ಬ್ರೇಕಿಂಗ್ ನ್ಯೂಸ್
07-05-26 03:50 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 7: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷದಲ್ಲಿ ಸ್ಪರ್ಧಿಸಿದ್ದ ತುಮಕೂರು ಮೂಲದ ಕನ್ನಡಿಗರೊಬ್ಬರು ಗೆದ್ದು ಶಾಸಕರಾಗಿದ್ದಾರೆ. ಮೆಟ್ಟುಪಾಳ್ಯಂ ಕ್ಷೇತ್ರದಿಂದ ಗೆದ್ದಿರುವ ಸುನಿಲ್ ಆನಂದ್ ಮೂಲತಃ ಕರ್ನಾಟಕದ ತುಮಕೂರು ಜಿಲ್ಲೆಯವರಾಗಿದ್ದು, ಇಲ್ಲಿನ ಗ್ರಾಮಸ್ಥರು ಸಂಭ್ರಮಿಸಿದ್ದಾರೆ.
ಸುನೀಲ್ ಅವರು ಮೊದಲು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದಲ್ಲಿದ್ದರು. ಆದರೆ, ವಿಜಯ್ ಚಟುವಟಿಕೆಗಳು, ಅವರ ವೇಗವನ್ನು ಗ್ರಹಿಸಿ, ಎರಡು ವರ್ಷಗಳ ಹಿಂದೆ ಟಿವಿಕೆ ಪಕ್ಷಕ್ಕೆ ಸೇರಿದ್ದರು. ಚುನಾವಣೆಯಲ್ಲಿ ಸುನೀಲ್ ಅವರು 75,664 ಮತಗಳನ್ನು ಪಡೆದು 7,768 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಎದುರಾಳಿಯಾಗಿದ್ದ ಕವಿತಾ ಕಲ್ಯಾಣಸುಂದರಂ 67,896 ಮತಗಳನ್ನು ಪಡೆದಿದ್ದಾರೆ. ಈ ಬಾರಿ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಏಕೈಕ ಕನ್ನಡಿಗ ಎಂಬ ಹೆಗ್ಗಳಿಕೆಗೆ ಸುನಿಲ್ ಪಾತ್ರರಾಗಿದ್ದಾರೆ.
ಕೃಷಿಕ ಮತ್ತು ಉದ್ಯಮಿಯಾಗಿರುವ ಸುನಿಲ್, ಮೂಲತಃ ತುರುವೇಕೆರೆ ತಾಲ್ಲೂಕಿನ ವಡಕೆಘಟ್ಟ ಗ್ರಾಮದ ಮೂಲದವರು. ಅದೇ ಗ್ರಾಮದ ಚಿಕ್ಕಪ್ಪ ಎಚ್.ಬಿ. ನಂಜೇಗೌಡ (ಮೂರ್ತಿ) ಜನತಾದಳದ ಮಾಜಿ ಶಾಸಕರಾಗಿದ್ದರು (1994). ಸುನಿಲ್ ಅವರ ತಾತ ಎಚ್.ಎಲ್. ಲಿಂಗೇಗೌಡ ಅವರು ಮೆಟ್ಟುಪಾಳಯಂನಲ್ಲಿ ಪುರಸಭೆ ಅಧ್ಯಕ್ಷರಾಗಿದ್ದರು. ತಂದೆ ನಾಗರಾಜು ಉದ್ಯಮಿಯಾಗಿದ್ದು, ಕೋವಿಡ್ ಸಂದರ್ಭದಲ್ಲಿ ನಿಧನರಾಗಿದ್ದರು. ಮೈಸೂರಿನಲ್ಲೂ ಅವರ ಕುಟುಂಬಕ್ಕೆ ವ್ಯಾಪಾರ ಸಂಬಂಧಗಳಿವೆ.
ಸುನಿಲ್ ಕುಟುಂಬ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗಾಗಿ ತುಮಕೂರಿಗೆ ಬರುತ್ತಿರುತ್ತಾರೆ. ಟಿವಿಕೆ ಪಕ್ಷದಲ್ಲಿ ಉತ್ತಮ ಸಂಘಟಕರಾಗಿ ಗುರುತಿಸಿಕೊಂಡಿರುವ ಸುನೀಲ್, ಜನಪರ ವ್ಯಕ್ತಿತ್ವದಿಂದಲೇ ಮೆಟ್ಟುಪಾಳಯಂ ಕ್ಷೇತ್ರದಲ್ಲಿ ಜನರ ವಿಶ್ವಾಸ ಗಳಿಸಿದ್ದಾರೆ ಎಂದು ಅವರ ಬಂಧುಗಳು ಹೇಳಿದ್ದಾರೆ.
ಚುನಾವಣಾ ಗೆಲುವಿನ ಬಳಿಕ ಪ್ರತಿಕ್ರಿಯಿಸಿದ ಸುನಿಲ್, “ನಾನು ಹೆಮ್ಮೆಯ ಕನ್ನಡಿಗ. ವರ್ಷಕ್ಕೆ ನಾಲ್ಕೈದು ಬಾರಿ ನಮ್ಮ ಊರಿಗೆ ಬಂದು ಕುಟುಂಬದ ದೇವತೆ ಮಾಯಮ್ಮ ಮತ್ತು ಆದಿಚುಂಚನಗಿರಿ ಕಾಲಭೈರವೇಶ್ವರ ದೇವರ ದರ್ಶನ ಪಡೆಯುತ್ತೇನೆ” ಎಂದು ಹೇಳಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm