ಬ್ರೇಕಿಂಗ್ ನ್ಯೂಸ್
09-05-26 11:14 am HK News Staffer ದೇಶ - ವಿದೇಶ
ನವದೆಹಲಿ, ಮೇ 9: ಪೆಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಪಾಕಿಸ್ತಾನ ವಿರುದ್ಧ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ, ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ನೆರೆ ರಾಷ್ಟ್ರ ಚೀನಾ ಸಹಾಯ ಮಾಡಿರುವುದು ಈಗ ಸ್ಪಷ್ಟವಾಗಿದೆ. ಸ್ವತಃ ಚೀನಾ ಈ ಅಂಶವನ್ನು ಒಪ್ಪಿಕೊಂಡಿದೆ.
ಭಾರತದೊಂದಿಗಿನ ಯುದ್ಧ ಸಮಯದಲ್ಲಿ ಪಾಕಿಸ್ತಾನಕ್ಕೆ ಆನ್-ಸೈಟ್ ತಾಂತ್ರಿಕ ಬೆಂಬಲವನ್ನು ನೀಡಿರುವುದಾಗಿ ಚೀನಾ ಮೊದಲ ಬಾರಿಗೆ ದೃಢಪಡಿಸಿದೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. ಕಳೆದ ವರ್ಷ ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿತ್ತು, ಪೆಹಲ್ಗಾಮ್ ಉಗ್ರ ದಾಳಿಯಲ್ಲಿ 26 ಮಂದಿ ಪ್ರವಾಸಿಗರನ್ನು ಭಯೋತ್ಪಾದಕರು ಕೊಂದಿದ್ದರು.
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ 9 ಭಯೋತ್ಪಾದನಾ ಶಿಬಿರಗಳನ್ನು ಗುರಿಯಾಗಿಸಿ ಭಾರತ ದಾಳಿ ನಡೆಸಿತ್ತು. ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಉಗ್ರವಾದಿ ಗುಂಪುಗಳಿಗೆ ಸೇರಿದ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದರು. ಚೀನಾದ ಟಿವಿ ಮಾಧ್ಯಮವೊಂದು ವಾಯುಯಾನ ಉದ್ಯಮ ನಿಗಮದ ಎಂಜಿನಿಯರ್ಗಳು ಪಾಕಿಸ್ತಾನಿ ಕಾರ್ಯಾಚರಣೆಗಳನ್ನು ಬೆಂಬಲಿಸಿದ್ದಾಗಿ ತಿಳಿಸಿದ್ದಾರೆ. ಆಮೂಲಕ ಭಾರತ- ಪಾಕಿಸ್ತಾನ ಘರ್ಷಣೆಯಲ್ಲಿ ಚೀನಾದ ಸಿಬ್ಬಂದಿ ಪಾತ್ರ ವಹಿಸಿದ್ದಾರೆ ಎಂಬುದನ್ನು ಈ ಮೂಲಕ ಬೀಜಿಂಗ್ ಮೊದಲ ಬಾರಿಗೆ ಒಪ್ಪಿಕೊಂಡಿದೆ.
ಚೆಂಗ್ಡು ವಿಮಾನ ವಿನ್ಯಾಸ ಮತ್ತು ಸಂಶೋಧನಾ ಸಂಸ್ಥೆಯ ಎಂಜಿನಿಯರ್ ಜಾಂಗ್ ಹೆಂಗ್, ಸಂಘರ್ಷದ ಸಮಯದಲ್ಲಿ ಪಾಕಿಸ್ತಾನಕ್ಕೆ ತಾಂತ್ರಿಕ ಬೆಂಬಲ ನೀಡಿದವರಲ್ಲಿ ಒಬ್ಬರು ಎಂದು ವರದಿ ತಿಳಿಸಿದೆ. ಈ ಸಂಸ್ಥೆ ಚೀನಾದ ಮುಂದುವರಿದ ಯುದ್ಧ ವಿಮಾನಗಳು ಮತ್ತು ಮಾನವರಹಿತ ವೈಮಾನಿಕ ವಾಹನಗಳ ಪ್ರಮುಖ ಅಭಿವೃದ್ಧಿ ಸಂಸ್ಥೆಯಾಗಿದೆ. ಪಾಕಿಸ್ತಾನದ ವಾಯುಪಡೆಯು ಚೀನಾದ AVIC ಅಂಗಸಂಸ್ಥೆಯಿಂದ ತಯಾರಾದ ಚೀನಾ ನಿರ್ಮಿತ J-10CE ಜೆಟ್ಗಳನ್ನು ಯುದ್ಧಕ್ಕೆ ಬಳಸಿತ್ತು.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm