ಬ್ರೇಕಿಂಗ್ ನ್ಯೂಸ್
07-05-26 06:20 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 7: ಕ್ರಿಕೆಟ್ ನಲ್ಲಿ ಒಂದೊಂದು ರನ್ ಎಷ್ಟು ಮುಖ್ಯವಾಗುತ್ತೆ ಎನ್ನುವುದನ್ನು ನೋಡಿದ್ದೇವೆ. ಚುನಾವಣಾ ಕಣದಲ್ಲಿಯೂ ಒಂದು ಮತ ಎಷ್ಟು ಮಹತ್ವದ್ದು ಎನ್ನುವುದನ್ನು ತಮಿಳುನಾಡು ಚುನಾವಣೆ ಫಲಿತಾಂಶ ಮುಂದಿಟ್ಟು ಮಹೀಂದ್ರ ಗ್ರೂಪ್ ಆಫ್ ಕಂಪೆನಿ ಮಾಲೀಕ ಆನಂದ್ ಮಹೀಂದ್ರಾ ಟ್ವೀಟ್ ಮಾಡಿದ್ದಾರೆ.
ತಮಿಳುನಾಡು ಚುನಾವಣೆ ಫಲಿತಾಂಶವನ್ನು ಉಲ್ಲೇಖಿಸಿ ಆನಂದ್ ಮಹೀಂದ್ರಾ ಪೋಸ್ಟ್ ಮಾಡಿದ್ದಾರೆ. ಒಂದು ಮತದ ಮಹತ್ವ ಏನು ಎನ್ನುವುದನ್ನು ಶಾಲಾ ಹಂತದಲ್ಲೇ ಮಕ್ಕಳು ಅರಿಯುವಂತಾಗಬೇಕು. ಒಂದು ವೋಟಿನ ಮಹತ್ವ ಏನು ಎನ್ನುವುದು ಇದರಿಂದ ಅರ್ಥವಾಗುತ್ತದೆ ಎಂದು ಮಹೀಂದ್ರಾ ಹೇಳಿದ್ದಾರೆ.
ತಮಿಳುನಾಡಿನ ಶಿವಗಂಗಾ ಜಿಲ್ಲೆಯ ತಿರುಪತ್ತೂರು ಕ್ಷೇತ್ರದ ಚುನಾವಣೆ ಫಲಿತಾಂಶ ದೇಶದ ಗಮನ ಸೆಳೆದಿತ್ತು. ಡಿಎಂಕೆ - ಬಿಜೆಪಿ ಅಭ್ಯರ್ಥಿ ನಡುವೆ ಜಿದ್ದಾಜಿದ್ದು ನಿರೀಕ್ಷೆ ಮಾಡಿದ್ದರೂ ಟಿವಿಕೆ ಸ್ಪರ್ಧೆಯಿಂದಾಗಿ ಮತದಾರರ ತೀರ್ಪು ವ್ಯತಿರಿಕ್ತವಾಗಿತ್ತು. ಟಿವಿಕೆ ಅಭ್ಯರ್ಥಿ ಶ್ರೀನಿವಾಸ ಸೇತುಪತಿ, ಡಿಎಂಕೆಯ ಕೆಆರ್ ಪೆರಿಯಕರುಪ್ಪನ್ ಅವರನ್ನು ಕೇವಲ ಒಂದು ಮತದಿಂದ ಸೋಲಿಸಿ ಅಚ್ಚರಿ ಸೃಷ್ಟಿಸಿದ್ದಾರೆ. ಫಲಿತಾಂಶವನ್ನು ಆನಂದ್ ಮಹೀಂದ್ರಾ, ತಮ್ಮ ಟ್ವೀಟ್’ನಲ್ಲಿ ಉಲ್ಲೇಖಿಸಿದ್ದಾರೆ.
ತಿರುಪತ್ತೂರು ಕ್ಷೇತ್ರದ ಚುನಾವಣೆ ಫಲಿತಾಂಶ ನಾಟಕೀಯ ತಿರುವುಗಳನ್ನು ಪಡೆಯುತ್ತಲೇ ಇತ್ತು. ನನಗೆ ಮಾತ್ರ ಈ ಫಲಿತಾಂಶ ಜೀವನದಲ್ಲಿ ಮರೆಯಲಾಗದ್ದು ಎಂದು ಆನಂದ್ ಮಹೀಂದ್ರಾ ಹೇಳಿದ್ದಾರೆ. ಮಹೀಂದ್ರಾ ಅವರ ಪೋಸ್ಟ್ ಸುಮಾರು ಸುಮಾರು ಹತ್ತು ಲಕ್ಷ ವೀವ್ಸ್ ಪಡೆದುಕೊಂಡಿದೆ. ಇದಕ್ಕೆ ನೂರಾರು ಕಾಮೆಂಟುಗಳು ಬಂದಿದೆ.
ತಿರುಪತ್ತೂರಿನಲ್ಲಿ ಸುಮಾರು 1,66,000 ಮತದಾರರು ಮತ ಚಲಾಯಿಸಿದ್ದರು. ಇಬ್ಬರ ನಡುವೆ ಬಹುತೇಕ ಈ ಮತಗಳು ಹಂಚಿಹೋದವು. ಒಂದೇ ಒಂದು ಮತ, ಇತಿಹಾಸವನ್ನು ಬರೆಯಿತು. ಕ್ಷೇತ್ರದ ಫಲಿತಾಂಶದ ಬಗ್ಗೆ ಪ್ರಪಂಚದ ಎಲ್ಲಾ ಕಡೆ ಜನರಿಗೆ ತಿಳಿಯಬೇಕು. ಆ ಮೂಲಕ ಒಂದು ವ್ಯಕ್ತಿ ಎನ್ನುವುದು ಜಗತ್ತಿನ ದೊಡ್ಡ ಶಕ್ತಿ ಎನ್ನುವುದು ಪ್ರತೀ ಮಗುವಿಗೆ ತಿಳಿಯಲಿ ಎಂದು ಆನಂದ್ ಮಹೀಂದ್ರಾ ತಮ್ಮ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
The results of the recent state elections have been dramatic by any measure.
— anand mahindra (@anandmahindra) May 6, 2026
But for me, this image will remain the most unforgettable outcome of the elections.
More than 166,000 votes were cast between the two leading candidates in this constituency in Tamil Nadu.
And history… pic.twitter.com/85UtN3VkZC
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm