ಬ್ರೇಕಿಂಗ್ ನ್ಯೂಸ್
08-05-26 12:06 pm HK News Staffer ದೇಶ - ವಿದೇಶ
ಮುಂಬೈ, ಮೇ 8: ನವಿ ಮುಂಬೈನಿಂದ ಮಂಗಳೂರಿಗೆ ತೆರಳಬೇಕಿದ್ದ ವಿಮಾನದಲ್ಲಿ ಓರ್ವ ಪ್ರಯಾಣಿಕನ ಗಲಾಟೆ ಇಡೀ ಪ್ರಯಾಣವನ್ನು ಗೊಂದಲದ ಗೂಡನ್ನಾಗಿಸಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಸಾಮಾನ್ಯವಾಗಿ ಉದ್ದ ಸಾಲುಗಳು, ಭದ್ರತಾ ತಪಾಸಣೆ, ಗೇಟ್ ಬದಲಾವಣೆ ಮತ್ತು ವಿಳಂಬಗಳಿಂದಲೇ ವಿಮಾನ ಪ್ರಯಾಣಿಕರು ಬೇಸತ್ತಿರುತ್ತಾರೆ. ಆದರೆ ಈ ಬಾರಿ ಪರಿಸ್ಥಿತಿ ಮತ್ತಷ್ಟು ಕಿರಿಕಿರಿಯಾಗಿದ್ದು, ವಿಮಾನದೊಳಗೇ ವಾಗ್ವಾದ ಮತ್ತು ಉದ್ವಿಗ್ನತೆ ಸೃಷ್ಟಿಯಾಗಿದೆ.
ಮಾಹಿತಿ ಪ್ರಕಾರ, ಮುಂಬೈಯಿಂದ ಗುರುವಾರ ಬೆಳಗ್ಗೆ 11 ಗಂಟೆಗೆ ಟೇಕ್ ಆಫ್ ಆಗಬೇಕಿದ್ದ ವಿಮಾನ, ಓರ್ವ ಪ್ರಯಾಣಿಕ ತನ್ನ ಪತ್ನಿಯೊಂದಿಗೆ ತಡವಾಗಿ ಆಗಮಿಸಿದ ಕಾರಣ ಮಧ್ಯಾಹ್ನ 12.23ಕ್ಕೆ ಹೊರಟಿದೆ. ಆ ವೇಳೆ ಉಳಿದ ಎಲ್ಲಾ ಪ್ರಯಾಣಿಕರು ಅದಾಗಲೇ ವಿಮಾನದಲ್ಲಿ ಕುಳಿತು ಕಾಯುತ್ತಿದ್ದರು. ಸಾಮಾಜಿಕ ಜಾಲತಾಣ X ನಲ್ಲಿ ವೈರಲ್ ಆದ ವಿಡಿಯೋದಲ್ಲಿ, ತಡವಾಗಿ ಬಂದ ಪ್ರಯಾಣಿಕ ಹಾಗೂ ಬಳಿಕ ವಿಮಾನಕ್ಕೇರಿದ ಅವರ ಪತ್ನಿಯನ್ನು ನೋಡಿ ಕೆಲವರು ವ್ಯಂಗ್ಯವಾಗಿ ಚಪ್ಪಾಳೆ ತಟ್ಟಿ ಅಸಮಾಧಾನ ಹೊರಹಾಕಿರುವುದು ಕಂಡುಬಂದಿದೆ.
ಆದರೆ ಘಟನೆ ಅಲ್ಲಿಗೇ ನಿಲ್ಲಲಿಲ್ಲ. ಬಳಿಕ ವಿಮಾನದೊಳಗೆ ಕೆಲ ಪ್ರಯಾಣಿಕರು ತೀವ್ರ ವಾಗ್ವಾದ ನಡೆಸಿದ್ದಾರೆ. ಆತ ಸಹ ಪ್ರಯಾಣಿಕರೊಂದಿಗೆ ಆಕ್ರೋಶದಿಂದ ಮಾತನಾಡಿ, ಅಸಭ್ಯ ಪದ ಬಳಕೆ ಮಾಡಿದ್ದಲ್ಲದೆ, “ನೀಚೇ ಉತರ್ ದಿಖಾತಾ ಹೂಂ ಕೌನ್ ಹೂಂ ಮೈ…” (ಕೆಳಗಿಳಿದ ಬಳಿಕ ನಾನ್ಯಾರೆಂದು ತೋರಿಸುತ್ತೇನೆ) ಎಂದು ಬೆದರಿಕೆ ಹಾಕಿದ್ದಾನೆ.
ತನ್ನ ವಿಳಂಬವನ್ನು ಸಮರ್ಥಿಸಿಕೊಳ್ಳಲು “ವಿಮಾನಗಳು ಯಾವಾಗಲೂ ತಡವಾಗುತ್ತವೆ” ಎಂದು ಆತ ಹೇಳಿದ ಮಾತು ಉಳಿದ ಪ್ರಯಾಣಿಕರ ಕೋಪವನ್ನು ಇನ್ನಷ್ಟು ಹೆಚ್ಚಿಸಿದೆ. ಕೊನೆಗೆ ಪ್ರಯಾಣಿಕರ ಒತ್ತಾಯದ ಮೇರೆಗೆ ಆತ ಕ್ಷಮೆ ಕೇಳಿದ್ದಾನೆ. ಬಳಿಕ ವಿಮಾನ ಮಂಗಳೂರು ಕಡೆ ಪ್ರಯಾಣ ಮುಂದುವರಿಸಿತು.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕ ಶಿಸ್ತು ಮತ್ತು ಪರಸ್ಪರ ಗೌರವದ ಬಗ್ಗೆ ದೊಡ್ಡ ಚರ್ಚೆ ಆರಂಭವಾಗಿದೆ. ಸಮಯಕ್ಕೆ ಸರಿಯಾಗಿ ಬಂದು ಎಲ್ಲಾ ನಿಯಮಗಳನ್ನು ಪಾಲಿಸುವ ಪ್ರಯಾಣಿಕರಿಗೆ, ಕೆಲವರು ಮಾತ್ರ ತಮ್ಮ ಅನುಕೂಲಕ್ಕೆ ತಕ್ಕಂತೆ ವರ್ತಿಸುವುದು ಅಸಮಾಧಾನ ಮೂಡಿಸಿದೆ.
@Ministry_CA @mohol_murlidhar @Dev_Fadnavis @NidhiKamdarMH
— Punita Toraskar (@impuni) May 7, 2026
I am on board Mangaluru flight from Navi Mumbai . Our flight which was supposed to take off at 11.00 is taking off now at 12.23 bcoz of one passenger who arrived at 1100 for a flight supposed to take off at 1100 .
And… pic.twitter.com/LsMTz9I6yW
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm