ಬ್ರೇಕಿಂಗ್ ನ್ಯೂಸ್
11-05-26 06:20 pm HK News Staffer ದೇಶ - ವಿದೇಶ
ಕಾರವಾರ, ಮೇ 11: ಅರಬ್ಬಿ ಸಮುದ್ರದಲ್ಲಿ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಕಾರವಾರದ ಪರ್ಷಿಯನ್ ಮಾದರಿಯ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆಯಾಗಿದೆ. ಬೋಟ್ನಲ್ಲಿದ್ದ 22 ಮೀನುಗಾರರನ್ನು ಇತರ ಬೋಟ್ಗಳ ಮೀನುಗಾರರು ರಕ್ಷಿಸುವ ಮೂಲಕ ಭೀಕರ ದುರಂತವೊಂದು ತಪ್ಪಿದಂತಾಗಿದೆ.
ಕಾರವಾರ ತಾಲೂಕಿನ ಮುದಗಾ ಬಂದರಿನಿಂದ ಸುಮಾರು ಒಂದು ವಾರದ ಹಿಂದೆ ದಿನೇಶ್ ಕಾಂಚನ್ ಅವರಿಗೆ ಸೇರಿದ ‘ಶ್ರೀ ಅಮ್ಮ’ ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಗೋವಾದ ಬೇತುಲ್ ಸಮುದ್ರ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ತಾಂತ್ರಿಕ ದೋಷ ಉಂಟಾಗಿ ಬೋಟ್ಗೆ ನೀರು ನುಗ್ಗಿದೆ ಎನ್ನಲಾಗಿದೆ.
ಕ್ಷಣಾರ್ಧದಲ್ಲೇ ಬೋಟ್ ಸಮುದ್ರದ ಆಳಕ್ಕೆ ಮುಳುಗಿದರೂ, ಸಮೀಪದಲ್ಲಿದ್ದ ಇತರ ಮೀನುಗಾರಿಕಾ ಬೋಟ್ಗಳ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ 22 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟ ಎಲ್ಲರೂ ಕಾರವಾರ ಹಾಗೂ ಉತ್ತರ ಕನ್ನಡ ಜಿಲ್ಲೆಯವರು ಎಂದು ತಿಳಿದುಬಂದಿದೆ.
ಈ ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಾರಿಕಾ ಬಲೆಗಳು, ಇಂಧನ ಹಾಗೂ ಸಂಗ್ರಹಿಸಿದ್ದ ಮೀನು ಸೇರಿ ಸುಮಾರು 1.5 ರಿಂದ 2 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಸದ್ಯ ಎಲ್ಲ ಮೀನುಗಾರರು ಸುರಕ್ಷಿತವಾಗಿ ದಡ ಸೇರಿದ್ದು, ಸ್ಥಳೀಯ ಮೀನುಗಾರ ಸಮುದಾಯದಲ್ಲಿ ಆತಂಕದ ಕ್ಷಣಗಳು ದೂರವಾದಂತಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm