ಬ್ರೇಕಿಂಗ್ ನ್ಯೂಸ್
07-05-26 03:50 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 7: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷದಲ್ಲಿ ಸ್ಪರ್ಧಿಸಿದ್ದ ತುಮಕೂರು ಮೂಲದ ಕನ್ನಡಿಗರೊಬ್ಬರು ಗೆದ್ದು ಶಾಸಕರಾಗಿದ್ದಾರೆ. ಮೆಟ್ಟುಪಾಳ್ಯಂ ಕ್ಷೇತ್ರದಿಂದ ಗೆದ್ದಿರುವ ಸುನಿಲ್ ಆನಂದ್ ಮೂಲತಃ ಕರ್ನಾಟಕದ ತುಮಕೂರು ಜಿಲ್ಲೆಯವರಾಗಿದ್ದು, ಇಲ್ಲಿನ ಗ್ರಾಮಸ್ಥರು ಸಂಭ್ರಮಿಸಿದ್ದಾರೆ.
ಸುನೀಲ್ ಅವರು ಮೊದಲು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದಲ್ಲಿದ್ದರು. ಆದರೆ, ವಿಜಯ್ ಚಟುವಟಿಕೆಗಳು, ಅವರ ವೇಗವನ್ನು ಗ್ರಹಿಸಿ, ಎರಡು ವರ್ಷಗಳ ಹಿಂದೆ ಟಿವಿಕೆ ಪಕ್ಷಕ್ಕೆ ಸೇರಿದ್ದರು. ಚುನಾವಣೆಯಲ್ಲಿ ಸುನೀಲ್ ಅವರು 75,664 ಮತಗಳನ್ನು ಪಡೆದು 7,768 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಎದುರಾಳಿಯಾಗಿದ್ದ ಕವಿತಾ ಕಲ್ಯಾಣಸುಂದರಂ 67,896 ಮತಗಳನ್ನು ಪಡೆದಿದ್ದಾರೆ. ಈ ಬಾರಿ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಏಕೈಕ ಕನ್ನಡಿಗ ಎಂಬ ಹೆಗ್ಗಳಿಕೆಗೆ ಸುನಿಲ್ ಪಾತ್ರರಾಗಿದ್ದಾರೆ.
ಕೃಷಿಕ ಮತ್ತು ಉದ್ಯಮಿಯಾಗಿರುವ ಸುನಿಲ್, ಮೂಲತಃ ತುರುವೇಕೆರೆ ತಾಲ್ಲೂಕಿನ ವಡಕೆಘಟ್ಟ ಗ್ರಾಮದ ಮೂಲದವರು. ಅದೇ ಗ್ರಾಮದ ಚಿಕ್ಕಪ್ಪ ಎಚ್.ಬಿ. ನಂಜೇಗೌಡ (ಮೂರ್ತಿ) ಜನತಾದಳದ ಮಾಜಿ ಶಾಸಕರಾಗಿದ್ದರು (1994). ಸುನಿಲ್ ಅವರ ತಾತ ಎಚ್.ಎಲ್. ಲಿಂಗೇಗೌಡ ಅವರು ಮೆಟ್ಟುಪಾಳಯಂನಲ್ಲಿ ಪುರಸಭೆ ಅಧ್ಯಕ್ಷರಾಗಿದ್ದರು. ತಂದೆ ನಾಗರಾಜು ಉದ್ಯಮಿಯಾಗಿದ್ದು, ಕೋವಿಡ್ ಸಂದರ್ಭದಲ್ಲಿ ನಿಧನರಾಗಿದ್ದರು. ಮೈಸೂರಿನಲ್ಲೂ ಅವರ ಕುಟುಂಬಕ್ಕೆ ವ್ಯಾಪಾರ ಸಂಬಂಧಗಳಿವೆ.
ಸುನಿಲ್ ಕುಟುಂಬ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗಾಗಿ ತುಮಕೂರಿಗೆ ಬರುತ್ತಿರುತ್ತಾರೆ. ಟಿವಿಕೆ ಪಕ್ಷದಲ್ಲಿ ಉತ್ತಮ ಸಂಘಟಕರಾಗಿ ಗುರುತಿಸಿಕೊಂಡಿರುವ ಸುನೀಲ್, ಜನಪರ ವ್ಯಕ್ತಿತ್ವದಿಂದಲೇ ಮೆಟ್ಟುಪಾಳಯಂ ಕ್ಷೇತ್ರದಲ್ಲಿ ಜನರ ವಿಶ್ವಾಸ ಗಳಿಸಿದ್ದಾರೆ ಎಂದು ಅವರ ಬಂಧುಗಳು ಹೇಳಿದ್ದಾರೆ.
ಚುನಾವಣಾ ಗೆಲುವಿನ ಬಳಿಕ ಪ್ರತಿಕ್ರಿಯಿಸಿದ ಸುನಿಲ್, “ನಾನು ಹೆಮ್ಮೆಯ ಕನ್ನಡಿಗ. ವರ್ಷಕ್ಕೆ ನಾಲ್ಕೈದು ಬಾರಿ ನಮ್ಮ ಊರಿಗೆ ಬಂದು ಕುಟುಂಬದ ದೇವತೆ ಮಾಯಮ್ಮ ಮತ್ತು ಆದಿಚುಂಚನಗಿರಿ ಕಾಲಭೈರವೇಶ್ವರ ದೇವರ ದರ್ಶನ ಪಡೆಯುತ್ತೇನೆ” ಎಂದು ಹೇಳಿದ್ದಾರೆ.
07-05-26 03:10 pm
HK News Staffer
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ; ಶಾಸಕ ಡಿಎನ್ ಜೀ...
05-05-26 03:37 pm
ಚಿಕ್ಕಮಗಳೂರು ; ಕೆರೆಯಲ್ಲಿ ಬಾತುಕೋಳಿ ಹಿಡಿಯಲು ಹೋಗಿ...
04-05-26 10:33 pm
07-05-26 03:50 pm
HK News Staffer
ನಾವು ಸರ್ಕಾರ ರಚಿಸಲ್ಲ, ಟಿವಿಕೆ ಸರ್ಕಾರಕ್ಕಾಗಿ ಆರು...
07-05-26 12:52 pm
ವಿಜಯ್ ಪಕ್ಷಕ್ಕೆ ಕಾಂಗ್ರೆಸ್ ಬೇಷರತ್ ಬೆಂಬಲ ; ಲೋಕಸಭ...
06-05-26 11:02 pm
ಸಾಮಾನ್ಯ ಆಟೋ ಚಾಲಕನನ್ನು ಶಾಸಕನಾಗಿಸಿದ 'ದಳಪತಿ' ; ಎ...
05-05-26 10:30 pm
ಎಲ್ಲರ ಲೆಕ್ಕ ತಲೆಕೆಳಗಾಗಿಸಿದ ದಳಪತಿ ; ಕರುಣಾನಿಧಿ ಹ...
05-05-26 10:27 pm
05-05-26 11:01 pm
HK News Desk
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
07-05-26 12:17 pm
HK News Staffer
ಬೆಂಗಳೂರಿನ ಇಸ್ರೋ ಕ್ಯಾಂಪಸ್ನಲ್ಲಿ ಭದ್ರತಾ ಆತಂಕ ;...
06-05-26 11:06 pm
Karkala, Fraud: ಆಯುರ್ವೇದ ಔಷದಿ ಸೇವಿಸಿದರೆ ಕ್ಯಾನ...
06-05-26 01:53 pm
ಯಾದಗಿರಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯ ಪ್ರೇಮ...
06-05-26 11:54 am
ಕಾರಿಗೆ ಬೆಂಕಿಯಿಟ್ಟು ಪ್ರಿಯತಮೆ ಕನ್ನಡ ಉಪನ್ಯಾಸಕಿಯನ...
06-05-26 10:44 am