ಬ್ರೇಕಿಂಗ್ ನ್ಯೂಸ್
11-05-26 06:20 pm HK News Staffer ದೇಶ - ವಿದೇಶ
ಕಾರವಾರ, ಮೇ 11: ಅರಬ್ಬಿ ಸಮುದ್ರದಲ್ಲಿ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಕಾರವಾರದ ಪರ್ಷಿಯನ್ ಮಾದರಿಯ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆಯಾಗಿದೆ. ಬೋಟ್ನಲ್ಲಿದ್ದ 22 ಮೀನುಗಾರರನ್ನು ಇತರ ಬೋಟ್ಗಳ ಮೀನುಗಾರರು ರಕ್ಷಿಸುವ ಮೂಲಕ ಭೀಕರ ದುರಂತವೊಂದು ತಪ್ಪಿದಂತಾಗಿದೆ.
ಕಾರವಾರ ತಾಲೂಕಿನ ಮುದಗಾ ಬಂದರಿನಿಂದ ಸುಮಾರು ಒಂದು ವಾರದ ಹಿಂದೆ ದಿನೇಶ್ ಕಾಂಚನ್ ಅವರಿಗೆ ಸೇರಿದ ‘ಶ್ರೀ ಅಮ್ಮ’ ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಗೋವಾದ ಬೇತುಲ್ ಸಮುದ್ರ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ತಾಂತ್ರಿಕ ದೋಷ ಉಂಟಾಗಿ ಬೋಟ್ಗೆ ನೀರು ನುಗ್ಗಿದೆ ಎನ್ನಲಾಗಿದೆ.
ಕ್ಷಣಾರ್ಧದಲ್ಲೇ ಬೋಟ್ ಸಮುದ್ರದ ಆಳಕ್ಕೆ ಮುಳುಗಿದರೂ, ಸಮೀಪದಲ್ಲಿದ್ದ ಇತರ ಮೀನುಗಾರಿಕಾ ಬೋಟ್ಗಳ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ 22 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟ ಎಲ್ಲರೂ ಕಾರವಾರ ಹಾಗೂ ಉತ್ತರ ಕನ್ನಡ ಜಿಲ್ಲೆಯವರು ಎಂದು ತಿಳಿದುಬಂದಿದೆ.
ಈ ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಾರಿಕಾ ಬಲೆಗಳು, ಇಂಧನ ಹಾಗೂ ಸಂಗ್ರಹಿಸಿದ್ದ ಮೀನು ಸೇರಿ ಸುಮಾರು 1.5 ರಿಂದ 2 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಸದ್ಯ ಎಲ್ಲ ಮೀನುಗಾರರು ಸುರಕ್ಷಿತವಾಗಿ ದಡ ಸೇರಿದ್ದು, ಸ್ಥಳೀಯ ಮೀನುಗಾರ ಸಮುದಾಯದಲ್ಲಿ ಆತಂಕದ ಕ್ಷಣಗಳು ದೂರವಾದಂತಾಗಿದೆ.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 06:20 pm
HK News Staffer
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm