ಬ್ರೇಕಿಂಗ್ ನ್ಯೂಸ್
07-05-26 06:20 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 7: ಕ್ರಿಕೆಟ್ ನಲ್ಲಿ ಒಂದೊಂದು ರನ್ ಎಷ್ಟು ಮುಖ್ಯವಾಗುತ್ತೆ ಎನ್ನುವುದನ್ನು ನೋಡಿದ್ದೇವೆ. ಚುನಾವಣಾ ಕಣದಲ್ಲಿಯೂ ಒಂದು ಮತ ಎಷ್ಟು ಮಹತ್ವದ್ದು ಎನ್ನುವುದನ್ನು ತಮಿಳುನಾಡು ಚುನಾವಣೆ ಫಲಿತಾಂಶ ಮುಂದಿಟ್ಟು ಮಹೀಂದ್ರ ಗ್ರೂಪ್ ಆಫ್ ಕಂಪೆನಿ ಮಾಲೀಕ ಆನಂದ್ ಮಹೀಂದ್ರಾ ಟ್ವೀಟ್ ಮಾಡಿದ್ದಾರೆ.
ತಮಿಳುನಾಡು ಚುನಾವಣೆ ಫಲಿತಾಂಶವನ್ನು ಉಲ್ಲೇಖಿಸಿ ಆನಂದ್ ಮಹೀಂದ್ರಾ ಪೋಸ್ಟ್ ಮಾಡಿದ್ದಾರೆ. ಒಂದು ಮತದ ಮಹತ್ವ ಏನು ಎನ್ನುವುದನ್ನು ಶಾಲಾ ಹಂತದಲ್ಲೇ ಮಕ್ಕಳು ಅರಿಯುವಂತಾಗಬೇಕು. ಒಂದು ವೋಟಿನ ಮಹತ್ವ ಏನು ಎನ್ನುವುದು ಇದರಿಂದ ಅರ್ಥವಾಗುತ್ತದೆ ಎಂದು ಮಹೀಂದ್ರಾ ಹೇಳಿದ್ದಾರೆ.
ತಮಿಳುನಾಡಿನ ಶಿವಗಂಗಾ ಜಿಲ್ಲೆಯ ತಿರುಪತ್ತೂರು ಕ್ಷೇತ್ರದ ಚುನಾವಣೆ ಫಲಿತಾಂಶ ದೇಶದ ಗಮನ ಸೆಳೆದಿತ್ತು. ಡಿಎಂಕೆ - ಬಿಜೆಪಿ ಅಭ್ಯರ್ಥಿ ನಡುವೆ ಜಿದ್ದಾಜಿದ್ದು ನಿರೀಕ್ಷೆ ಮಾಡಿದ್ದರೂ ಟಿವಿಕೆ ಸ್ಪರ್ಧೆಯಿಂದಾಗಿ ಮತದಾರರ ತೀರ್ಪು ವ್ಯತಿರಿಕ್ತವಾಗಿತ್ತು. ಟಿವಿಕೆ ಅಭ್ಯರ್ಥಿ ಶ್ರೀನಿವಾಸ ಸೇತುಪತಿ, ಡಿಎಂಕೆಯ ಕೆಆರ್ ಪೆರಿಯಕರುಪ್ಪನ್ ಅವರನ್ನು ಕೇವಲ ಒಂದು ಮತದಿಂದ ಸೋಲಿಸಿ ಅಚ್ಚರಿ ಸೃಷ್ಟಿಸಿದ್ದಾರೆ. ಫಲಿತಾಂಶವನ್ನು ಆನಂದ್ ಮಹೀಂದ್ರಾ, ತಮ್ಮ ಟ್ವೀಟ್’ನಲ್ಲಿ ಉಲ್ಲೇಖಿಸಿದ್ದಾರೆ.
ತಿರುಪತ್ತೂರು ಕ್ಷೇತ್ರದ ಚುನಾವಣೆ ಫಲಿತಾಂಶ ನಾಟಕೀಯ ತಿರುವುಗಳನ್ನು ಪಡೆಯುತ್ತಲೇ ಇತ್ತು. ನನಗೆ ಮಾತ್ರ ಈ ಫಲಿತಾಂಶ ಜೀವನದಲ್ಲಿ ಮರೆಯಲಾಗದ್ದು ಎಂದು ಆನಂದ್ ಮಹೀಂದ್ರಾ ಹೇಳಿದ್ದಾರೆ. ಮಹೀಂದ್ರಾ ಅವರ ಪೋಸ್ಟ್ ಸುಮಾರು ಸುಮಾರು ಹತ್ತು ಲಕ್ಷ ವೀವ್ಸ್ ಪಡೆದುಕೊಂಡಿದೆ. ಇದಕ್ಕೆ ನೂರಾರು ಕಾಮೆಂಟುಗಳು ಬಂದಿದೆ.
ತಿರುಪತ್ತೂರಿನಲ್ಲಿ ಸುಮಾರು 1,66,000 ಮತದಾರರು ಮತ ಚಲಾಯಿಸಿದ್ದರು. ಇಬ್ಬರ ನಡುವೆ ಬಹುತೇಕ ಈ ಮತಗಳು ಹಂಚಿಹೋದವು. ಒಂದೇ ಒಂದು ಮತ, ಇತಿಹಾಸವನ್ನು ಬರೆಯಿತು. ಕ್ಷೇತ್ರದ ಫಲಿತಾಂಶದ ಬಗ್ಗೆ ಪ್ರಪಂಚದ ಎಲ್ಲಾ ಕಡೆ ಜನರಿಗೆ ತಿಳಿಯಬೇಕು. ಆ ಮೂಲಕ ಒಂದು ವ್ಯಕ್ತಿ ಎನ್ನುವುದು ಜಗತ್ತಿನ ದೊಡ್ಡ ಶಕ್ತಿ ಎನ್ನುವುದು ಪ್ರತೀ ಮಗುವಿಗೆ ತಿಳಿಯಲಿ ಎಂದು ಆನಂದ್ ಮಹೀಂದ್ರಾ ತಮ್ಮ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
The results of the recent state elections have been dramatic by any measure.
— anand mahindra (@anandmahindra) May 6, 2026
But for me, this image will remain the most unforgettable outcome of the elections.
More than 166,000 votes were cast between the two leading candidates in this constituency in Tamil Nadu.
And history… pic.twitter.com/85UtN3VkZC
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm