ಬ್ರೇಕಿಂಗ್ ನ್ಯೂಸ್
08-05-26 06:38 pm HK News Staffer ದೇಶ - ವಿದೇಶ
ಚೆನ್ನೈ, ಮೇ 8: ತಮಿಳುನಾಡಿನಲ್ಲಿ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಅವರಿಗೆ ಕೊನೆಗೂ ಬಹುಮತದ ಮ್ಯಾಜಿಕ್ ನಂಬರ್ ಸಿಕ್ಕಿದ್ದು, ಕಾಂಗ್ರೆಸ್ ನಂತರ ಎಡರಂಗ ಮತ್ತು ವಿಸಿಕೆ ಪಾರ್ಟಿಯೂ ಬೆಂಬಲ ಘೋಷಿಸಿವೆ. ಹೀಗಾಗಿ ದಳಪತಿ ವಿಜಯ್ ಅವರು ಶೀಘ್ರದಲ್ಲೇ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಲಿದ್ದಾರೆ.
ಸರ್ಕಾರ ರಚನೆಗೆ ನಟ-ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆಗೆ ಸಿಪಿಐ ಮತ್ತು ಸಿಪಿಎಂ ಶುಕ್ರವಾರ ಬೇಷರತ್ ಬೆಂಬಲ ಘೋಷಿಸಿದೆ. ಇದರ ಬೆನ್ನಲ್ಲೇ ವಿಸಿಕೆ ಸಹ ಟಿವಿಕೆಗೆ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಶುಕ್ರವಾರ ಸುದೀರ್ಘ ಚರ್ಚೆಯ ನಂತರ, ಎಡಪಕ್ಷಗಳು ವಿಜಯ್ ಅವರ ಟಿವಿಕೆಗೆ ಬೆಂಬಲ ನೀಡಲು ನಿರ್ಧರಿಸಿತು. ಆನಂತರ, ಈ ಕುರಿತ ಪತ್ರವನ್ನು ತಮಿಳುನಾಡು ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರಿಗೆ ಕಳುಹಿಸಲಾಗಿದೆ.
ಇದೇ ರೀತಿಯ ಜಂಜಾಟ ಮುಂದುವರಿದರೆ ಮೇ 10ರ ಬಳಿಕ ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಮುಂದಾಗಿದೆ. ಆಮೂಲಕ ಹಿಂಬಾಗಿಲಿನಿಂದ ಬಿಜೆಪಿ ರಾಜ್ಯದ ಆಡಳಿತ ನಡೆಸಲಿದೆ. ಇದನ್ನು ತಪ್ಪಿಸಲು ನಾವು ಟಿವಿಕೆಗೆ ಬೇಷರತ್ ಬೆಂಬಲ ನೀಡಿದ್ದೇವೆ, ನಾವು ಯಾವುದೇ ಕ್ಯಾಬಿನೆಟ್ ಸ್ಥಾನ ಬಯಸುವುದಿಲ್ಲ ಎಂದು ಸಿಪಿಐಎಂ ರಾಜ್ಯ ಸೆಕ್ರೆಟರಿ ಟಿ.ಟಿ ಷಣ್ಮುಗಂ ತಿಳಿಸಿದ್ದಾರೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಸಿಪಿಐ ಮತ್ತು ಸಿಪಿಎಂ ತಲಾ ಇಬ್ಬರು ಶಾಸಕರನ್ನು ಹೊಂದಿದೆ. ಇದರ ಬೆನ್ನಲ್ಲೇ ವಿಸಿಕೆ(2) ಮತ್ತು ಒಂದೊಂದು ಸ್ಥಾನ ಇರುವ ಮುಸ್ಲಿಂ ಲೀಗ್ ಮತ್ತು ಎಕೆಎಂಎಂ ಕೂಡ ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿವೆ. ಇದರೊಂದಿಗೆ ವಿಜಯ್ ಸರ್ಕಾರದ ಬಲಾಬಲ 121 ಸ್ಥಾನಗಳಿಗೆ ಏರಿದೆ.
ಎಡಪಕ್ಷಗಳು ಮತ್ತು ಐಯುಎಂಎಲ್ ಡಿಎಂಕೆ ಮೈತ್ರಿಯಲ್ಲಿತ್ತಾದರೂ, ವಿಜಯ್ ಬೆಂಬಲ ಕೋರಿಕೆಯ ನಂತರ ಮಿತ್ರ ಪಕ್ಷಗಳಿಗೆ ನೀವು ಸರ್ಕಾರ ಸೇರುವ ಬಗ್ಗೆ ನಿರ್ಧಾರ ಮಾಡಿಕೊಳ್ಳಬಹುದು. ತನ್ನದೇನೂ ಅಭ್ಯಂತರ ಇಲ್ಲವೆಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹೇಳಿದ್ದರು. ಇದರ ಬೆನ್ನಲ್ಲೇ ಈ ಪಕ್ಷಗಳು ದಳಪತಿ ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿವೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm