ಬ್ರೇಕಿಂಗ್ ನ್ಯೂಸ್
15-05-26 08:54 am HK News Staffer ದೇಶ - ವಿದೇಶ
ನವದೆಹಲಿ, ಮೇ 15: ಮಿತವ್ಯಯಕ್ಕೆ ಪ್ರಧಾನಿ ಮೋದಿ ಕರೆ ನೀಡಿದ ಎರಡು ದಿನದಲ್ಲೇ ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಘೋಷಣೆ ಮಾಡಿದ್ದು, ತಕ್ಷಣದಿಂದಲೇ ಹೊಸ ದರ ಜಾರಿಗೆ ಬರಲಿದೆ. ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 97.77 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ 87.67 ರೂ.ಗಳಿಂದ 90.67 ರೂ.ಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ಗೆ 3.27 ರೂಪಾಯಿ ಏರಿಕೆಯಾಗಿದ್ದು, ಡಿಸೇಲ್ ಬೆಲೆ ಲೀಟರ್ಗೆ 3.12 ರೂಪಾಯಿ ಏರಿಕೆಯಾಗಿದೆ. ಈ ಹಿಂದೆ ಪೆಟ್ರೋಲ್ ಬೆಲೆ 102.90 ರೂ. ಇತ್ತು. ಈಗ 106.17 ರೂ. ಆಗಿದೆ. ಡಿಸೇಲ್ ಬೆಲೆ 90.98 ರೂ. ಇತ್ತು. ಈಗ 94.10 ರೂ. ಆಗಿದೆ.
ಕೋಲ್ಕತ್ತಾದಲ್ಲಿ ಪೆಟ್ರೋಲ್ ಲೀಟರ್ಗೆ 3.29 ರೂ. ಹೆಚ್ಚಳವಾಗಿ 108.74 ರೂ.ಗೆ ಏರಿದೆ. ಡೀಸೆಲ್ ಲೀಟರ್ಗೆ 3.11 ರೂ.ಗಳಷ್ಟು ಏರಿಕೆಯಾಗಿ 95.13 ರೂ.ಗೆ ತಲುಪಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 3.14 ರೂ. ಏರಿಕೆಯಾಗಿ 106.68 ರೂ.ಗೆ ತಲುಪಿದೆ, ಡೀಸೆಲ್ ಬೆಲೆ ಲೀಟರ್ಗೆ 3.11 ರೂ. ಏರಿಕೆಯಾಗಿ 93.14 ರೂ.ಗೆ ತಲುಪಿದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 2.83 ರೂ. ಏರಿಕೆಯಾಗಿ 103.67 ರೂ.ಗೆ ತಲುಪಿದೆ ಮತ್ತು ಡೀಸೆಲ್ ದರ ಲೀಟರ್ಗೆ 2.86 ರೂ. ಏರಿಕೆಯಾಗಿ 95.25 ರೂ.ಗೆ ತಲುಪಿದೆ.
ಗಲ್ಫ್ ಯುದ್ಧ ಸಂದರ್ಭದಲ್ಲಿ ಕಚ್ಚಾ ತೈಲ ದರ ಏರಿದರೂ, ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರವು 2026 ರ ಮಾರ್ಚ್ 27 ರಂದು ಅವುಗಳ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 10 ರೂಪಾಯಿಗಳಷ್ಟು ಕಡಿತಗೊಳಿಸಿತ್ತು. ಇದರಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಿರಲಿಲ್ಲ. ಪಂಚ ರಾಜ್ಯಗಳ ಚುನಾವಣೆ ದೃಷ್ಟಿಯಿಂದ ಈ ರೀತಿ ಮಾಡಲಾಗಿತ್ತು ಎಂಬ ಮಾತುಗಳಿದ್ದರೂ, ಇದೀಗ ಚುನಾವಣೆ ಮುಗಿಯುತ್ತಿದ್ದಂತೆ ನಿರೀಕ್ಷೆ ಪ್ರಕಾರ ಬೆಲೆ ಹೆಚ್ಚಳವಾಗಿದೆ.
Amidst pressure on fuel supplies originating because of the conflict in West Asia and related concerns over under-recoveries, oil-marketing companies Friday (May 15, 2026) morning hiked prices of petrol and diesel by ₹3 across all variants.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm