ಬ್ರೇಕಿಂಗ್ ನ್ಯೂಸ್
10-05-26 09:15 pm HK News Desk ದೇಶ - ವಿದೇಶ
ಚೆನ್ನೈ, ಮೇ 10: ತಮಿಳಿನ ಸೂಪರ್ ಸ್ಟಾರ್ ನಟರಾಗಿದ್ದ ವಿಜಯ್ ಈಗ ತಮಿಳುನಾಡು ಮುಖ್ಯಮಂತ್ರಿ ಪದವಿಗೇರಿದ್ದಾರೆ. ಸಾಮಾನ್ಯ ಚಿತ್ರ ನಟನಾಗಿದ್ದ ಮನುಷ್ಯ ಇಷ್ಟು ಬೇಗ ಸಿಎಂ ಪದವಿಗೇರುತ್ತಾನೆಂದು ಯಾವೊಬ್ಬ ರಾಜಕಾರಣಿಯೂ ಅಂದುಕೊಂಡಿರಲಿಲ್ಲ. ಅಂಥದ್ದರಲ್ಲಿ ಇದೀಗ ಪ್ರಮಾಣ ವಚನ ಸಮಾರಂಭದಲ್ಲೂ ವಿಶೇಷ ಎನ್ನಿಸುವಷ್ಟರ ಮಟ್ಟಿಗೆ ವಿಜಯ್ ಗಮನ ಸೆಳೆದಿದ್ದಾರೆ.
ಕಾಂಗ್ರೆಸ್, ಮುಸ್ಲಿಂ ಲೀಗ್ ಇನ್ನಿತರ ಸೆಕ್ಯುಲರ್ ಪಕ್ಷಗಳೊಂದಿಗೆ ಸೇರಿ ವಿಜಯ್ ಮೈತ್ರಿ ಸರ್ಕಾರ ರಚಿಸಿದರೂ ಪ್ರಮಾಣ ವಚನ ಸಮಾರಂಭದಲ್ಲೇ ವಂದೇ ಮಾತರಂ ಗೀತೆಯನ್ನು ಸಂಪೂರ್ಣ ಹಾಡಿಸುವ ಮೂಲಕ ಇಡೀ ದೇಶಕ್ಕೆ ಹೊಸ ಸಂದೇಶ ನೀಡಿದ್ದಾರೆ. ಇತ್ತೀಚೆಗಷ್ಟೇ ಕೇಂದ್ರ ಬಿಜೆಪಿ ಸರ್ಕಾರ ಸ್ವಾತಂತ್ರ್ಯ ಕಾಲದಲ್ಲಿ ಜನರನ್ನು ಒಂದುಗೂಡಿಸಿದ್ದ ವಂದೇ ಮಾತರಂ ಗೀತೆಗೆ ರಾಷ್ಟ್ರಗೀತೆ ಜನಗಣ ಮನ ಗೀತೆಯಷ್ಟೇ ಪ್ರಾಮುಖ್ಯತೆ ಕೊಡಬೇಕೆಂದು ಕಾನೂನು ಆದೇಶ ಮಾಡಿತ್ತು. ಆದರೆ ಸೆಕ್ಯುಲರ್, ತುಷ್ಟೀಕರಣದ ರಾಜಕೀಯದ ಕಾರಣಕ್ಕೆ ಬಿಜೆಪಿ ಸರ್ಕಾರದ ನಡೆಗೆ ಕಾಂಗ್ರೆಸ್ ಟೀಕೆ ಮಾಡಿತ್ತು.


ಆದರೆ ಗೀತೆಯನ್ನು ವಿರೋಧಿಸಿದ್ದ ರಾಹುಲ್ ಗಾಂಧಿ ಎದುರಲ್ಲೇ ಇದೀಗ ವಂದೇ ಮಾತರಂ ಗೀತೆಯನ್ನು ವಿಜಯ್ ತನ್ನ ಪ್ರಮಾಣವಚನ ಸಮಾರಂಭದಲ್ಲಿ ಹಾಡಿಸಿ ಗಮನ ಸೆಳೆದಿದ್ದಾರೆ. ಪೂರ್ಣ ಗೀತೆ ಹಾಡಿಸಿದ್ದಲ್ಲದೆ, ರಾಹುಲ್ ಸೇರಿದಂತೆ ಎಲ್ಲ ಸೆಕ್ಯುಲರ್ ನಾಯಕರೂ ಗೀತೆಗೆ ಎದ್ದು ನಿಂತು ಗೌರವ ಸೂಚಿಸುವಂತೆ ಮಾಡಿಸಿದ್ದಾರೆ. ವಿಶೇಷ ಅಂದರೆ, ನಿನ್ನೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಪ್ರಮಾಣ ವಚನ ಸ್ವೀಕರಿಸಿದರೂ ವಂದೇ ಮಾತರಂ ಪೂರ್ಣ ಗೀತೆಗೆ ಆದ್ಯತೆ ಕೊಟ್ಟಿರಲಿಲ್ಲ. ಬಂಗಾಳದ್ದೇ ಆದ ಬಂಕಿಮಚಂದ್ರ ಚಟರ್ಜಿ ವಂದೇ ಮಾತರಂ ಗೀತೆಯನ್ನು ರಚಿಸಿದ್ದರೂ, ರಾಷ್ಟ್ರಗೀತೆಯ ಮಾನ್ಯತೆ ಕೊಟ್ಟಿದ್ದ ಬಿಜೆಪಿ ಅವರದೇ ನಾಡಿನಲ್ಲಿ ಹೆಚ್ಚು ಮಹತ್ವ ಕೊಟ್ಟಿರಲಿಲ್ಲ.
ಸೆಕ್ಯುಲರ್ ಕಾರಣಕ್ಕೆ ಬಿಜೆಪಿ ಮತ್ತು ಅದರ ಸಿದ್ಧಾಂತವನ್ನು ವಿರೋಧಿಸುತ್ತ ಇದೀಗ ಸೆಕ್ಯುಲರ್ ಪಕ್ಷಗಳ ಜೊತೆಗೇ ಸೇರಿಕೊಂಡು ಸರ್ಕಾರ ರಚಿಸಿದ ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಬಿಜೆಪಿಗೆ ಠಕ್ಕರ್ ನೀಡಿ ರಾಜ್ಯಕ್ಕೆ ಹೊಸ ಸಂದೇಶ ನೀಡಿರುವುದು ವಿಶೇಷ. ತನ್ನ ಭಾಷಣದಲ್ಲಿಯೂ ಸೆಕ್ಯುಲರ್ ಆಡಳಿತದ ಹೊಸ ಅನುಭವ ಜನರಿಗೆ ನೀಡಲಿದ್ದೇನೆ ಎನ್ನುವ ವಾಗ್ದಾನವನ್ನೂ ವಿಜಯ್ ಮಾಡಿದ್ದಾರೆ.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am