ಬ್ರೇಕಿಂಗ್ ನ್ಯೂಸ್
10-05-26 09:15 pm HK News Desk ದೇಶ - ವಿದೇಶ
ಚೆನ್ನೈ, ಮೇ 10: ತಮಿಳಿನ ಸೂಪರ್ ಸ್ಟಾರ್ ನಟರಾಗಿದ್ದ ವಿಜಯ್ ಈಗ ತಮಿಳುನಾಡು ಮುಖ್ಯಮಂತ್ರಿ ಪದವಿಗೇರಿದ್ದಾರೆ. ಸಾಮಾನ್ಯ ಚಿತ್ರ ನಟನಾಗಿದ್ದ ಮನುಷ್ಯ ಇಷ್ಟು ಬೇಗ ಸಿಎಂ ಪದವಿಗೇರುತ್ತಾನೆಂದು ಯಾವೊಬ್ಬ ರಾಜಕಾರಣಿಯೂ ಅಂದುಕೊಂಡಿರಲಿಲ್ಲ. ಅಂಥದ್ದರಲ್ಲಿ ಇದೀಗ ಪ್ರಮಾಣ ವಚನ ಸಮಾರಂಭದಲ್ಲೂ ವಿಶೇಷ ಎನ್ನಿಸುವಷ್ಟರ ಮಟ್ಟಿಗೆ ವಿಜಯ್ ಗಮನ ಸೆಳೆದಿದ್ದಾರೆ.
ಕಾಂಗ್ರೆಸ್, ಮುಸ್ಲಿಂ ಲೀಗ್ ಇನ್ನಿತರ ಸೆಕ್ಯುಲರ್ ಪಕ್ಷಗಳೊಂದಿಗೆ ಸೇರಿ ವಿಜಯ್ ಮೈತ್ರಿ ಸರ್ಕಾರ ರಚಿಸಿದರೂ ಪ್ರಮಾಣ ವಚನ ಸಮಾರಂಭದಲ್ಲೇ ವಂದೇ ಮಾತರಂ ಗೀತೆಯನ್ನು ಸಂಪೂರ್ಣ ಹಾಡಿಸುವ ಮೂಲಕ ಇಡೀ ದೇಶಕ್ಕೆ ಹೊಸ ಸಂದೇಶ ನೀಡಿದ್ದಾರೆ. ಇತ್ತೀಚೆಗಷ್ಟೇ ಕೇಂದ್ರ ಬಿಜೆಪಿ ಸರ್ಕಾರ ಸ್ವಾತಂತ್ರ್ಯ ಕಾಲದಲ್ಲಿ ಜನರನ್ನು ಒಂದುಗೂಡಿಸಿದ್ದ ವಂದೇ ಮಾತರಂ ಗೀತೆಗೆ ರಾಷ್ಟ್ರಗೀತೆ ಜನಗಣ ಮನ ಗೀತೆಯಷ್ಟೇ ಪ್ರಾಮುಖ್ಯತೆ ಕೊಡಬೇಕೆಂದು ಕಾನೂನು ಆದೇಶ ಮಾಡಿತ್ತು. ಆದರೆ ಸೆಕ್ಯುಲರ್, ತುಷ್ಟೀಕರಣದ ರಾಜಕೀಯದ ಕಾರಣಕ್ಕೆ ಬಿಜೆಪಿ ಸರ್ಕಾರದ ನಡೆಗೆ ಕಾಂಗ್ರೆಸ್ ಟೀಕೆ ಮಾಡಿತ್ತು.


ಆದರೆ ಗೀತೆಯನ್ನು ವಿರೋಧಿಸಿದ್ದ ರಾಹುಲ್ ಗಾಂಧಿ ಎದುರಲ್ಲೇ ಇದೀಗ ವಂದೇ ಮಾತರಂ ಗೀತೆಯನ್ನು ವಿಜಯ್ ತನ್ನ ಪ್ರಮಾಣವಚನ ಸಮಾರಂಭದಲ್ಲಿ ಹಾಡಿಸಿ ಗಮನ ಸೆಳೆದಿದ್ದಾರೆ. ಪೂರ್ಣ ಗೀತೆ ಹಾಡಿಸಿದ್ದಲ್ಲದೆ, ರಾಹುಲ್ ಸೇರಿದಂತೆ ಎಲ್ಲ ಸೆಕ್ಯುಲರ್ ನಾಯಕರೂ ಗೀತೆಗೆ ಎದ್ದು ನಿಂತು ಗೌರವ ಸೂಚಿಸುವಂತೆ ಮಾಡಿಸಿದ್ದಾರೆ. ವಿಶೇಷ ಅಂದರೆ, ನಿನ್ನೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಪ್ರಮಾಣ ವಚನ ಸ್ವೀಕರಿಸಿದರೂ ವಂದೇ ಮಾತರಂ ಪೂರ್ಣ ಗೀತೆಗೆ ಆದ್ಯತೆ ಕೊಟ್ಟಿರಲಿಲ್ಲ. ಬಂಗಾಳದ್ದೇ ಆದ ಬಂಕಿಮಚಂದ್ರ ಚಟರ್ಜಿ ವಂದೇ ಮಾತರಂ ಗೀತೆಯನ್ನು ರಚಿಸಿದ್ದರೂ, ರಾಷ್ಟ್ರಗೀತೆಯ ಮಾನ್ಯತೆ ಕೊಟ್ಟಿದ್ದ ಬಿಜೆಪಿ ಅವರದೇ ನಾಡಿನಲ್ಲಿ ಹೆಚ್ಚು ಮಹತ್ವ ಕೊಟ್ಟಿರಲಿಲ್ಲ.
ಸೆಕ್ಯುಲರ್ ಕಾರಣಕ್ಕೆ ಬಿಜೆಪಿ ಮತ್ತು ಅದರ ಸಿದ್ಧಾಂತವನ್ನು ವಿರೋಧಿಸುತ್ತ ಇದೀಗ ಸೆಕ್ಯುಲರ್ ಪಕ್ಷಗಳ ಜೊತೆಗೇ ಸೇರಿಕೊಂಡು ಸರ್ಕಾರ ರಚಿಸಿದ ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಬಿಜೆಪಿಗೆ ಠಕ್ಕರ್ ನೀಡಿ ರಾಜ್ಯಕ್ಕೆ ಹೊಸ ಸಂದೇಶ ನೀಡಿರುವುದು ವಿಶೇಷ. ತನ್ನ ಭಾಷಣದಲ್ಲಿಯೂ ಸೆಕ್ಯುಲರ್ ಆಡಳಿತದ ಹೊಸ ಅನುಭವ ಜನರಿಗೆ ನೀಡಲಿದ್ದೇನೆ ಎನ್ನುವ ವಾಗ್ದಾನವನ್ನೂ ವಿಜಯ್ ಮಾಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm