ಬ್ರೇಕಿಂಗ್ ನ್ಯೂಸ್
11-05-26 02:14 pm HK News Staffer ದೇಶ - ವಿದೇಶ
ಇಸ್ಲಮಾಬಾದ್, ಮೇ 11: ಅಫ್ಘನಿಸ್ತಾನ ಗಡಿಭಾಗ ವಾಯುವ್ಯ ಪಾಕಿಸ್ತಾನದಲ್ಲಿ ಪೊಲೀಸ್ ಚೆಕ್ಪಾಯಿಂಟ್ ಒಂದರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 21 ಸೈನಿಕರು ಸಾವನ್ನಪ್ಪಿದ್ದು ಹಲವಾರು ಜನರು ಗಾಯಗೊಂಡಿದ್ದಾರೆ. ದಾಳಿಕೋರರು ಮೊದಲು ಪೊಲೀಸ್ ಚೆಕ್ ಪಾಯಿಂಟ್ನಲ್ಲಿ ಕಾರ್ ಬಾಂಬ್ ಸ್ಫೋಟಿಸಿದ್ದು ಬಳಿಕ ಗುಂಡಿನ ದಾಳಿ ನಡೆಸಿದರು. ದಾಳಿಯ ನಂತರ, ಪೊಲೀಸರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ದೋಚಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಇತ್ತೇಹಾದ್- ಉಲ್- ಮುಜಾಹಿದ್ದೀನ್ ಪಾಕಿಸ್ತಾನ್ ಎಂಬ ಹೊಸ ಉಗ್ರವಾದಿ ಸಂಘಟನೆಯು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಖೈಬರ್ ಪಖ್ತುಂಖ್ವಾ ಜಿಲ್ಲೆಯ ಬನ್ನು ಎಂಬಲ್ಲಿ ಭಾನುವಾರ ನಸುಕಿನಲ್ಲಿ ಈ ದಾಳಿ ನಡೆದಿದೆ. ಬನ್ನು ಅಫ್ಘಾನಿಸ್ತಾನದ ಗಡಿಯಲ್ಲಿರುವ ಪಾಕಿಸ್ತಾನಕ್ಕೆ ಸೇರಿದ ಪ್ರದೇಶವಾಗಿದೆ. ದಾಳಿಕೋರರು ತಮ್ಮ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದ ನಂತರ ಗಡಿಯನ್ನು ದಾಟಿ ಅಫ್ಘಾನಿಸ್ತಾನಕ್ಕೆ ಪಲಾಯನ ಮಾಡಿರಬಹುದು ಎಂದು ಶಂಕಿಸಲಾಗಿದೆ. ಈ ಪ್ರದೇಶವನ್ನು ಉಗ್ರರ ಭದ್ರಕೋಟೆ ಎಂದು ಪರಿಗಣಿಸಲಾಗಿದ್ದು, ಪೊಲೀಸ್, ಮಿಲಿಟರಿ ಮತ್ತು ಅರೆಸೈನಿಕ ಪಡೆಗಳ ಮೇಲೆ ಆಗಿಂದಾಗ್ಗೆ ದಾಳಿ ನಡೆಸುತ್ತಿದ್ದಾರೆ.
ಬನ್ನು ಪೊಲೀಸ್ ಅಧಿಕಾರಿ ಜಾಹಿದ್ ಖಾನ್ ಮಾತನಾಡಿ, ಭದ್ರತಾ ತಪಾಸಣಾ ಕೇಂದ್ರದ ಬಳಿ ಆತ್ಮಾಹುತಿ ಬಾಂಬರ್ ಇದ್ದ ಕಾರು ಸ್ಫೋಟವಾಗಿದೆ. ಬಳಿಕ ಹಲವಾರು ದಾಳಿಕೋರರು ಗುಂಡಿನ ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಹಲವಾರು ಸ್ಫೋಟಗಳು ಕೇಳಿಬಂದವು. ಸ್ಫೋಟವು ಎಷ್ಟು ಪ್ರಬಲವಾಗಿತ್ತೆಂದರೆ ಚೆಕ್ಪಾಯಿಂಟ್ ಕಟ್ಟಡ ಪೂರ್ತಿ ಕುಸಿದು ಬಿದ್ದಿದೆ ಎಂದು ಹೇಳಿದರು.
ಸ್ಫೋಟಕಗಳಿಂದ ತುಂಬಿದ ವಾಹನದಿಂದ ಪೊಲೀಸ್ ತಪಾಸಣಾ ಕೇಂದ್ರದ ಮೇಲೆ ಡಿಕ್ಕಿ ಪಡಿಸಲಾಗಿದೆ. ಪ್ರಬಲ ಸ್ಫೋಟದ ನಂತರ, ಪೊಲೀಸ್ ತಪಾಸಣಾ ಕೇಂದ್ರದ ಮೇಲೆ ದಾಳಿ ನಡೆಸಲಾಯಿತು. ದಾಳಿಯಲ್ಲಿ ಕನಿಷ್ಠ 21 ಸೈನಿಕರು ಸಾವನ್ನಪ್ಪಿದ್ದಾರೆ. ದಾಳಿಕೋರರು ಡ್ರೋನ್ಗಳನ್ನು ಸಹ ಬಳಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಫೋಟವು ಹತ್ತಿರದ ವಸತಿ ಪ್ರದೇಶಗಳಿಗೆ ವ್ಯಾಪಕ ಹಾನಿಯನ್ನುಂಟು ಮಾಡಿದ್ದು ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಿಂದ ರಕ್ಷಣಾ ಸಂಸ್ಥೆಗಳು ಮತ್ತು ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಬನ್ನುವಿನ ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm