ಬ್ರೇಕಿಂಗ್ ನ್ಯೂಸ್
08-05-26 06:38 pm HK News Staffer ದೇಶ - ವಿದೇಶ
ಚೆನ್ನೈ, ಮೇ 8: ತಮಿಳುನಾಡಿನಲ್ಲಿ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಅವರಿಗೆ ಕೊನೆಗೂ ಬಹುಮತದ ಮ್ಯಾಜಿಕ್ ನಂಬರ್ ಸಿಕ್ಕಿದ್ದು, ಕಾಂಗ್ರೆಸ್ ನಂತರ ಎಡರಂಗ ಮತ್ತು ವಿಸಿಕೆ ಪಾರ್ಟಿಯೂ ಬೆಂಬಲ ಘೋಷಿಸಿವೆ. ಹೀಗಾಗಿ ದಳಪತಿ ವಿಜಯ್ ಅವರು ಶೀಘ್ರದಲ್ಲೇ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಲಿದ್ದಾರೆ.
ಸರ್ಕಾರ ರಚನೆಗೆ ನಟ-ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆಗೆ ಸಿಪಿಐ ಮತ್ತು ಸಿಪಿಎಂ ಶುಕ್ರವಾರ ಬೇಷರತ್ ಬೆಂಬಲ ಘೋಷಿಸಿದೆ. ಇದರ ಬೆನ್ನಲ್ಲೇ ವಿಸಿಕೆ ಸಹ ಟಿವಿಕೆಗೆ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಶುಕ್ರವಾರ ಸುದೀರ್ಘ ಚರ್ಚೆಯ ನಂತರ, ಎಡಪಕ್ಷಗಳು ವಿಜಯ್ ಅವರ ಟಿವಿಕೆಗೆ ಬೆಂಬಲ ನೀಡಲು ನಿರ್ಧರಿಸಿತು. ಆನಂತರ, ಈ ಕುರಿತ ಪತ್ರವನ್ನು ತಮಿಳುನಾಡು ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರಿಗೆ ಕಳುಹಿಸಲಾಗಿದೆ.
ಇದೇ ರೀತಿಯ ಜಂಜಾಟ ಮುಂದುವರಿದರೆ ಮೇ 10ರ ಬಳಿಕ ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಮುಂದಾಗಿದೆ. ಆಮೂಲಕ ಹಿಂಬಾಗಿಲಿನಿಂದ ಬಿಜೆಪಿ ರಾಜ್ಯದ ಆಡಳಿತ ನಡೆಸಲಿದೆ. ಇದನ್ನು ತಪ್ಪಿಸಲು ನಾವು ಟಿವಿಕೆಗೆ ಬೇಷರತ್ ಬೆಂಬಲ ನೀಡಿದ್ದೇವೆ, ನಾವು ಯಾವುದೇ ಕ್ಯಾಬಿನೆಟ್ ಸ್ಥಾನ ಬಯಸುವುದಿಲ್ಲ ಎಂದು ಸಿಪಿಐಎಂ ರಾಜ್ಯ ಸೆಕ್ರೆಟರಿ ಟಿ.ಟಿ ಷಣ್ಮುಗಂ ತಿಳಿಸಿದ್ದಾರೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಸಿಪಿಐ ಮತ್ತು ಸಿಪಿಎಂ ತಲಾ ಇಬ್ಬರು ಶಾಸಕರನ್ನು ಹೊಂದಿದೆ. ಇದರ ಬೆನ್ನಲ್ಲೇ ವಿಸಿಕೆ(2) ಮತ್ತು ಒಂದೊಂದು ಸ್ಥಾನ ಇರುವ ಮುಸ್ಲಿಂ ಲೀಗ್ ಮತ್ತು ಎಕೆಎಂಎಂ ಕೂಡ ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿವೆ. ಇದರೊಂದಿಗೆ ವಿಜಯ್ ಸರ್ಕಾರದ ಬಲಾಬಲ 121 ಸ್ಥಾನಗಳಿಗೆ ಏರಿದೆ.
ಎಡಪಕ್ಷಗಳು ಮತ್ತು ಐಯುಎಂಎಲ್ ಡಿಎಂಕೆ ಮೈತ್ರಿಯಲ್ಲಿತ್ತಾದರೂ, ವಿಜಯ್ ಬೆಂಬಲ ಕೋರಿಕೆಯ ನಂತರ ಮಿತ್ರ ಪಕ್ಷಗಳಿಗೆ ನೀವು ಸರ್ಕಾರ ಸೇರುವ ಬಗ್ಗೆ ನಿರ್ಧಾರ ಮಾಡಿಕೊಳ್ಳಬಹುದು. ತನ್ನದೇನೂ ಅಭ್ಯಂತರ ಇಲ್ಲವೆಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹೇಳಿದ್ದರು. ಇದರ ಬೆನ್ನಲ್ಲೇ ಈ ಪಕ್ಷಗಳು ದಳಪತಿ ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿವೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm