ಬ್ರೇಕಿಂಗ್ ನ್ಯೂಸ್
07-05-26 08:57 pm HK News Staffer ದೇಶ - ವಿದೇಶ
ತಿರುವನಂತಪುರಂ, ಮೇ 7: ಕೇರಳದಲ್ಲಿ ಹತ್ತು ವರ್ಷಗಳ ಬಳಿಕ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ ಮರಳಿದ್ದು, ಆಡಳಿತದ ಚುಕ್ಕಾಣಿ ಹಿಡಿಯಲು ಪ್ರಮುಖ ನಾಯಕರ ನಡುವೆ ಪೈಪೋಟಿ ಜೋರಾಗಿದೆ. ಕಳೆದ ಬಾರಿ ವಿಪಕ್ಷ ನಾಯಕರಾಗಿದ್ದ ವಿ.ಡಿ ಸತೀಶನ್, ಕೆಸಿ ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತ್ತಲ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಈ ನಡುವೆ, ಗುರುವಾರ ಬೆಳಗ್ಗೆ ಎಐಸಿಸಿ ವೀಕ್ಷಕರು ಕಾಂಗ್ರೆಸ್ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ.
ವೀಕ್ಷಕರಾಗಿ ಪಕ್ಷದ ಹಿರಿಯ ಮುಖಂಡರಾದ ಮುಕುಲ್ ವಾಸ್ನಿಕ್ ಮತ್ತು ಅಜಯ್ ಮಾಕನ್ ಆಗಮಿಸಿದ್ದು ತಿರುವನಂತಪುರದ ಇಂದಿರಾ ಭವನದಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅಲ್ಲದೆ, ಖಾಸಗಿ ಹೊಟೇಲ್ ನಲ್ಲಿಯೂ ಸಭೆ ನಡೆಸಿ ಅಭಿಪ್ರಾಯ ಕೇಳಿದ್ದಾರೆ. ಸಭೆಯಲ್ಲಿ ಸಿಎಂ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಾಯಕರಿಗೆ ವಹಿಸಿದ್ದಾರೆನ್ನುವ ಮಾಹಿತಿ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಜಯ್ ಮಾಕನ್, ನಾವು ಅಭಿಪ್ರಾಯ ಸಂಗ್ರಹಿಸಿದ್ದು ಇದರ ವರದಿಯನ್ನು ಎಐಸಿಸಿ ಅಧ್ಯಕ್ಷರಿಗೆ ಸಲ್ಲಿಸುತ್ತೇವೆ, ಒಂದೆರಡು ದಿನದಲ್ಲಿ ಹೊಸ ಸಿಎಂ ನಿರ್ಧಾರ ಆಗಲಿದೆ ಎಂದಿದ್ದಾರೆ.
ಇದೇ ವೇಳೆ, ಮೂವರು ನಾಯಕರ ಬೆಂಬಲಿಗರು ಸಿಎಂ ಸ್ಥಾನಕ್ಕಾಗಿ ತೀವ್ರ ಲಾಬಿ ಪ್ರಾರಂಭಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ನಾಯಕರ ಪರವಾಗಿ ಅಭಿಯಾನ ನಡೆಸಿದ್ದಾರೆ. ವಿ.ಡಿ. ಸತೀಶನ್ ಪರವಾಗಿ ಎರ್ನಾಕುಲಂ ಜಿಲ್ಲೆಯಲ್ಲಿ, ವೇಣುಗೋಪಾಲ್ ಪರವಾಗಿ ದೆಹಲಿಯಲ್ಲಿ ಬೆಂಬಲಿಗರು ಅಭಿನಂದನಾ ಸಮಾರಂಭಗಳನ್ನು ಆಯೋಜಿಸಿದ್ದಾರೆ.
ವಿಪಕ್ಷ ಮುಖಂಡರಾಗಿ ಪಕ್ಷದ ಸಾರಥ್ಯ ವಹಿಸಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವಲ್ಲಿ ವಿಡಿ ಸತೀಶನ್ ಶ್ರಮಿಸಿದ್ದಾರೆ. ಕೇರಳದ ಮುಖ್ಯಮಂತ್ರಿ ಸ್ಥಾನಕ್ಕೆ ಅವರೇ ಅರ್ಹರು ಎಂದು ಅವರ ಬೆಂಬಲಿಗರು ವಾದಿಸುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಜನಪ್ರಿಯತೆ ಮತ್ತು ಜನಬೆಂಬಲ ಮಾತ್ರ ಮುಖ್ಯವಲ್ಲ, ಪಕ್ಷದ ಶಾಸಕರ ಬೆಂಬಲವೂ ನಿರ್ಣಾಯಕ ಎಂದು ವೇಣುಗೋಪಾಲ್ ಬೆಂಬಲಿಗರು ಹೇಳುತ್ತಿದ್ದಾರೆ.
ಕೆ.ಸಿ. ವೇಣುಗೋಪಾಲ್ ರಾಜ್ಯಸಭೆ ಸಂಸದರಾಗಿದ್ದು, ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಿಲ್ಲ. ಆದರೂ ರಾಹುಲ್ ಗಾಂಧಿ ಅವರ ಜತೆಗಿನ ಸಖ್ಯವು ಇವರನ್ನು ಸಿಎಂ ಗಾದಿಗೆ ಹತ್ತಿರವಾಗಿಸಿದೆ. ರಾಹುಲ್ ಅವರ ಕಟ್ಟಾ ನಿಷ್ಠಾವಂತರಲ್ಲಿ ವೇಣುಗೋಪಾಲ್ ಒಬ್ಬರಾಗಿದ್ದು ಮತ್ತು ಕ್ರಿಸ್ತಿಯನ್ ಸಮುದಾಯ ಆಗಿರುವುದರಿಂದ ಇವರ ಆಯ್ಕೆಗೆ ಪ್ರಬಲ ಲಾಬಿ ಕೇಳಿಬಂದಿದೆ. ಇದೇ ವೇಳೆ ವೇಣುಗೋಪಾಲ್ ದೆಹಲಿಯಲ್ಲಿ ಇರುವುದರಿಂದ ಹೊರಗಿನವರು, ಒಳಗಿನವರು ಎಂಬ ವಿಚಾರದಲ್ಲೂ ಹಗ್ಗಜಗ್ಗಾಟ ನಡೆಯುತ್ತಿದೆ.
ಒಂದ್ವೇಳೆ, ಸಿಎಂ ಸ್ಥಾನ ಸಿಗದೇ ಇದ್ದರೆ ತಾನು ಯಾವುದೇ ಮಂತ್ರಿ ಸ್ಥಾನವನ್ನೂ ಸ್ವೀಕರಿಸುವುದಿಲ್ಲ. ಕಾಂಗ್ರೆಸ್ ಶಾಸಕನಾಗಿಯೇ ಇರುತ್ತೇನೆ ಎಂದು ವಿಡಿ ಸತೀಶನ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಎಐಸಿಸಿಗೆ ಶುಕ್ರವಾರದ ವೇಳೆಗೆ ವರದಿ ಸಲ್ಲಿಕೆಯಾದರೆ ಮೇ 10ರಂದು ಕೇರಳ ಸಿಎಂ ಘೋಷಣೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
07-05-26 03:10 pm
HK News Staffer
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ; ಶಾಸಕ ಡಿಎನ್ ಜೀ...
05-05-26 03:37 pm
ಚಿಕ್ಕಮಗಳೂರು ; ಕೆರೆಯಲ್ಲಿ ಬಾತುಕೋಳಿ ಹಿಡಿಯಲು ಹೋಗಿ...
04-05-26 10:33 pm
07-05-26 10:29 pm
HK News Staffer
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಕೇರಳದಲ್ಲಿ ಸಿಎಂ ಗಾದಿಗೆ ಫೈಟ್ ; ವೇಣುಗೋಪಾಲ್ - ವಿ....
07-05-26 08:57 pm
ತಿರುಪತ್ತೂರಿನಲ್ಲಿ ಒಂದು ಮತದಿಂದ ಗೆದ್ದ ಟಿವಿಕೆ ಅಭ್...
07-05-26 06:20 pm
ಟಿವಿಕೆ ಬ್ರಾಂಡ್ ಹಿಂದೋಡಿ ತಮಿಳುನಾಡು ಚುನಾವಣೆ ಗೆದ್...
07-05-26 03:50 pm
07-05-26 07:40 pm
HK News Staffer
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
07-05-26 08:00 pm
HK News Staffer
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm
ಬೆಂಗಳೂರಿನ ಇಸ್ರೋ ಕ್ಯಾಂಪಸ್ನಲ್ಲಿ ಭದ್ರತಾ ಆತಂಕ ;...
06-05-26 11:06 pm
Karkala, Fraud: ಆಯುರ್ವೇದ ಔಷದಿ ಸೇವಿಸಿದರೆ ಕ್ಯಾನ...
06-05-26 01:53 pm
ಯಾದಗಿರಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯ ಪ್ರೇಮ...
06-05-26 11:54 am