ಬ್ರೇಕಿಂಗ್ ನ್ಯೂಸ್
07-05-26 03:50 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 7: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷದಲ್ಲಿ ಸ್ಪರ್ಧಿಸಿದ್ದ ತುಮಕೂರು ಮೂಲದ ಕನ್ನಡಿಗರೊಬ್ಬರು ಗೆದ್ದು ಶಾಸಕರಾಗಿದ್ದಾರೆ. ಮೆಟ್ಟುಪಾಳ್ಯಂ ಕ್ಷೇತ್ರದಿಂದ ಗೆದ್ದಿರುವ ಸುನಿಲ್ ಆನಂದ್ ಮೂಲತಃ ಕರ್ನಾಟಕದ ತುಮಕೂರು ಜಿಲ್ಲೆಯವರಾಗಿದ್ದು, ಇಲ್ಲಿನ ಗ್ರಾಮಸ್ಥರು ಸಂಭ್ರಮಿಸಿದ್ದಾರೆ.
ಸುನೀಲ್ ಅವರು ಮೊದಲು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದಲ್ಲಿದ್ದರು. ಆದರೆ, ವಿಜಯ್ ಚಟುವಟಿಕೆಗಳು, ಅವರ ವೇಗವನ್ನು ಗ್ರಹಿಸಿ, ಎರಡು ವರ್ಷಗಳ ಹಿಂದೆ ಟಿವಿಕೆ ಪಕ್ಷಕ್ಕೆ ಸೇರಿದ್ದರು. ಚುನಾವಣೆಯಲ್ಲಿ ಸುನೀಲ್ ಅವರು 75,664 ಮತಗಳನ್ನು ಪಡೆದು 7,768 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಎದುರಾಳಿಯಾಗಿದ್ದ ಕವಿತಾ ಕಲ್ಯಾಣಸುಂದರಂ 67,896 ಮತಗಳನ್ನು ಪಡೆದಿದ್ದಾರೆ. ಈ ಬಾರಿ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಏಕೈಕ ಕನ್ನಡಿಗ ಎಂಬ ಹೆಗ್ಗಳಿಕೆಗೆ ಸುನಿಲ್ ಪಾತ್ರರಾಗಿದ್ದಾರೆ.
ಕೃಷಿಕ ಮತ್ತು ಉದ್ಯಮಿಯಾಗಿರುವ ಸುನಿಲ್, ಮೂಲತಃ ತುರುವೇಕೆರೆ ತಾಲ್ಲೂಕಿನ ವಡಕೆಘಟ್ಟ ಗ್ರಾಮದ ಮೂಲದವರು. ಅದೇ ಗ್ರಾಮದ ಚಿಕ್ಕಪ್ಪ ಎಚ್.ಬಿ. ನಂಜೇಗೌಡ (ಮೂರ್ತಿ) ಜನತಾದಳದ ಮಾಜಿ ಶಾಸಕರಾಗಿದ್ದರು (1994). ಸುನಿಲ್ ಅವರ ತಾತ ಎಚ್.ಎಲ್. ಲಿಂಗೇಗೌಡ ಅವರು ಮೆಟ್ಟುಪಾಳಯಂನಲ್ಲಿ ಪುರಸಭೆ ಅಧ್ಯಕ್ಷರಾಗಿದ್ದರು. ತಂದೆ ನಾಗರಾಜು ಉದ್ಯಮಿಯಾಗಿದ್ದು, ಕೋವಿಡ್ ಸಂದರ್ಭದಲ್ಲಿ ನಿಧನರಾಗಿದ್ದರು. ಮೈಸೂರಿನಲ್ಲೂ ಅವರ ಕುಟುಂಬಕ್ಕೆ ವ್ಯಾಪಾರ ಸಂಬಂಧಗಳಿವೆ.
ಸುನಿಲ್ ಕುಟುಂಬ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗಾಗಿ ತುಮಕೂರಿಗೆ ಬರುತ್ತಿರುತ್ತಾರೆ. ಟಿವಿಕೆ ಪಕ್ಷದಲ್ಲಿ ಉತ್ತಮ ಸಂಘಟಕರಾಗಿ ಗುರುತಿಸಿಕೊಂಡಿರುವ ಸುನೀಲ್, ಜನಪರ ವ್ಯಕ್ತಿತ್ವದಿಂದಲೇ ಮೆಟ್ಟುಪಾಳಯಂ ಕ್ಷೇತ್ರದಲ್ಲಿ ಜನರ ವಿಶ್ವಾಸ ಗಳಿಸಿದ್ದಾರೆ ಎಂದು ಅವರ ಬಂಧುಗಳು ಹೇಳಿದ್ದಾರೆ.
ಚುನಾವಣಾ ಗೆಲುವಿನ ಬಳಿಕ ಪ್ರತಿಕ್ರಿಯಿಸಿದ ಸುನಿಲ್, “ನಾನು ಹೆಮ್ಮೆಯ ಕನ್ನಡಿಗ. ವರ್ಷಕ್ಕೆ ನಾಲ್ಕೈದು ಬಾರಿ ನಮ್ಮ ಊರಿಗೆ ಬಂದು ಕುಟುಂಬದ ದೇವತೆ ಮಾಯಮ್ಮ ಮತ್ತು ಆದಿಚುಂಚನಗಿರಿ ಕಾಲಭೈರವೇಶ್ವರ ದೇವರ ದರ್ಶನ ಪಡೆಯುತ್ತೇನೆ” ಎಂದು ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm