ಬ್ರೇಕಿಂಗ್ ನ್ಯೂಸ್
19-05-26 01:06 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 19: ದೇಶಾದ್ಯಂತ ವಾಹನ ಸವಾರರಿಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೊಮ್ಮೆ ಬೆಲೆ ಏರಿಕೆಯ ಶಾಕ್ ನೀಡಿವೆ. ಕಳೆದ ಮೇ 15ರಂದು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಸುಮಾರು 3 ರೂ. ಹೆಚ್ಚಳವಾಗಿದ್ದ ಬೆನ್ನಲ್ಲೇ, ಇಂದು ಮತ್ತೆ ಪ್ರತಿ ಲೀಟರ್ಗೆ ಸರಾಸರಿ 90 ಪೈಸೆಯಿಂದ 96 ಪೈಸೆಯವರೆಗೆ ದರ ಏರಿಕೆಯಾಗಿದೆ. ಕೇವಲ ಐದು ದಿನಗಳ ಅಂತರದಲ್ಲಿ ಎರಡನೇ ಬಾರಿ ಇಂಧನ ದರ ಹೆಚ್ಚಳವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಹೊಸ ದರ ಎಷ್ಟು?
ಬೆಂಗಳೂರಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಪ್ರತಿ ಲೀಟರ್ಗೆ 94 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ಪೆಟ್ರೋಲ್ ದರ 106.17 ರೂ.ನಿಂದ 107.16 ರೂ.ಗೆ ಏರಿಕೆಯಾದರೆ, ಡೀಸೆಲ್ ದರ 94.10 ರೂ.ನಿಂದ 95.03 ರೂ.ಗೆ ತಲುಪಿದೆ.
ಸತತ ದರ ಏರಿಕೆಯಿಂದ ವಾಹನ ಸವಾರರು ಹಾಗೂ ಮಧ್ಯಮ ವರ್ಗದ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಜಾಗತಿಕ ಪರಿಸ್ಥಿತಿಯ ನೆಪದಲ್ಲಿ ಸರ್ಕಾರ ಜನರ ಮೇಲೆ ಹೆಚ್ಚುವರಿ ಹೊರೆ ಹಾಕಬಾರದು ಎಂದು ಆಗ್ರಹಿಸಿದ್ದಾರೆ.
ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ
ದೆಹಲಿ : ಪೆಟ್ರೋಲ್ 98.64 ರೂ., ಡೀಸೆಲ್ 91.58 ರೂ.
ಮುಂಬೈ : ಪೆಟ್ರೋಲ್ 107.59 ರೂ., ಡೀಸೆಲ್ 94.08 ರೂ.
ಕೋಲ್ಕತ್ತಾ : ಪೆಟ್ರೋಲ್ 109.70 ರೂ., ಡೀಸೆಲ್ 96.07 ರೂ.
ಚೆನ್ನೈ : ಪೆಟ್ರೋಲ್ 104.49 ರೂ., ಡೀಸೆಲ್ 96.11 ರೂ.
ಜನಜೀವನದ ಮೇಲೆ ನೇರ ಪರಿಣಾಮ
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಕೇವಲ ವಾಹನ ಸವಾರರನ್ನಷ್ಟೇ ಅಲ್ಲ, ಸಾಮಾನ್ಯ ಜನರ ದೈನಂದಿನ ಬದುಕಿನ ಮೇಲೂ ನೇರ ಪರಿಣಾಮ ಬೀರುತ್ತದೆ. ಸರಕು ಸಾಗಣೆ ವೆಚ್ಚ ಹೆಚ್ಚಾದಂತೆ ತರಕಾರಿ, ಆಹಾರ ಪದಾರ್ಥಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ಬಸ್, ಟ್ಯಾಕ್ಸಿ, ಆಟೋ ದರ ಹೆಚ್ಚಳದ ಆತಂಕವೂ ಎದುರಾಗಿದ್ದು, ಸಣ್ಣ ವ್ಯಾಪಾರಿಗಳು ಮತ್ತು ಸಾರಿಗೆ ಕ್ಷೇತ್ರದವರ ಮೇಲೆ ಹೆಚ್ಚುವರಿ ಒತ್ತಡ ಸೃಷ್ಟಿಯಾಗಿದೆ. ನಿರಂತರ ಇಂಧನ ದರ ಏರಿಕೆಯಿಂದ ಹಣದುಬ್ಬರ ಮತ್ತಷ್ಟು ಹೆಚ್ಚುವ ಭೀತಿ ವ್ಯಕ್ತವಾಗಿದೆ.
ಜಾಗತಿಕ ತೈಲ ಬಿಕ್ಕಟ್ಟು ಕಾರಣವೇ?
ಪಶ್ಚಿಮ ಏಷ್ಯಾದ ಯುದ್ಧ ಪರಿಸ್ಥಿತಿ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯನ್ನು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾದಂತೆ ತೈಲ ಪೂರೈಕೆ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇರುವುದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಅಸ್ಥಿರತೆ ಮುಂದುವರಿದಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm