾದ ವಿಜಿಲೆನ್ಸ್ ಎಸ್ಪಿ ಬಿ.ಎನ್...
03-05-26 09:19 pm
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm