ಬ್ರೇಕಿಂಗ್ ನ್ಯೂಸ್
05-01-21 05:38 pm Satish. N ದೇಶ - ವಿದೇಶ
ತಿರುವನಂತಪುರಂ, ಜ.5: ಕೇರಳದ ಕೊಟ್ಟಾಯಂ ಮತ್ತು ಆಲಪ್ಪುಳ ಜಿಲ್ಲೆಯಲ್ಲಿ ಹಕ್ಕಿಜ್ವರ ಕಂಡುಬಂದಿದ್ದು ಪಿಣರಾಯಿ ವಿಜಯನ್ ಸರಕಾರ ರಾಜ್ಯದಾದ್ಯಂತ ಹೈ ಅಲರ್ಟ್ ಘೋಷಿಸಿದೆ.
ಆಲಪ್ಪುಳ ಜಿಲ್ಲೆಯ ನೆಡುಮುಡಿ, ತೇಕ್ಕಡಿ, ಪಲ್ಲಿಪಾಡ್, ಕರುವಟ್ಟ ಪಂಚಾಯತ್ ಏರಿಯಾಗಳಲ್ಲಿ ಹಕ್ಕಿಜ್ವರದ ಲಕ್ಷಣ ಕಂಡುಬಂದಿದ್ದರೆ, ಕೊಟ್ಟಾಯಂ ಜಿಲ್ಲೆಯ ನೀಂದೂರ್ ಪಂಚಾಯತಿನ ಬಾತುಕೋಳಿ ಫಾರ್ಮ್ ನಲ್ಲಿ ಹಕ್ಕಿ ಜ್ವರ ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕೇರಳ ಸರಕಾರ ರಾಜ್ಯ ವಿಪತ್ತು ಎಂದು ಘೋಷಣೆ ಮಾಡಿದ್ದು ರಾಜ್ಯ ವ್ಯಾಪಿ ಕಟ್ಟೆಚ್ಚರಕ್ಕೆ ಸೂಚನೆ ನೀಡಿದೆ.

ಕೊಟ್ಟಾಯಂ ನೀಂದೂರಿನ ಫಾರ್ಮ್ ನಲ್ಲಿ ಸೋಮವಾರ ಒಂದೇ ದಿನ 1700 ಬಾತುಕೋಳಿಗಳು ಸತ್ತಿದ್ದವು. ಇದೇ ವೇಳೆ ಕುಟ್ಟನಾಡ್ ವಲಯದ 34 ಸಾವಿರ ಸೇರಿ ಒಟ್ಟು ಕೊಟ್ಟಾಯಂ ಜಿಲ್ಲೆಯಲ್ಲಿ 40 ಸಾವಿರ ಕೋಳಿಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ.

ಇದೇ ವೇಳೆ, ಆಲಪ್ಪುಳ ಜಿಲ್ಲೆಯ ಕುಟ್ಟನಾಡ್ ಮತ್ತು ಕಾರ್ತಿಕಪಳ್ಳಿ ತಾಲೂಕು ವ್ಯಾಪ್ತಿಯಲ್ಲಿ ಕೋಳಿ, ಬಾತುಕೋಳಿ, ಮೊಟ್ಟೆ, ಮಾಂಸಗಳ ಸೇವನೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಇದೇ ವೇಳೆ, ವಲಸೆ ಹಕ್ಕಿಗಳ ಬಗ್ಗೆ ನಿಗಾ ಇಡಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈಗಾಗ್ಲೇ ಉತ್ತರ ಭಾರತದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ಹಕ್ಕಿಜ್ವರದ ಬಾಧೆ ಕಂಡುಬಂದಿದೆ. ಹಿಮಾಚಲ ಪ್ರದೇಶದ ಪೊಂಗ್ ಧಾಮ್ ಸರೋವರ ವ್ಯಾಪ್ತಿಯ ಪಕ್ಷಿಧಾಮದಲ್ಲಿ 1800ಕ್ಕೂ ಹೆಚ್ಚು ವಲಸೆ ಹಕ್ಕಿಗಳು ಸತ್ತು ಬಿದ್ದಿರುವುದು ಪತ್ತೆಯಾಗಿತ್ತು.
ಹಕ್ಕಿಜ್ವರ ಸಾಂಕ್ರಾಮಿಕ ರೋಗವಾಗಿದ್ದು ಒಂದರಿಂದ ಇನ್ನೊಂದಕ್ಕೆ ಸುಲಭದಲ್ಲಿ ಹರಡುತ್ತದೆ. ಹಕ್ಕಿಗಳನ್ನು ಬರಿಗೈಯಲ್ಲಿ ಮುಟ್ಟುವುದರಿಂದ ಮತ್ತು ಅದರ ಎಂಜಲು ದೇಹಕ್ಕೆ ಸೋಕಿದರೆ ಮಾನವನಿಗೂ ವೈರಸ್ ಹರಡುತ್ತದೆ. ನ್ಯುಮೋನಿಯಾ ಮಾದರಿಯ ಜ್ವರ, ಕೆಮ್ಮು ಕಂಡುಬರುತ್ತದೆ. ಜ್ವರಕ್ಕೆ ಸಕಾಲದಲ್ಲಿ ಔಷಧಿ ಸಿಗದೇ ಇದ್ದರೆ ಮಾನವನಿಗೂ ವೈರಸ್ ಬಾಧೆ ಮಾರಣಾಂತಿಕ ಆಗುತ್ತದೆ.
The Pinarayi Vijayan-led Kerala government said on Tuesday that bird flu has been declared as a state-specific disaster adding that a high alert has been issued after the virus was found in some parts of Kottayam and Alappuzha districts.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm