ಬ್ರೇಕಿಂಗ್ ನ್ಯೂಸ್
11-05-26 02:14 pm HK News Staffer ದೇಶ - ವಿದೇಶ
ಇಸ್ಲಮಾಬಾದ್, ಮೇ 11: ಅಫ್ಘನಿಸ್ತಾನ ಗಡಿಭಾಗ ವಾಯುವ್ಯ ಪಾಕಿಸ್ತಾನದಲ್ಲಿ ಪೊಲೀಸ್ ಚೆಕ್ಪಾಯಿಂಟ್ ಒಂದರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 21 ಸೈನಿಕರು ಸಾವನ್ನಪ್ಪಿದ್ದು ಹಲವಾರು ಜನರು ಗಾಯಗೊಂಡಿದ್ದಾರೆ. ದಾಳಿಕೋರರು ಮೊದಲು ಪೊಲೀಸ್ ಚೆಕ್ ಪಾಯಿಂಟ್ನಲ್ಲಿ ಕಾರ್ ಬಾಂಬ್ ಸ್ಫೋಟಿಸಿದ್ದು ಬಳಿಕ ಗುಂಡಿನ ದಾಳಿ ನಡೆಸಿದರು. ದಾಳಿಯ ನಂತರ, ಪೊಲೀಸರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ದೋಚಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಇತ್ತೇಹಾದ್- ಉಲ್- ಮುಜಾಹಿದ್ದೀನ್ ಪಾಕಿಸ್ತಾನ್ ಎಂಬ ಹೊಸ ಉಗ್ರವಾದಿ ಸಂಘಟನೆಯು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಖೈಬರ್ ಪಖ್ತುಂಖ್ವಾ ಜಿಲ್ಲೆಯ ಬನ್ನು ಎಂಬಲ್ಲಿ ಭಾನುವಾರ ನಸುಕಿನಲ್ಲಿ ಈ ದಾಳಿ ನಡೆದಿದೆ. ಬನ್ನು ಅಫ್ಘಾನಿಸ್ತಾನದ ಗಡಿಯಲ್ಲಿರುವ ಪಾಕಿಸ್ತಾನಕ್ಕೆ ಸೇರಿದ ಪ್ರದೇಶವಾಗಿದೆ. ದಾಳಿಕೋರರು ತಮ್ಮ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದ ನಂತರ ಗಡಿಯನ್ನು ದಾಟಿ ಅಫ್ಘಾನಿಸ್ತಾನಕ್ಕೆ ಪಲಾಯನ ಮಾಡಿರಬಹುದು ಎಂದು ಶಂಕಿಸಲಾಗಿದೆ. ಈ ಪ್ರದೇಶವನ್ನು ಉಗ್ರರ ಭದ್ರಕೋಟೆ ಎಂದು ಪರಿಗಣಿಸಲಾಗಿದ್ದು, ಪೊಲೀಸ್, ಮಿಲಿಟರಿ ಮತ್ತು ಅರೆಸೈನಿಕ ಪಡೆಗಳ ಮೇಲೆ ಆಗಿಂದಾಗ್ಗೆ ದಾಳಿ ನಡೆಸುತ್ತಿದ್ದಾರೆ.
ಬನ್ನು ಪೊಲೀಸ್ ಅಧಿಕಾರಿ ಜಾಹಿದ್ ಖಾನ್ ಮಾತನಾಡಿ, ಭದ್ರತಾ ತಪಾಸಣಾ ಕೇಂದ್ರದ ಬಳಿ ಆತ್ಮಾಹುತಿ ಬಾಂಬರ್ ಇದ್ದ ಕಾರು ಸ್ಫೋಟವಾಗಿದೆ. ಬಳಿಕ ಹಲವಾರು ದಾಳಿಕೋರರು ಗುಂಡಿನ ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಹಲವಾರು ಸ್ಫೋಟಗಳು ಕೇಳಿಬಂದವು. ಸ್ಫೋಟವು ಎಷ್ಟು ಪ್ರಬಲವಾಗಿತ್ತೆಂದರೆ ಚೆಕ್ಪಾಯಿಂಟ್ ಕಟ್ಟಡ ಪೂರ್ತಿ ಕುಸಿದು ಬಿದ್ದಿದೆ ಎಂದು ಹೇಳಿದರು.
ಸ್ಫೋಟಕಗಳಿಂದ ತುಂಬಿದ ವಾಹನದಿಂದ ಪೊಲೀಸ್ ತಪಾಸಣಾ ಕೇಂದ್ರದ ಮೇಲೆ ಡಿಕ್ಕಿ ಪಡಿಸಲಾಗಿದೆ. ಪ್ರಬಲ ಸ್ಫೋಟದ ನಂತರ, ಪೊಲೀಸ್ ತಪಾಸಣಾ ಕೇಂದ್ರದ ಮೇಲೆ ದಾಳಿ ನಡೆಸಲಾಯಿತು. ದಾಳಿಯಲ್ಲಿ ಕನಿಷ್ಠ 21 ಸೈನಿಕರು ಸಾವನ್ನಪ್ಪಿದ್ದಾರೆ. ದಾಳಿಕೋರರು ಡ್ರೋನ್ಗಳನ್ನು ಸಹ ಬಳಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಫೋಟವು ಹತ್ತಿರದ ವಸತಿ ಪ್ರದೇಶಗಳಿಗೆ ವ್ಯಾಪಕ ಹಾನಿಯನ್ನುಂಟು ಮಾಡಿದ್ದು ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಿಂದ ರಕ್ಷಣಾ ಸಂಸ್ಥೆಗಳು ಮತ್ತು ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಬನ್ನುವಿನ ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm