ಬ್ರೇಕಿಂಗ್ ನ್ಯೂಸ್
11-05-26 08:05 pm HK News Staffer ದೇಶ - ವಿದೇಶ
ಹೈದರಾಬಾದ್, ಮೇ 11: ಅಮೆರಿಕ-ಇರಾನ್ ಸಂಘರ್ಷದಿಂದ ಜಾಗತಿಕ ತೈಲ ಮಾರುಕಟ್ಟೆ ಹಾಗೂ ಆರ್ಥಿಕ ವ್ಯವಸ್ಥೆಯ ಮೇಲೆ ಭಾರೀ ಪರಿಣಾಮ ಬೀಳುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ದೇಶದ ಜನತೆಗೆ ಮಹತ್ವದ ಸಂದೇಶ ನೀಡಿದ್ದಾರೆ. ಇಂಧನ ಬಳಕೆಯನ್ನು ಕಡಿಮೆ ಮಾಡುವುದು, ಸಾರ್ವಜನಿಕ ಸಾರಿಗೆ ಬಳಸುವುದು ಹಾಗೂ ಒಂದು ವರ್ಷ ಚಿನ್ನ ಖರೀದಿ ಮಾಡದಂತೆ ಮನವಿ ಮಾಡಿದ್ದಾರೆ.
ತೆಲಂಗಾಣದ ಸಿಕಂದರಾಬಾದ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ದೇಶ ಎದುರಿಸುತ್ತಿರುವ ಜಾಗತಿಕ ಆರ್ಥಿಕ ಸವಾಲುಗಳ ನಡುವೆ ಪ್ರತಿಯೊಬ್ಬ ನಾಗರಿಕರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
ಇಂಧನ ಉಳಿತಾಯಕ್ಕೆ ಜನತೆಗೆ ಮೋದಿ ಸಲಹೆಗಳು;
ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆ ಸಾಧ್ಯತೆ:
ಕಳೆದ ನಾಲ್ಕು ವರ್ಷದಲ್ಲೇ ಮೊದಲ ಬಾರಿಗೆ ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಅತಿದೊಡ್ಡ ಪರಿಷ್ಕರಣೆ ಆಗಲಿದೆ. ಮಧ್ಯಪ್ರಾಚ್ಯ ಸಂಘರ್ಷದ ಬಳಿಕ ಇದೇ ಮೊದಲ ಬಾರಿಗೆ ಮೇ 15 ರೊಳಗೆ ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳ ಆಗುವ ಸಾಧ್ಯತೆ ಇದೆ. ತೈಲ ಮಾರುಕಟ್ಟೆಯ ಕಂಪನಿಗಳಿಗೆ ನಷ್ಟ ಸರಿದೂಗಿಸಲು ಕಷ್ಟವಾಗುತ್ತಿರುವುದರಿಂದ ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ.
ವರದಿಯೊಂದರ ಪ್ರಕಾರ, ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ,ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು 30,000 ಕೋಟಿ ರೂಪಾಯಿಯಷ್ಟು ನಷ್ಟವನ್ನು ಪ್ರತಿ ತಿಂಗಳಿಗೆ ಅನುಭವಿಸುತ್ತಿವೆ ಎನ್ನಲಾಗಿದೆ.
ಅನುಮತಿ ಸಿಕ್ಕರೆ, ಪೆಟ್ರೋಲ್ ಡೀಸೆಲ್ ನ ಪ್ರತೀ ಲೀಟರ್ ದರ 4-5 ರೂಪಾಗಿ ಹೆಚ್ಚಳ ಆಗುವ ಸಾಧ್ಯತೆ ಇದ್ದು, ಗೃಹಬಳಕೆ ಎಲ್ ಪಿಜಿ ದರ 40-50 ರೂ. ಹೆಚ್ಚಳ ಆಗುವ ಸಾಧ್ಯತೆ ಇದೆ.
ಮುಂದಿನ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯಾಗಲಿದೆಯೇ ಎನ್ನುವುದು ಈಗ ಎದುರಾಗಿರುವ ಯಕ್ಷ ಪ್ರಶ್ನೆಯಾಗಿದೆ. ಇರಾನ್ - ಅಮೆರಿಕದ ನಡುವೆ ದೀರ್ಘಕಾಲದ ಯುದ್ಧವು ಭೌಗೋಳಿಕವಾಗಿ ಅನಿಶ್ಚಿತತೆ ಸೃಷ್ಟಿ ಮಾಡಿದೆ. ಹೀಗಾಗಿ, ಚಿನ್ನದ ಮೇಲೆ ಹೂಡಿಕೆ ಹೆಚ್ಚಾಗುತ್ತಿದ್ದು. ಸಹಜವಾಗಿಯೇ ಮುಂದಿನ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ. ಆದರೆ ಈ ವಿಚಾರದಲ್ಲಿ ನಿಖರೆ ಇಲ್ಲ.
ಮನೆಯಿಂದ ಕೆಲಸಕ್ಕೆ ಒತ್ತು ಕೊಡಿ ಎಂದಿದ್ಯಾಕೆ ಮೋದಿ?
ಮೊದಲು, ಮನೆಯಿಂದ ಕೆಲಸ ಮಾಡುವ ಪದ್ಧತಿಗೆ ಮತ್ತೆ ಒತ್ತು ನೀಡಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕೋವಿಡ್ ಕಾಲದಲ್ಲಿ ಹೇಗೆ ಆನ್ಲೈನ್ ಸಭೆಗಳು, ರಿಮೋಟ್ ಕೆಲಸ ಸಾಮಾನ್ಯವಾಗಿದ್ದವೋ, ಅದನ್ನೇ ಮತ್ತೆ ಸಾಧ್ಯವಾದಷ್ಟು ಬಳಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಕಚೇರಿ ಹೋಗುವ ಪ್ರಯಾಣ ಕಡಿಮೆಯಾದರೆ ಪೆಟ್ರೋಲ್-ಡೀಸೆಲ್ ಬಳಕೆ ಇಳಿಯುತ್ತದೆ. ನಗರ ಪ್ರದೇಶಗಳಲ್ಲಿ ದಿನನಿತ್ಯ ತೈಲ ಬಳಕೆಯ ದೊಡ್ಡ ಭಾಗವೇ ಕಚೇರಿ-ಪ್ರಯಾಣಕ್ಕೆ ಹೋಗುತ್ತದೆ. WFH ಮೂಲಕ ಕಚೇರಿ ಕಟ್ಟಡಗಳಲ್ಲಿ ಹವಾನಿಯಂತ್ರಣ, ಬೆಳಕು, ಉಪಕರಣಗಳ ಬಳಕೆ ಕೂಡ ಕಡಿಮೆಯಾಗುತ್ತದೆ. ಇದರಿಂದ ವಿದ್ಯುತ್ ಬೇಡಿಕೆಯೂ ಸ್ವಲ್ಪ ಮಟ್ಟಿಗೆ ಇಳಿಯಬಹುದು ಎಂದು ಸಲಹೆ ನೀಡಿದ್ದಾರೆ.
ವಿದೇಶಿ ಪ್ರವಾಸ ತಪ್ಪಿಸಿ ಎಂದಿದ್ದೇಕೆ?
ಇದೇ ವೇಳೆ, ಕನಿಷ್ಠ 1 ವರ್ಷದವರೆಗೆ ವಿದೇಶ ಪ್ರವಾಸಗಳನ್ನು, ವಿಶೇಷವಾಗಿ ವಿದೇಶ ರಜೆ ಹಾಗೂ ಗಮ್ಯಸ್ಥಾನ ವಿವಾಹಗಳನ್ನು ದೂರವಿರಲು ಅವರು ಕೋರಿದ್ದಾರೆ. ವಿದೇಶಕ್ಕೆ ಹೋಗುವ ಪ್ರತಿಯೊಂದು ಪ್ರಯಾಣವೂ ಡಾಲರ್ ರೂಪದಲ್ಲಿ ಹಣ ಹೊರಹರಿವಿಗೆ ಕಾರಣವಾಗುತ್ತದೆ. ಈಗಾಗಲೇ ಜಾಗತಿಕ ಅನಿಶ್ಚಿತತೆಯಿಂದಾಗಿ ಭಾರತದ ವಿದೇಶಿ ವಿನಿಮಯ ಸಂಗ್ರಹದ ಮೇಲೆ ಒತ್ತಡ ಹೆಚ್ಚಾಗಿದೆ. ಕಳೆದ 10 ವಾರಗಳಲ್ಲಿ ಸುಮಾರು 1 ಲಕ್ಷ ಕೋಟಿ ರೂ. ಹೊರಹೋಗಿದೆ ಎಂದು ವರದಿ ಬಂದಿದೆ. ಇಂತಹ ಸಮಯದಲ್ಲಿ ವಿದೇಶ ಪ್ರವಾಸ ಕಡಿಮೆ ಮಾಡಿದರೆ, ದೇಶದ ವಿದೇಶಿ ವಿನಿಮಯವನ್ನು ಉಳಿಸಲು ಸಹಾಯವಾಗುತ್ತದೆ.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm