ಬ್ರೇಕಿಂಗ್ ನ್ಯೂಸ್
12-05-26 08:15 pm HK News Desk ದೇಶ - ವಿದೇಶ
ಚೆನ್ನೈ, ಮೇ 12: ಇತ್ತ ಸಿಎಂ ವಿಜಯ್ ಜೋಸೆಫ್ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಿದ್ಧತೆ ನಡೆಸುತ್ತಿರುವಾಗಲೇ ತಮಿಳುನಾಡು ರಾಜಕೀಯ ರೋಚಕ ತಿರುವು ಪಡೆದಿದ್ದು, ಎಸ್ಪಿ ವೇಲುಮಣಿ ಮತ್ತು ಸಿವಿ ಷಣ್ಮುಗಂ ನೇತೃತ್ವದ ಎಐಎಡಿಎಂಕೆಯ ಒಂದು ಬಣ ಟಿವಿಕೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದೆ.
ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದಲ್ಲಿ ಎಐಎಡಿಎಂಕೆ ಪಕ್ಷವು ಡಿಎಂಕೆ ಜೊತೆಗೆ ಮೈತ್ರಿಗೆ ತೆರೆಮರೆಯ ಹುನ್ನಾರ ನಡೆಸುತ್ತಿರುವಾಗಲೇ ಈ ನಿರ್ಧಾರದಿಂದ ಸಿಡಿದು ನಿಂತ ಒಂದು ಬಣದ ನಾಯಕರು ಪಕ್ಷವನ್ನೇ ಹೋಳು ಮಾಡಿದ್ದಾರೆ.
ಎಸ್ಪಿ ವೇಲುಮಣಿ ಮತ್ತು ಸಿವಿ ಷಣ್ಮುಗಂ ಬಣದ ನಾಯಕರು ಇಂದು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿ ಮಾಡಿ, ಅವರ ನೇತೃತ್ವದ ಸರ್ಕಾರಕ್ಕೆ ತಮ್ಮ ಬೆಂಬಲ ಘೋಷಿಸಿದ್ದಾರೆ. ಷಣ್ಮುಗಂ ಬಣದಲ್ಲಿ 30 ಶಾಸಕರಿದ್ದಾರೆ ಎನ್ನಲಾಗಿದೆ.

ಪಕ್ಷವನ್ನು ಉಳಿಸಲು ಈ ನಿರ್ಧಾರ
ಪಕ್ಷದ ಭವಿಷ್ಯದ ದೃಷ್ಟಿಯಿಂದ ನಾವು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರಿಗೆ ಕೌನ್ಸಿಲ್ ಸಭೆ ಕರೆಯುವಂತೆ ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ. ಪಕ್ಷದ ಉಳಿವಿನ ದೃಷ್ಟಿಯಿಂದ ಈ ನಡೆ ಅನಿವಾರ್ಯ. ನಾವು ಡಿಎಂಕೆಗೆ ವಿರುದ್ಧವಾಗಿ ಜಯಲಲಿತಾ ನೇತೃತ್ವದಲ್ಲಿ ಪಕ್ಷವನ್ನು ಸ್ಥಾಪಿಸಿದ್ದೇವೆ. 53 ವರ್ಷಗಳ ಕಾಲ ನಮ್ಮ ರಾಜಕೀಯ ಅದಕ್ಕೆ ವಿರುದ್ಧವಾಗಿತ್ತು. ನಾವು ಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಂಡರೆ ಎಐಎಡಿಎಂಕೆ ಅಸ್ತಿತ್ವದಲ್ಲೇ ಇರಲ್ಲ ಎಂದಿದ್ದಾರೆ.
ಚುನಾವಣೆಯ ನಂತರ ನಾವು ಯಾವುದೇ ಮೈತ್ರಿ ಇಲ್ಲದೆ ನಿಲ್ಲುತ್ತೇವೆ. ನಮ್ಮ ಪಕ್ಷವನ್ನು ಬಲಪಡಿಸುವತ್ತ ನಮ್ಮ ಗಮನ ಇರಬೇಕು. ಎಐಎಡಿಎಂಕೆ ಶಾಸಕರಾಗಿ ಆಯ್ಕೆಯಾದವರು ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಟಿವಿಕೆಗೆ ತಮ್ಮ ಬೆಂಬಲ ನೀಡಲು ನಿರ್ಧರಿಸಿದ್ದಾರೆ ಎಂದು ವೇಲು ಮಣಿ ಮತ್ತು ಷಣ್ಮುಗಂ ತಿಳಿಸಿದ್ದಾರೆ. ಪಳನಿಸ್ವಾಮಿ ಪರವಾಗಿ 17 ಶಾಸಕರಿದ್ದರೆ, ವೇಲು ಮಣಿ ಪರವಾಗಿ 30 ಶಾಸಕರಿದ್ದಾರೆ ಎನ್ನಲಾಗುತ್ತಿದೆ. ವಿಜಯ್ ಸರ್ಕಾರ ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ ವೇಲು ಮಣಿ ನೇತೃತ್ವದಲ್ಲಿ ಶಾಸಕರು ವಿಜಯ್ ಪರ ನಿಲ್ಲುವ ಸಾಧ್ಯತೆಯಿದೆ. ರಾಜ್ಯಪಾಲರ ಸೂಚನೆಯಂತೆ ಸಿಎಂ ವಿಜಯ್ ಮೇ 13ರಂದು ಸದನದಲ್ಲಿ ವಿಶ್ವಾಸಮತ ಸಾಬೀತು ಮಾಡಬೇಕಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm