ಬ್ರೇಕಿಂಗ್ ನ್ಯೂಸ್
08-05-26 06:38 pm HK News Staffer ದೇಶ - ವಿದೇಶ
ಚೆನ್ನೈ, ಮೇ 8: ತಮಿಳುನಾಡಿನಲ್ಲಿ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಅವರಿಗೆ ಕೊನೆಗೂ ಬಹುಮತದ ಮ್ಯಾಜಿಕ್ ನಂಬರ್ ಸಿಕ್ಕಿದ್ದು, ಕಾಂಗ್ರೆಸ್ ನಂತರ ಎಡರಂಗ ಮತ್ತು ವಿಸಿಕೆ ಪಾರ್ಟಿಯೂ ಬೆಂಬಲ ಘೋಷಿಸಿವೆ. ಹೀಗಾಗಿ ದಳಪತಿ ವಿಜಯ್ ಅವರು ಶೀಘ್ರದಲ್ಲೇ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಲಿದ್ದಾರೆ.
ಸರ್ಕಾರ ರಚನೆಗೆ ನಟ-ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆಗೆ ಸಿಪಿಐ ಮತ್ತು ಸಿಪಿಎಂ ಶುಕ್ರವಾರ ಬೇಷರತ್ ಬೆಂಬಲ ಘೋಷಿಸಿದೆ. ಇದರ ಬೆನ್ನಲ್ಲೇ ವಿಸಿಕೆ ಸಹ ಟಿವಿಕೆಗೆ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಶುಕ್ರವಾರ ಸುದೀರ್ಘ ಚರ್ಚೆಯ ನಂತರ, ಎಡಪಕ್ಷಗಳು ವಿಜಯ್ ಅವರ ಟಿವಿಕೆಗೆ ಬೆಂಬಲ ನೀಡಲು ನಿರ್ಧರಿಸಿತು. ಆನಂತರ, ಈ ಕುರಿತ ಪತ್ರವನ್ನು ತಮಿಳುನಾಡು ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರಿಗೆ ಕಳುಹಿಸಲಾಗಿದೆ.
ಇದೇ ರೀತಿಯ ಜಂಜಾಟ ಮುಂದುವರಿದರೆ ಮೇ 10ರ ಬಳಿಕ ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಮುಂದಾಗಿದೆ. ಆಮೂಲಕ ಹಿಂಬಾಗಿಲಿನಿಂದ ಬಿಜೆಪಿ ರಾಜ್ಯದ ಆಡಳಿತ ನಡೆಸಲಿದೆ. ಇದನ್ನು ತಪ್ಪಿಸಲು ನಾವು ಟಿವಿಕೆಗೆ ಬೇಷರತ್ ಬೆಂಬಲ ನೀಡಿದ್ದೇವೆ, ನಾವು ಯಾವುದೇ ಕ್ಯಾಬಿನೆಟ್ ಸ್ಥಾನ ಬಯಸುವುದಿಲ್ಲ ಎಂದು ಸಿಪಿಐಎಂ ರಾಜ್ಯ ಸೆಕ್ರೆಟರಿ ಟಿ.ಟಿ ಷಣ್ಮುಗಂ ತಿಳಿಸಿದ್ದಾರೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಸಿಪಿಐ ಮತ್ತು ಸಿಪಿಎಂ ತಲಾ ಇಬ್ಬರು ಶಾಸಕರನ್ನು ಹೊಂದಿದೆ. ಇದರ ಬೆನ್ನಲ್ಲೇ ವಿಸಿಕೆ(2) ಮತ್ತು ಒಂದೊಂದು ಸ್ಥಾನ ಇರುವ ಮುಸ್ಲಿಂ ಲೀಗ್ ಮತ್ತು ಎಕೆಎಂಎಂ ಕೂಡ ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿವೆ. ಇದರೊಂದಿಗೆ ವಿಜಯ್ ಸರ್ಕಾರದ ಬಲಾಬಲ 121 ಸ್ಥಾನಗಳಿಗೆ ಏರಿದೆ.
ಎಡಪಕ್ಷಗಳು ಮತ್ತು ಐಯುಎಂಎಲ್ ಡಿಎಂಕೆ ಮೈತ್ರಿಯಲ್ಲಿತ್ತಾದರೂ, ವಿಜಯ್ ಬೆಂಬಲ ಕೋರಿಕೆಯ ನಂತರ ಮಿತ್ರ ಪಕ್ಷಗಳಿಗೆ ನೀವು ಸರ್ಕಾರ ಸೇರುವ ಬಗ್ಗೆ ನಿರ್ಧಾರ ಮಾಡಿಕೊಳ್ಳಬಹುದು. ತನ್ನದೇನೂ ಅಭ್ಯಂತರ ಇಲ್ಲವೆಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹೇಳಿದ್ದರು. ಇದರ ಬೆನ್ನಲ್ಲೇ ಈ ಪಕ್ಷಗಳು ದಳಪತಿ ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿವೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
07-05-26 07:40 pm
HK News Staffer
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm